<p><strong>ಮದ್ದೂರು:</strong> ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಯನ್ನು ಸುಸ್ಸಜ್ಜಿತವಾಗಿ ನಿರ್ಮಿಸಲು ಶಾಸಕ ಕೆ.ಎಂ. ಉದಯ್ ಅವರು ಸ್ವಂತ ನಿವೇಶನವನ್ನು ದಾನ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.</p>.<p>ಪಟ್ಟಣದ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ನಿವೇಶನವನ್ನು ಪಕ್ಷಕ್ಕೆ ನೋಂದಣಿ ಮಾಡಿಸಿದ ಪ್ರಕ್ರಿಯೆ ಮುಗಿಸಿ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p>.<p>ಶಾಸಕ ಕೆ.ಎಂ. ಉದಯ್ ಅವರ ಈ ಕಾರ್ಯ ಇತರರಿಗೂ ಮಾದರಿಯಾಗಿದೆ. ಇದಕ್ಕಾಗಿ ಅವರನ್ನು ಅಭಿನಂದಿಸುವೆ. ರಾಜ್ಯದಾದ್ಯಂತ ತಾಲ್ಲೂಕುಗಳಲ್ಲಿಯೂ ಪಕ್ಷದ ಕಚೇರಿಗಳ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದರು.</p>.<p>ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಶೀಘ್ರದಲ್ಲೇ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಮೊದಲ ಹಂತದಲ್ಲಿ ಈಗಾಗಲೇ ನೋಂದಣಿಯಾಗಿರುವ ರಾಜ್ಯದ ವಿವಿಧ 100 ತಾಲ್ಲೂಕುಗಳಲ್ಲಿ ಪಕ್ಷದ ನೂತನ ಕಚೇರಿಗಳ ಶಂಕುಸ್ಥಾಪನೆಗೆ ವರ್ಚುವಲ್ ಮೂಲಕ ಅವರು ಚಾಲನೆ ನೀಡಲಿದ್ದಾರೆ ಎಂದರು.</p>.<p>ಶಾಸಕ ಕೆ.ಎಂ. ಉದಯ್ ಮಾತನಾಡಿ, ಪಟ್ಟಣದ ಐ.ಬಿ ವೃತ್ತದ ಬಳಿ ಮೈಸೂರು ಬೆಂಗಳೂರು ಹೆದ್ದಾರಿಗೆ ಹೊಂದಿಕೊಂಡಂತೆ 5,445 ಅಡಿ ವಿಸ್ತೀರ್ಣದ (5 ಗುಂಟೆ ) ಜಾಗ ಖರೀದಿಸಿದ್ದೆ. ಅದನ್ನು ಪಕ್ಷದ ಕಚೇರಿ ನಿರ್ಮಿಸಲು ದಾನ ನೀಡಿದ್ದೇನೆ ಎಂದರು.</p>.<p>ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೆಲುವರಾಜು, ಪುರಸಭಾಧ್ಯಕ್ಷೆ ಕೋಕಿಲ ಅರುಣ್, ಕೆಪಿಸಿಸಿ ಖಜಾoಚಿ ವಿನಯ್ ಕಾರ್ತಿಕ್, ತಹಶೀಲ್ದಾರ್ ಸ್ಮಿತಾ ಇನ್ನಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು:</strong> ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಯನ್ನು ಸುಸ್ಸಜ್ಜಿತವಾಗಿ ನಿರ್ಮಿಸಲು ಶಾಸಕ ಕೆ.ಎಂ. ಉದಯ್ ಅವರು ಸ್ವಂತ ನಿವೇಶನವನ್ನು ದಾನ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.</p>.<p>ಪಟ್ಟಣದ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ನಿವೇಶನವನ್ನು ಪಕ್ಷಕ್ಕೆ ನೋಂದಣಿ ಮಾಡಿಸಿದ ಪ್ರಕ್ರಿಯೆ ಮುಗಿಸಿ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p>.<p>ಶಾಸಕ ಕೆ.ಎಂ. ಉದಯ್ ಅವರ ಈ ಕಾರ್ಯ ಇತರರಿಗೂ ಮಾದರಿಯಾಗಿದೆ. ಇದಕ್ಕಾಗಿ ಅವರನ್ನು ಅಭಿನಂದಿಸುವೆ. ರಾಜ್ಯದಾದ್ಯಂತ ತಾಲ್ಲೂಕುಗಳಲ್ಲಿಯೂ ಪಕ್ಷದ ಕಚೇರಿಗಳ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದರು.</p>.<p>ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಶೀಘ್ರದಲ್ಲೇ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಮೊದಲ ಹಂತದಲ್ಲಿ ಈಗಾಗಲೇ ನೋಂದಣಿಯಾಗಿರುವ ರಾಜ್ಯದ ವಿವಿಧ 100 ತಾಲ್ಲೂಕುಗಳಲ್ಲಿ ಪಕ್ಷದ ನೂತನ ಕಚೇರಿಗಳ ಶಂಕುಸ್ಥಾಪನೆಗೆ ವರ್ಚುವಲ್ ಮೂಲಕ ಅವರು ಚಾಲನೆ ನೀಡಲಿದ್ದಾರೆ ಎಂದರು.</p>.<p>ಶಾಸಕ ಕೆ.ಎಂ. ಉದಯ್ ಮಾತನಾಡಿ, ಪಟ್ಟಣದ ಐ.ಬಿ ವೃತ್ತದ ಬಳಿ ಮೈಸೂರು ಬೆಂಗಳೂರು ಹೆದ್ದಾರಿಗೆ ಹೊಂದಿಕೊಂಡಂತೆ 5,445 ಅಡಿ ವಿಸ್ತೀರ್ಣದ (5 ಗುಂಟೆ ) ಜಾಗ ಖರೀದಿಸಿದ್ದೆ. ಅದನ್ನು ಪಕ್ಷದ ಕಚೇರಿ ನಿರ್ಮಿಸಲು ದಾನ ನೀಡಿದ್ದೇನೆ ಎಂದರು.</p>.<p>ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೆಲುವರಾಜು, ಪುರಸಭಾಧ್ಯಕ್ಷೆ ಕೋಕಿಲ ಅರುಣ್, ಕೆಪಿಸಿಸಿ ಖಜಾoಚಿ ವಿನಯ್ ಕಾರ್ತಿಕ್, ತಹಶೀಲ್ದಾರ್ ಸ್ಮಿತಾ ಇನ್ನಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>