<p><strong>ಮದ್ದೂರು</strong>: ನಗರಸಭೆಗೆ ಸೇರ್ಪಡೆ ವಿರೋಧಿಸಿ ತಾಲ್ಲೂಕಿನ ಗೆಜ್ಜಲಗೆರೆ ಗ್ರಾಮ ಪಂಚಾಯಿತಿಯ ಮುಂದೆ ನಡೆಯುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಯು 65ನೇ ದಿನ ಪೂರೈಸಿದ್ದು, ಬುಧವಾರ ರಾತ್ರಿ ಅಹೋರಾತ್ರಿ ಧರಣಿಯ ಸ್ವರೂಪ ಪಡೆದುಕೊಂಡಿದೆ.</p>.<p>ಈ ವೇಳೆ ರೈತ ಪರ ಹೋರಾಟಗಾರರಾದ ಸುನಂದ ಜಯರಾಮು ಮಾತನಾಡಿ, 65 ದಿನಗಳಿಂದ ನಗರಸಭೆಗೆ ಗೆಜ್ಜಲಗೆರೆ ಗ್ರಾ.ಪಂ ಸೇರ್ಪಡೆ ವಿರೋಧಿಸಿ ನಿರಂತರವಾಗಿ ಧರಣಿ ನಡೆಸುತ್ತಿದ್ದರೂ ಸರ್ಕಾರ ಹಾಗೂ ಜಿಲ್ಲಾಡಳಿತ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿಲ್ಲ ಮತ್ತು ಪಂಚಾಯಿತಿಗಳನ್ನು ಪಂಚಾಯಿತಿಯಾಗೆ ಉಳಿಸಲು ಕ್ರಮ ಕೈಗೊಂಡಿಲ್ಲ ಎಂದರು.</p>.<p>ಗೆಜ್ಜಲಗೆರೆ ಗ್ರಾ.ಪಂ.ನಲ್ಲಿರುವ ದಾಖಲೆಗಳನ್ನು ಹಾಗೂ ಕಡತಗಳನ್ನು ಅಧಿಕಾರಿಗಳು ಯಾವುದೇ ಕಾರಣಕ್ಕೂ ಹೊರಗಡೆಗೆ ತೆಗೆದುಕೊಂಡು ಹೋಗಲು ಬಿಡುವುದಿಲ್ಲ. ಬುಧವಾರ ರಾತ್ರಿಯಿಂದ ಪಂಚಾಯಿತಿ ಆವರಣದಲ್ಲಿ ಗ್ರಾಮಸ್ಥರು, ಮಹಿಳೆಯರು ಅಹೋರಾತ್ರಿ ಧರಣಿ ಮುಂದುವರೆಸಲು ತೀರ್ಮಾನಿಸಿದ್ದಾರೆ ಎಂದರು.</p>.<p>ಮದ್ದೂರು ನಗರಸಭೆಯಿಂದ ಗೆಜ್ಜಲಗೆರೆ, ಗೊರವನಹಳ್ಳಿ, ಸೋಮನಹಳ್ಳಿ ಹಾಗೂ ಚಾಮನಹಳ್ಳಿ ಗ್ರಾ.ಪಂಗಳನ್ನು ಕೈ ಬಿಡುವವರೆಗೂ ನಿರಂತರವಾಗಿ ಧರಣಿ ಮುಷ್ಕರ ಮುಂದುವರೆಯಲಿದೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.</p>.<p>ಮುಖಂಡರಾದ ಜಿ.ಪಿ.ಯೋಗೇಶ್, ಜಿ.ಟಿ.ಚಂದ್ರಶೇಖರ್, ಮೋಹನ, ವೀರಪ್ಪ, ಪ್ರಕಾಶ್, ಮಂಜುನಾಥ್, ಸತ್ಯವತಿ, ಗೌರಮ್ಮ, ಶಾಂತಮ್ಮ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು</strong>: ನಗರಸಭೆಗೆ ಸೇರ್ಪಡೆ ವಿರೋಧಿಸಿ ತಾಲ್ಲೂಕಿನ ಗೆಜ್ಜಲಗೆರೆ ಗ್ರಾಮ ಪಂಚಾಯಿತಿಯ ಮುಂದೆ ನಡೆಯುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಯು 65ನೇ ದಿನ ಪೂರೈಸಿದ್ದು, ಬುಧವಾರ ರಾತ್ರಿ ಅಹೋರಾತ್ರಿ ಧರಣಿಯ ಸ್ವರೂಪ ಪಡೆದುಕೊಂಡಿದೆ.</p>.<p>ಈ ವೇಳೆ ರೈತ ಪರ ಹೋರಾಟಗಾರರಾದ ಸುನಂದ ಜಯರಾಮು ಮಾತನಾಡಿ, 65 ದಿನಗಳಿಂದ ನಗರಸಭೆಗೆ ಗೆಜ್ಜಲಗೆರೆ ಗ್ರಾ.ಪಂ ಸೇರ್ಪಡೆ ವಿರೋಧಿಸಿ ನಿರಂತರವಾಗಿ ಧರಣಿ ನಡೆಸುತ್ತಿದ್ದರೂ ಸರ್ಕಾರ ಹಾಗೂ ಜಿಲ್ಲಾಡಳಿತ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿಲ್ಲ ಮತ್ತು ಪಂಚಾಯಿತಿಗಳನ್ನು ಪಂಚಾಯಿತಿಯಾಗೆ ಉಳಿಸಲು ಕ್ರಮ ಕೈಗೊಂಡಿಲ್ಲ ಎಂದರು.</p>.<p>ಗೆಜ್ಜಲಗೆರೆ ಗ್ರಾ.ಪಂ.ನಲ್ಲಿರುವ ದಾಖಲೆಗಳನ್ನು ಹಾಗೂ ಕಡತಗಳನ್ನು ಅಧಿಕಾರಿಗಳು ಯಾವುದೇ ಕಾರಣಕ್ಕೂ ಹೊರಗಡೆಗೆ ತೆಗೆದುಕೊಂಡು ಹೋಗಲು ಬಿಡುವುದಿಲ್ಲ. ಬುಧವಾರ ರಾತ್ರಿಯಿಂದ ಪಂಚಾಯಿತಿ ಆವರಣದಲ್ಲಿ ಗ್ರಾಮಸ್ಥರು, ಮಹಿಳೆಯರು ಅಹೋರಾತ್ರಿ ಧರಣಿ ಮುಂದುವರೆಸಲು ತೀರ್ಮಾನಿಸಿದ್ದಾರೆ ಎಂದರು.</p>.<p>ಮದ್ದೂರು ನಗರಸಭೆಯಿಂದ ಗೆಜ್ಜಲಗೆರೆ, ಗೊರವನಹಳ್ಳಿ, ಸೋಮನಹಳ್ಳಿ ಹಾಗೂ ಚಾಮನಹಳ್ಳಿ ಗ್ರಾ.ಪಂಗಳನ್ನು ಕೈ ಬಿಡುವವರೆಗೂ ನಿರಂತರವಾಗಿ ಧರಣಿ ಮುಷ್ಕರ ಮುಂದುವರೆಯಲಿದೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.</p>.<p>ಮುಖಂಡರಾದ ಜಿ.ಪಿ.ಯೋಗೇಶ್, ಜಿ.ಟಿ.ಚಂದ್ರಶೇಖರ್, ಮೋಹನ, ವೀರಪ್ಪ, ಪ್ರಕಾಶ್, ಮಂಜುನಾಥ್, ಸತ್ಯವತಿ, ಗೌರಮ್ಮ, ಶಾಂತಮ್ಮ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>