<p><strong>ಮಳವಳ್ಳಿ</strong>: ಪಟ್ಟಣದ ಗಂಗಾ ಪರಮೇಶ್ವರಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮೈತ್ರಿಕೂಟ ಬೆಂಬಲಿತ ಎಂ.ರಘು ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಶಿವಕುಮಾರ್ ಆಯ್ಕೆಯಾದರು.</p>.<p>ಸಂಘದ ಸಭಾಂಗಣದಲ್ಲಿ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎಂ.ರಘು ಕುಮಾರ್ ಹಾಗೂ ಶ್ವೇತಾ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಶಿವಕುಮಾರ್ ಮಾತ್ರ ಉಮೇದುವಾರಿಕೆ ಸಲ್ಲಿಸಿದ್ದರು. ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶ್ವೇತಾ ಗೈರಾಗಿದ್ದರು. ಎಂ.ರಘು ಕುಮಾರ್ 7 ಮತ ಪಡೆದ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷ ಶಿವಕುಮಾರ್ ಅವಿರೋಧ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ಸುಧಾಕರ್ ಘೋಷಿಸಿದರು.</p>.<p>ಐವರು ಪಕ್ಷೇತರ ನಿರ್ದೇಶಕರ ಮೈತ್ರಿಕೂಟವನ್ನು ಜೆಡಿಎಸ್-ಬಿಜೆಪಿಯ ತಲಾ ಒಬ್ಬರು ನಿರ್ದೇಶಕರು ಬೆಂಬಲಿಸಿದರು.</p>.<p>ಎಂ.ರಘು ಕುಮಾರ್ ಮಾತನಾಡಿ, ‘ಚುನಾವಣೆಯಲ್ಲಿ ನಮ್ಮನ್ನು ಬೆಂಬಲಿಸಿ ಬಿಜೆಪಿ-ಜೆಡಿಎಸ್ ಪಕ್ಷದವರಿಗೂ ಅಭಾರಿಯಾಗಿರುತ್ತೇವೆ’ ಎಂದು ಹೇಳಿದರು.</p>.<p>ಉಪಾಧ್ಯಕ್ಷ ಶಿವಕುಮಾರ್, ಜೆಡಿಎಸ್ನ ಕಂಬರಾಜು ಮಾತನಾಡಿದರು. ಪುರಸಭೆ ಸದಸ್ಯ ನಾಗೇಶ್, ನಿರ್ದೇಶಕರಾದ ಕಂಬರಾಜು, ಎಂ.ಆರ್.ಪ್ರಸಾದ್, ಮೊಗಣ್ಣ, ಗುರುಸಿದ್ದಯ್ಯ, ಪೂರ್ಣೀಮಾ, ಮುಖಂಡರಾದ ನಾರಾಯಣ, ಆಟೋ ಮಂಜಣ್ಣ, ದೇವರಾಜು, ವೇಣು, ಪ್ರಭು, ಮಾದೇಶ್, ಸ್ವಾಮಿ, ಚಂದ್ರು, ರಾಜಣ್ಣ, ಪ್ರಕಾಶ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಳವಳ್ಳಿ</strong>: ಪಟ್ಟಣದ ಗಂಗಾ ಪರಮೇಶ್ವರಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮೈತ್ರಿಕೂಟ ಬೆಂಬಲಿತ ಎಂ.ರಘು ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಶಿವಕುಮಾರ್ ಆಯ್ಕೆಯಾದರು.</p>.<p>ಸಂಘದ ಸಭಾಂಗಣದಲ್ಲಿ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎಂ.ರಘು ಕುಮಾರ್ ಹಾಗೂ ಶ್ವೇತಾ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಶಿವಕುಮಾರ್ ಮಾತ್ರ ಉಮೇದುವಾರಿಕೆ ಸಲ್ಲಿಸಿದ್ದರು. ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶ್ವೇತಾ ಗೈರಾಗಿದ್ದರು. ಎಂ.ರಘು ಕುಮಾರ್ 7 ಮತ ಪಡೆದ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷ ಶಿವಕುಮಾರ್ ಅವಿರೋಧ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ಸುಧಾಕರ್ ಘೋಷಿಸಿದರು.</p>.<p>ಐವರು ಪಕ್ಷೇತರ ನಿರ್ದೇಶಕರ ಮೈತ್ರಿಕೂಟವನ್ನು ಜೆಡಿಎಸ್-ಬಿಜೆಪಿಯ ತಲಾ ಒಬ್ಬರು ನಿರ್ದೇಶಕರು ಬೆಂಬಲಿಸಿದರು.</p>.<p>ಎಂ.ರಘು ಕುಮಾರ್ ಮಾತನಾಡಿ, ‘ಚುನಾವಣೆಯಲ್ಲಿ ನಮ್ಮನ್ನು ಬೆಂಬಲಿಸಿ ಬಿಜೆಪಿ-ಜೆಡಿಎಸ್ ಪಕ್ಷದವರಿಗೂ ಅಭಾರಿಯಾಗಿರುತ್ತೇವೆ’ ಎಂದು ಹೇಳಿದರು.</p>.<p>ಉಪಾಧ್ಯಕ್ಷ ಶಿವಕುಮಾರ್, ಜೆಡಿಎಸ್ನ ಕಂಬರಾಜು ಮಾತನಾಡಿದರು. ಪುರಸಭೆ ಸದಸ್ಯ ನಾಗೇಶ್, ನಿರ್ದೇಶಕರಾದ ಕಂಬರಾಜು, ಎಂ.ಆರ್.ಪ್ರಸಾದ್, ಮೊಗಣ್ಣ, ಗುರುಸಿದ್ದಯ್ಯ, ಪೂರ್ಣೀಮಾ, ಮುಖಂಡರಾದ ನಾರಾಯಣ, ಆಟೋ ಮಂಜಣ್ಣ, ದೇವರಾಜು, ವೇಣು, ಪ್ರಭು, ಮಾದೇಶ್, ಸ್ವಾಮಿ, ಚಂದ್ರು, ರಾಜಣ್ಣ, ಪ್ರಕಾಶ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>