<p><strong>ಮದ್ದೂರು:</strong> ಪಟ್ಟಣದ ರಾಮ್ ರಹೀಮ್ ನಗರದ ಬಳಿ ಭಾನುವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಹಲವು ಹಿಂದುತ್ವಪರ ಸಂಘಟನೆಗಳು ಮಂಗಳವಾರ ಕರೆ ನೀಡಲಾಗಿದ್ದ ಮದ್ದೂರು ಬಂದ್ಗೆ ಉತ್ತಮ ಪ್ರತಿಕ್ರಿಯೆ ಕಂಡು ಬಂತು.</p><p>ಬೆಳಿಗ್ಗೆಯಿಂದಲೇ ಪಟ್ಟಣದ ಪೇಟೆ ಬೀದಿ ಸೇರಿದಂತೆ ಪ್ರಮುಖ ರಸ್ತೆಗಳ ಅಂಗಡಿ ಮುಗ್ಗಟ್ಟುಗಳ ಬಾಗಿಲನ್ನು ಹಾಕಿ ವರ್ತಕರು ಸ್ವಯಂ ಪ್ರೇರಿತವಾಗಿ ಬಂದ್ ಗೆ ಸಹಕಾರ ನೀಡಿದರು.</p>.ಮದ್ದೂರು ಗಲಭೆ | 21 ಮಂದಿ ಬಂಧನ, ನಿಷೇಧಾಜ್ಞೆ ಜಾರಿ; ಇಂದು ‘ಬಂದ್’ಗೆ ಕರೆ.<p>ಹಾಲಿನ ಅಂಗಡಿಗಳು, ಔಷಧ ಅಂಗಡಿಗಳು, ವೈದ್ಯರ ಕ್ಲಿನಿಕ್ ಗಳನ್ನು ಹೊರತುಪಡಿಸಿ, ದಿನಸಿ ಅಂಗಡಿಗಳು, ಚಿತ್ರಮಂದಿರಗಳು, ಮಾಲ್ ಗಳು , ಬ್ಯಾಂಕ್ ಗಳು ಹಾಗೂ ಇತರೆ ವಾಣಿಜ್ಯ ಕೇಂದ್ರಗಳು ಮುಚ್ಚಿದ್ದವು.</p><p> ಇನ್ನುಳಿದಂತೆ ಸರ್ಕಾರಿ ಶಾಲಾ- ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಿದವು.</p>.ನಮ್ಮ ಏರಿಯಾ ಮಿನಿ ಪಾಕಿಸ್ತಾನದಂತೆ ಆಗಿದೆ: ಪೊಲೀಸರ ಎದುರು ಮದ್ದೂರು ಜನತೆಯ ಅಳಲು.<p>ಬಸ್ ಗಳು ಸೇರಿದಂತೆ ವಾಹನ ಸಂಚಾರ ಎಂದಿನಂತೆ ಇತ್ತು. ಬಂದ್ ಹಿನ್ನೆಲೆಯಲ್ಲಿ ಪಟ್ಟಣದಲ್ಲಿನ ಸೂಕ್ಷ್ಮ ಪ್ರದೇಶಗಳು ಸೇರಿದಂತೆ ಹಲವಾರು ಕಡೆಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.</p> .ಮದ್ದೂರು ಕಲ್ಲು ತೂರಾಟ ಪ್ರಕರಣ: ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು:</strong> ಪಟ್ಟಣದ ರಾಮ್ ರಹೀಮ್ ನಗರದ ಬಳಿ ಭಾನುವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಹಲವು ಹಿಂದುತ್ವಪರ ಸಂಘಟನೆಗಳು ಮಂಗಳವಾರ ಕರೆ ನೀಡಲಾಗಿದ್ದ ಮದ್ದೂರು ಬಂದ್ಗೆ ಉತ್ತಮ ಪ್ರತಿಕ್ರಿಯೆ ಕಂಡು ಬಂತು.</p><p>ಬೆಳಿಗ್ಗೆಯಿಂದಲೇ ಪಟ್ಟಣದ ಪೇಟೆ ಬೀದಿ ಸೇರಿದಂತೆ ಪ್ರಮುಖ ರಸ್ತೆಗಳ ಅಂಗಡಿ ಮುಗ್ಗಟ್ಟುಗಳ ಬಾಗಿಲನ್ನು ಹಾಕಿ ವರ್ತಕರು ಸ್ವಯಂ ಪ್ರೇರಿತವಾಗಿ ಬಂದ್ ಗೆ ಸಹಕಾರ ನೀಡಿದರು.</p>.ಮದ್ದೂರು ಗಲಭೆ | 21 ಮಂದಿ ಬಂಧನ, ನಿಷೇಧಾಜ್ಞೆ ಜಾರಿ; ಇಂದು ‘ಬಂದ್’ಗೆ ಕರೆ.<p>ಹಾಲಿನ ಅಂಗಡಿಗಳು, ಔಷಧ ಅಂಗಡಿಗಳು, ವೈದ್ಯರ ಕ್ಲಿನಿಕ್ ಗಳನ್ನು ಹೊರತುಪಡಿಸಿ, ದಿನಸಿ ಅಂಗಡಿಗಳು, ಚಿತ್ರಮಂದಿರಗಳು, ಮಾಲ್ ಗಳು , ಬ್ಯಾಂಕ್ ಗಳು ಹಾಗೂ ಇತರೆ ವಾಣಿಜ್ಯ ಕೇಂದ್ರಗಳು ಮುಚ್ಚಿದ್ದವು.</p><p> ಇನ್ನುಳಿದಂತೆ ಸರ್ಕಾರಿ ಶಾಲಾ- ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಿದವು.</p>.ನಮ್ಮ ಏರಿಯಾ ಮಿನಿ ಪಾಕಿಸ್ತಾನದಂತೆ ಆಗಿದೆ: ಪೊಲೀಸರ ಎದುರು ಮದ್ದೂರು ಜನತೆಯ ಅಳಲು.<p>ಬಸ್ ಗಳು ಸೇರಿದಂತೆ ವಾಹನ ಸಂಚಾರ ಎಂದಿನಂತೆ ಇತ್ತು. ಬಂದ್ ಹಿನ್ನೆಲೆಯಲ್ಲಿ ಪಟ್ಟಣದಲ್ಲಿನ ಸೂಕ್ಷ್ಮ ಪ್ರದೇಶಗಳು ಸೇರಿದಂತೆ ಹಲವಾರು ಕಡೆಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.</p> .ಮದ್ದೂರು ಕಲ್ಲು ತೂರಾಟ ಪ್ರಕರಣ: ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>