Cut-off box - ಭರವಸೆ ಈಡೇರಿಸಲಿದೆ : ಶಾಸಕ ಉದಯ್
ಮದ್ದೂರು : ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಚುನಾವಣೆಯ ವೇಳೆ ಜನತೆಗೆ ನೀಡಿದ್ದ ಎಲ್ಲ ಭರವಸೆ ಹಾಗೂ ಗ್ಯಾರಂಟಿಗಳನ್ನು ಈಡೇರಿಸಲಿದೆ ಎಂದು ಶಾಸಕ ಉದಯ್ ತಿಳಿಸಿದರು.
ಪಟ್ಟಣದ ಹೊರವಲಯದಲ್ಲಿ ಭಾನುವಾರ ಕಾಂಗ್ರೆಸ್ ಮುಖಂಡ ಸಿ.ಟಿ. ಶಂಕರ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಶಾಸಕರಿಗೆ ಅಭಿನಂದನಾ ಹಾಗೂ ಜನ್ಮದಿನ ಆಚರಣೆಯಲ್ಲಿ ಅವರು ಮಾತನಾಡಿದರು.
ಸಮಾಜ ಸೇವೆಗೆಂದು ಬಂದ ನನ್ನನ್ನು ಶಾಸಕನನ್ನಾಗಿ ಚುನಾಯಿಸಿದ್ದೀರಿ ಈ ನಿಮ್ಮ ಪ್ರೀತಿಗೆ ಚಿರಋಣಿ ಎಂದ ಅವರು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಒತ್ತು ಕೊಟ್ಟು ದುಡಿಯುತ್ತೇನೆ ಎಂದರು.
ಶಾಸಕರ ಅಭಿಮಾನಿಗಳು ಕಾಂಗ್ರೆಸ್ ಕಾರ್ಯಕರ್ತರು ಪಟಾಕಿಸಿಡಿಸಿ ಸಂಭ್ರಮಿಸಿದರು ಖ್ಯಾತ ಸಿನಿಮಾ ಗಾಯಕರಿಂದ ಮ್ಯೂಸಿಕಲ್ ನೈಟ್ ನಡೆಯಿತು ಶಾಸಕ ಕದಲೂರು ಉದಯ್–ವಿನುತಾ ದಂಪತಿಯನ್ನು ಗೌರವಿಸಲಾಯಿತು. ರೈತ ಮಹಿಳೆಯರನ್ನು ಹಾಗೂ ಶಿಕ್ಷಕರನ್ನು ಸನ್ಮಾನಿಸಲಾಯಿತು.