15 ಮಂದಿ ಬಿಜೆಪಿ ಕಾರ್ಯಕರ್ತರನ್ನು ನಾಲ್ಕು ತಿಂಗಳ ಹಿಂದಷ್ಟೇ ಅವಿರೋಧವಾಗಿ ನಿರ್ದೇಶಕರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿತ್ತು. ಅವರಲ್ಲಿ ಜಿ.ಸಿ.ಮಹೇಂದ್ರ ಅಧ್ಯಕ್ಷ, ಹೊನ್ನಲಗೆರೆ ಸ್ವಾಮಿಯನ್ನು ಉಪಾಧ್ಯಕ್ಷರನ್ನಾಗಿಯೂ ಆಯ್ಕೆಮಾಡಲಾಗಿತ್ತು. ನಾಮ ನಿರ್ದೇಶನಗೊಂಡಿದ್ದ ಮೂಲ ಬಿಜೆಪಿಗರು ಎನ್ನಲಾಗುತ್ತಿರುವ 10 ಮಂದಿಯನ್ನು ಕೈಬಿಟ್ಟು ಆಸ್ಥಾನಗಳಿಗೆ ಹೊಸದಾಗಿ 10 ಮಂದಿಯನ್ನು ಆಯ್ಕೆ ಮಾಡಿರುವ ಕಾರಣ ಮೂಲ ಬಿಜೆಪಿಗರ ಕಣ್ಣು ಕೆಂಪಗಾಗುವಂತೆ ಮಾಡಿದೆ.