‘ಲೋಕಸಭೆ ಚುನಾವಣೆಯಲ್ಲಿ, ನಿಖಿಲ್ ಕುಮಾರಸ್ವಾಮಿ ಅವರನ್ನು ಕೈ ಬಿಡಬೇಡಿ ಎಂದು ಮನವಿ ಮಾಡಿದ್ದೆವು. ಆದರೆ, ಒಂದು ವರ್ಗದ ಜನ ಸ್ವಾಭಿಮಾನಕ್ಕೆ ಮತ ಕೊಡಬೇಕು ಎಂದು ಸುಮಲತಾ ಅವರಿಗೆ ಮತ ನೀಡಿ ಗೆಲ್ಲಿಸಿದ್ದರು. ಜನರ ಸಮಸ್ಯೆ ಆಲಿಸಲು, ಪರಿಹರಿಸಲು ಸುಮಲತಾ ಅವರು ಮಂಡ್ಯದಲ್ಲೇ ಇರುತ್ತಾರೆ ಎಂದುಕೊಂಡಿದ್ದರು. ಆದರೆ, ರೈತರು ಸತ್ತರೂ ಇಲ್ಲ, ಬಾಯಿ ಬಡಿದುಕೊಂಡರೂ ಇಲ್ಲ; ಸಂಸದರನ್ನು ಹುಡುಕಬೇಕಾದ ಪರಿಸ್ಥಿತಿ ಇದೆ’ ಎಂದು ದೂರಿದರು.