<p><strong>ಮದ್ದೂರು</strong>: ನಗರದ ವಿಶ್ವೇಶ್ವರಯ್ಯ ನಗರ 7ನೇ ಕ್ರಾಸ್ನ ಮನೆಯೊಂದರಲ್ಲಿ ಕಳ್ಳತನವಾಗಿದ್ದು, ₹1.5 ಲಕ್ಷ ರೂ ನಗದು ಸೇರಿದಂತೆ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಚಿನ್ನಾಭರಣ, ಬೆಳ್ಳಿ ಸಾಮಗ್ರಿಗಳನ್ನು ದೋಚಿದ್ದಾರೆ.</p>.<p>ಸೌಮ್ಯ ಮಹೇಶ್ ಎಂಬುವವರ ಮನೆಯಲ್ಲೇ ಕಳ್ಳತನವಾಗಿದ್ದು, ಮನೆಯವರು ಸೋಮವಾರ ಸಂಬಂಧಿಕರ ಊರಿಗೆ ಹೋಗಿ ಮಂಗಳವಾರ ರಾತ್ರಿ 10 ಘಂಟೆಗೆ ವಾಪಸ್ ಬಂದಾಗ ಮನೆಯಲ್ಲಿ ಕಳ್ಳತನವಾಗಿರುವುದು ಗೊತ್ತಾಗಿದೆ.</p>.<p>ಕಳ್ಳರು ಮನೆಯ ಗೇಟ್ ಬೀಗ ಒಡೆದು ನಂತರ ಮುಂಬಾಗಿಲಿನ ಲಾಕ್ ಅನ್ನು ಕಬ್ಬಿಣದ ಸಲಾಕೆಯಿಂದ ಮೀಟಿ ಮನೆಯ ಒಳಹೋಗಿ ರೂಮಿನ ಬೀರುವಿನಲ್ಲಿದ್ದ 148 ಗ್ರಾಂ ತೂಕದ ಚಿನ್ನಾಭರಣ, ₹1.5ಲಕ್ಷ ನಗದು ಹಾಗೂ ದೇವರಮನೆಯಲ್ಲಿದ್ದ ಸುಮಾರು 2.5 ಕೆ. ಜಿ ತೂಕದ ಬೆಳ್ಳಿ ಸಾಮಗ್ರಿ ಕಳವು ಮಾಡಿದ್ದಾರೆ. </p>.<p>ವಿಷಯ ತಿಳಿಯುತ್ತಿದ್ದoತೆಯೇ ಸ್ಥಳಕ್ಕೆ ಸಿಪಿಐಗಳಾದ ನವೀನ್ ಕುಮಾರ್, ನಾರಾಯಣ್, ಪಿಎಸ್ಐಗಳಾದ ಮಂಜುನಾಥ್, ರವಿ ಸೇರಿದಂತೆ ಸಿಬ್ಬಂದಿ ಹಾಗೂ ಶ್ವಾನದಳ, ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದರು.</p>.<p>ಮನೆಯ ಮಾಲೀಕರಾದ ಸೌಮ್ಯ ಮಹೇಶ್ ರವರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ನಗರದ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು</strong>: ನಗರದ ವಿಶ್ವೇಶ್ವರಯ್ಯ ನಗರ 7ನೇ ಕ್ರಾಸ್ನ ಮನೆಯೊಂದರಲ್ಲಿ ಕಳ್ಳತನವಾಗಿದ್ದು, ₹1.5 ಲಕ್ಷ ರೂ ನಗದು ಸೇರಿದಂತೆ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಚಿನ್ನಾಭರಣ, ಬೆಳ್ಳಿ ಸಾಮಗ್ರಿಗಳನ್ನು ದೋಚಿದ್ದಾರೆ.</p>.<p>ಸೌಮ್ಯ ಮಹೇಶ್ ಎಂಬುವವರ ಮನೆಯಲ್ಲೇ ಕಳ್ಳತನವಾಗಿದ್ದು, ಮನೆಯವರು ಸೋಮವಾರ ಸಂಬಂಧಿಕರ ಊರಿಗೆ ಹೋಗಿ ಮಂಗಳವಾರ ರಾತ್ರಿ 10 ಘಂಟೆಗೆ ವಾಪಸ್ ಬಂದಾಗ ಮನೆಯಲ್ಲಿ ಕಳ್ಳತನವಾಗಿರುವುದು ಗೊತ್ತಾಗಿದೆ.</p>.<p>ಕಳ್ಳರು ಮನೆಯ ಗೇಟ್ ಬೀಗ ಒಡೆದು ನಂತರ ಮುಂಬಾಗಿಲಿನ ಲಾಕ್ ಅನ್ನು ಕಬ್ಬಿಣದ ಸಲಾಕೆಯಿಂದ ಮೀಟಿ ಮನೆಯ ಒಳಹೋಗಿ ರೂಮಿನ ಬೀರುವಿನಲ್ಲಿದ್ದ 148 ಗ್ರಾಂ ತೂಕದ ಚಿನ್ನಾಭರಣ, ₹1.5ಲಕ್ಷ ನಗದು ಹಾಗೂ ದೇವರಮನೆಯಲ್ಲಿದ್ದ ಸುಮಾರು 2.5 ಕೆ. ಜಿ ತೂಕದ ಬೆಳ್ಳಿ ಸಾಮಗ್ರಿ ಕಳವು ಮಾಡಿದ್ದಾರೆ. </p>.<p>ವಿಷಯ ತಿಳಿಯುತ್ತಿದ್ದoತೆಯೇ ಸ್ಥಳಕ್ಕೆ ಸಿಪಿಐಗಳಾದ ನವೀನ್ ಕುಮಾರ್, ನಾರಾಯಣ್, ಪಿಎಸ್ಐಗಳಾದ ಮಂಜುನಾಥ್, ರವಿ ಸೇರಿದಂತೆ ಸಿಬ್ಬಂದಿ ಹಾಗೂ ಶ್ವಾನದಳ, ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದರು.</p>.<p>ಮನೆಯ ಮಾಲೀಕರಾದ ಸೌಮ್ಯ ಮಹೇಶ್ ರವರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ನಗರದ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>