ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಸಿಎಂ ಹಾಸ್ಟೆಲ್‌ ಗಳಿಗೆ ಅರ್ಜಿ ಆಹ್ವಾನ

Published 5 ಜೂನ್ 2023, 15:57 IST
Last Updated 5 ಜೂನ್ 2023, 15:57 IST
ಅಕ್ಷರ ಗಾತ್ರ

ಕೆ.ಆರ್.ಪೇಟೆ: ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ 5 ನೇ ತರಗತಿಯಿಂದ 10 ನೇ ತರಗತಿಯ ವರೆವಿಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಜೂನ್‌ 15ರ ಒಳಗಾಗಿ ಅರ್ಜಿ ಸಲ್ಲಿಸಬಹುದು.  ಹೆಚ್ಚಿನ ಮಾಹಿತಿಗಾಗಿ ಮಿನಿ ವಿದಾನಸೌಧದಲ್ಲಿರುವ ಬಿಸಿಎಂ ಕಚೇರಿಯಲ್ಲಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಅಧಿಕಾರಿ ಎಂ.ವಿ.ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Cut-off box - ಭರವಸೆ ಈಡೇರಿಸಲಿದೆ : ಶಾಸಕ ಉದಯ್ ಮದ್ದೂರು : ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಚುನಾವಣೆಯ ವೇಳೆ ಜನತೆಗೆ ನೀಡಿದ್ದ ಎಲ್ಲ ಭರವಸೆ ಹಾಗೂ ಗ್ಯಾರಂಟಿಗಳನ್ನು ಈಡೇರಿಸಲಿದೆ ಎಂದು ಶಾಸಕ ಉದಯ್ ತಿಳಿಸಿದರು. ಪಟ್ಟಣದ ಹೊರವಲಯದಲ್ಲಿ ಭಾನುವಾರ ಕಾಂಗ್ರೆಸ್ ಮುಖಂಡ ಸಿ.ಟಿ. ಶಂಕರ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಶಾಸಕರಿಗೆ ಅಭಿನಂದನಾ ಹಾಗೂ ಜನ್ಮದಿನ ಆಚರಣೆಯಲ್ಲಿ  ಅವರು ಮಾತನಾಡಿದರು. ಸಮಾಜ ಸೇವೆಗೆಂದು ಬಂದ ನನ್ನನ್ನು ಶಾಸಕನನ್ನಾಗಿ ಚುನಾಯಿಸಿದ್ದೀರಿ ಈ ನಿಮ್ಮ ಪ್ರೀತಿಗೆ ಚಿರಋಣಿ ಎಂದ ಅವರು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಒತ್ತು ಕೊಟ್ಟು ದುಡಿಯುತ್ತೇನೆ ಎಂದರು. ಶಾಸಕರ ಅಭಿಮಾನಿಗಳು ಕಾಂಗ್ರೆಸ್ ಕಾರ್ಯಕರ್ತರು ಪಟಾಕಿಸಿಡಿಸಿ ಸಂಭ್ರಮಿಸಿದರು ಖ್ಯಾತ ಸಿನಿಮಾ ಗಾಯಕರಿಂದ ಮ್ಯೂಸಿಕಲ್ ನೈಟ್ ನಡೆಯಿತು ಶಾಸಕ ಕದಲೂರು ಉದಯ್–ವಿನುತಾ ದಂಪತಿಯನ್ನು ಗೌರವಿಸಲಾಯಿತು. ರೈತ ಮಹಿಳೆಯರನ್ನು ಹಾಗೂ ಶಿಕ್ಷಕರನ್ನು ಸನ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT