ಈ ಬಗ್ಗೆ ಪಟ್ಟಣದ ಎಳನೀರು ಮಾರುಕಟ್ಟೆಯಲ್ಲಿ ನಡೆದ ವರ್ತಕರ ಸಂಘದ ಸಭೆಯ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, ‘ಬುಧವಾರ ಬೆಳಿಗ್ಗೆ 7 ಗಂಟೆಯಿಂದ ಭಾನುವಾರ ರಾತ್ರಿ 9 ಗಂಟೆಯವರೆಗೆ 5 ದಿನ ವ್ಯಾಪಾರ ವಹಿವಾಟು ಬಂದ್ ಮಾಡಲಾಗುತ್ತಿದೆ. ರೈತರು ಹಾಗೂ ವರ್ತಕರು ಸಹಕರಿಸಬೇಕು ಕೋವಿಡ್ –19 ಬಗ್ಗೆ ಮುನ್ನೆಚ್ಚರಿಕೆ ಕ್ರಮವಾಗಿ ಮಾರುಕಟ್ಟೆ ವ್ಯಾಪ್ತಿಯ ಎಲ್ಲಾ ಪ್ರಾಂಗಣಗಳಲ್ಲಿ, ಕಚೇರಿ ಹಾಗೂ ಅಂಗಡಿ ಮಳಿಗೆಗಳಲ್ಲಿ ಸೋಂಕು ನಿವಾರಕ ದ್ರಾವಕವನ್ನು ಸಿಂಪಡಿಸಲಾಗಿದೆ’ ಎಂದರು.