<p><strong>ಮದ್ದೂರು</strong>: ನಗರದ ವ್ಯಾಪ್ತಿಯಲ್ಲಿ ಎ ಖಾತಾ, ಬಿ ಖಾತಾಗಳನ್ನು ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ವಾರ್ಡ್ ಅಭಿಯಾನ ನಡೆಸಿ ನಿವೇಶನದಾರರಿಗೆ ನೀಡಬೇಕೆಂದು ಜಿಲ್ಲಾಧಿಕಾರಿ ಕುಮಾರ ತಿಳಿಸಿದರು.</p>.<p>ನಗರದ ನಗರಸಭೆಯಲ್ಲಿ ಶುಕ್ರವಾರ ನಡೆದ ಬಜೆಟ್ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.</p>.<p>‘ಜನಾಭಿಪ್ರಾಯಗಳನ್ನು ಆಧರಿಸಿ ಬಜೆಟ್ ಮಂಡನೆಯಾದರೆ ಅರ್ಥವಿರುತ್ತದೆ. ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರ ವಾಗಿರುವುದರಿಂದ ನೇರವಾಗಿ ಜನರ ಅಭಿಪ್ರಾಯಗಳನ್ನು ಸಂಗ್ರಹಿಸುವ ದೃಷ್ಟಿಯಿಂದ ಈ ಪೂರ್ವಭಾವಿ ಸಭೆಯನ್ನು ನಡೆಸಲಾಗಿದೆ’ ಎಂದರು.</p>.<p>‘ನಗರದ ರಾಮ್ ರಹೀಮ್ ನಗರ ಹಾಗೂ ಚನ್ನೇಗೌಡ ಬಡಾವಣೆ ವ್ಯಾಪ್ತಿಯಲ್ಲಿನ 5.5 ಎಕರೆ ಜಾಗದಲ್ಲಿ 242 ಮನೆಗಳು ಹಲವು ದಶಕಗಳಿಂದ ಇವೆ. ಆದರೆ ಈವರೆಗೆ ಹಕ್ಕುಪತ್ರ ವಿತರಣೆಯಾಗಿಲ್ಲ. ಈ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಂಡರೆ ನಗರಸಭೆಗೆ ವರಮಾನ ಬರುತ್ತದೆ’ ಎಂದು ಪುರಸಭಾ ಮಾಜಿ ಸದಸ್ಯ ಮನ್ಸೂರ್ ಅಲಿ ಖಾನ್ ತಿಳಿಸಿದರು.</p>.<p>‘ನಗರದ ವ್ಯಾಪ್ತಿಯಲ್ಲಿನ ಯುಜಿಡಿ ನೀರು ನೀರು ಸೇರಿದಂತೆ ಚರಂಡಿ ನೀರು ಶಿoಷಾ ನದಿಗೆ ಸೇರಿ ನದಿಯ ನೀರು ಕಲುಷಿತ ವಾಗುತ್ತಿರುವುದರಿಂದ ಪಕ್ಕದ ವೈದ್ಯನಾಥಪುರದ ಪುರಾಣ ಪ್ರಸಿದ್ಧ ವೈದ್ಯನಾಥೇಶ್ವರಸ್ವಾಮಿ ದೇವಸ್ಥಾನಕ್ಕೆ ಬರುವ ಭಕ್ತರು ನದಿಯಲ್ಲಿ ಸ್ನಾನ ಮಾಡಲು ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಲಿನ ನೀರು ನದಿಗೆ ಸೇರದಂತೆ ಕ್ರಮ ವಹಿಸಬೇಕು’ ಎಂದು ಗ್ರಾಮದ ನಿವಾಸಿ ಪ್ರಭು ಅಧಿಕಾರಿಗಳನ್ನು ಒತ್ತಾಯಿಸಿದರು.</p>.<p>ಇತ್ತೀಚೆಗೆ ಪೇಟೆ ಬೀದಿ ವಿಸ್ತರಣೆ ಮಾಡುವ ವೇಳೆ ಬೀದಿ ಬದಿಯ ವ್ಯಾಪಾರಸ್ಥರಿಗೆ ತೊಂದರೆಯಾಗಿರುವುದರಿಂದ ಅವರಿಗೆ ಕೂಡಲೇ ಪರ್ಯಾಯ ವ್ಯವಸ್ಥೆಯನ್ನು ಮಾಡಬೇಕೆಂದು ಸಾರ್ವಜನಿಕರೊಬ್ಬರು ಒತ್ತಾಯಿಸಿದರು.</p>.<p>ಸಭೆಯಲ್ಲಿ ಜಿಲ್ಲಾ ಯೋಜನಾ ನಿರ್ದೇಶಕರಾದ ನರಸಿಂಹಮೂರ್ತಿ, ನಗರಸಭಾ ಪೌರಾಯುಕ್ತೆ ರಾಧಿಕಾ ಸೇರಿದಂತೆ ಅಧಿಕಾರಿವರ್ಗ ಹಾಗೂ ಸಾರ್ವಜನಿಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು</strong>: ನಗರದ ವ್ಯಾಪ್ತಿಯಲ್ಲಿ ಎ ಖಾತಾ, ಬಿ ಖಾತಾಗಳನ್ನು ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ವಾರ್ಡ್ ಅಭಿಯಾನ ನಡೆಸಿ ನಿವೇಶನದಾರರಿಗೆ ನೀಡಬೇಕೆಂದು ಜಿಲ್ಲಾಧಿಕಾರಿ ಕುಮಾರ ತಿಳಿಸಿದರು.</p>.<p>ನಗರದ ನಗರಸಭೆಯಲ್ಲಿ ಶುಕ್ರವಾರ ನಡೆದ ಬಜೆಟ್ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.</p>.<p>‘ಜನಾಭಿಪ್ರಾಯಗಳನ್ನು ಆಧರಿಸಿ ಬಜೆಟ್ ಮಂಡನೆಯಾದರೆ ಅರ್ಥವಿರುತ್ತದೆ. ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರ ವಾಗಿರುವುದರಿಂದ ನೇರವಾಗಿ ಜನರ ಅಭಿಪ್ರಾಯಗಳನ್ನು ಸಂಗ್ರಹಿಸುವ ದೃಷ್ಟಿಯಿಂದ ಈ ಪೂರ್ವಭಾವಿ ಸಭೆಯನ್ನು ನಡೆಸಲಾಗಿದೆ’ ಎಂದರು.</p>.<p>‘ನಗರದ ರಾಮ್ ರಹೀಮ್ ನಗರ ಹಾಗೂ ಚನ್ನೇಗೌಡ ಬಡಾವಣೆ ವ್ಯಾಪ್ತಿಯಲ್ಲಿನ 5.5 ಎಕರೆ ಜಾಗದಲ್ಲಿ 242 ಮನೆಗಳು ಹಲವು ದಶಕಗಳಿಂದ ಇವೆ. ಆದರೆ ಈವರೆಗೆ ಹಕ್ಕುಪತ್ರ ವಿತರಣೆಯಾಗಿಲ್ಲ. ಈ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಂಡರೆ ನಗರಸಭೆಗೆ ವರಮಾನ ಬರುತ್ತದೆ’ ಎಂದು ಪುರಸಭಾ ಮಾಜಿ ಸದಸ್ಯ ಮನ್ಸೂರ್ ಅಲಿ ಖಾನ್ ತಿಳಿಸಿದರು.</p>.<p>‘ನಗರದ ವ್ಯಾಪ್ತಿಯಲ್ಲಿನ ಯುಜಿಡಿ ನೀರು ನೀರು ಸೇರಿದಂತೆ ಚರಂಡಿ ನೀರು ಶಿoಷಾ ನದಿಗೆ ಸೇರಿ ನದಿಯ ನೀರು ಕಲುಷಿತ ವಾಗುತ್ತಿರುವುದರಿಂದ ಪಕ್ಕದ ವೈದ್ಯನಾಥಪುರದ ಪುರಾಣ ಪ್ರಸಿದ್ಧ ವೈದ್ಯನಾಥೇಶ್ವರಸ್ವಾಮಿ ದೇವಸ್ಥಾನಕ್ಕೆ ಬರುವ ಭಕ್ತರು ನದಿಯಲ್ಲಿ ಸ್ನಾನ ಮಾಡಲು ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಲಿನ ನೀರು ನದಿಗೆ ಸೇರದಂತೆ ಕ್ರಮ ವಹಿಸಬೇಕು’ ಎಂದು ಗ್ರಾಮದ ನಿವಾಸಿ ಪ್ರಭು ಅಧಿಕಾರಿಗಳನ್ನು ಒತ್ತಾಯಿಸಿದರು.</p>.<p>ಇತ್ತೀಚೆಗೆ ಪೇಟೆ ಬೀದಿ ವಿಸ್ತರಣೆ ಮಾಡುವ ವೇಳೆ ಬೀದಿ ಬದಿಯ ವ್ಯಾಪಾರಸ್ಥರಿಗೆ ತೊಂದರೆಯಾಗಿರುವುದರಿಂದ ಅವರಿಗೆ ಕೂಡಲೇ ಪರ್ಯಾಯ ವ್ಯವಸ್ಥೆಯನ್ನು ಮಾಡಬೇಕೆಂದು ಸಾರ್ವಜನಿಕರೊಬ್ಬರು ಒತ್ತಾಯಿಸಿದರು.</p>.<p>ಸಭೆಯಲ್ಲಿ ಜಿಲ್ಲಾ ಯೋಜನಾ ನಿರ್ದೇಶಕರಾದ ನರಸಿಂಹಮೂರ್ತಿ, ನಗರಸಭಾ ಪೌರಾಯುಕ್ತೆ ರಾಧಿಕಾ ಸೇರಿದಂತೆ ಅಧಿಕಾರಿವರ್ಗ ಹಾಗೂ ಸಾರ್ವಜನಿಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>