ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದ್ದೂರು: ಆಡಳಿತ ಮಂಡಳಿಗೆ ತರಾಟೆ

ಮದ್ದೂರು: ಪಿಎಲ್‌ಡಿ ಬ್ಯಾಂಕ್ ವಾರ್ಷಿಕ ಸಭೆ, ಗದ್ದಲ
Last Updated 24 ಡಿಸೆಂಬರ್ 2020, 3:33 IST
ಅಕ್ಷರ ಗಾತ್ರ

ಮದ್ದೂರು: ಪಟ್ಟಣದ ಸಿದ್ಧಾರೂಢ ಕಲ್ಯಾಣ ಮಂಟಪದ ಆವರಣದಲ್ಲಿ ನಡೆದ ಪಿಎಲ್‌ಡಿ ಬ್ಯಾಂಕ್‌ನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಷೇರುದಾರರು ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡರು.

ಸಭೆ ಆರಂಭಗೊಳ್ಳುತ್ತಿದ್ದಂತೆ ಷೇರುದಾರರಾದ ಹನುಮೇಗೌಡ, ಕುದರಗುಂಡಿ ನಾಗರಾಜು ಎದ್ದು ನಿಂತು, ‘ಕೇವಲ ಹೆಸರಿಗೆ ಮಾತ್ರ ವರ್ಷಕೊಮ್ಮೆ ಸಭೆ ಕರೆಯುತ್ತೀರಿ. ಸಾಲ ಸೇರಿದಂತೆ ಯಾವುದೇ ವಿಚಾರದ ಸೂಚನಾ ಪತ್ರಗಳು ಷೇರುದಾರರ ಗಮನಕ್ಕೆ ತಲುಪುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬ್ಯಾಂಕ್‌ನಿಂದ ಷೇರುದಾರರಿಗೆ ಸರಿಯಾಗಿ ಸಾಲ ಸೌಲಭ್ಯಗಳು ದೊರಕುತ್ತಿಲ್ಲ. ಅಧ್ಯಕ್ಷರು ಸೇರಿದಂತೆ ಕೆಲವರಿಗೆ ಮಾತ್ರ ಸಾಲ ನೀಡಲಾಗುತ್ತಿದೆ. ಕೆಲವೊಮ್ಮೆ ಸಾಲ ದೊರಕಿದರೂ ಬ್ಯಾಂಕ್‌ ಅಧಿಕಾರಿಗಳಿಗೆ ಲಂಚ ನೀಡಬೇಕಾಗುತ್ತದೆ ಎಂದು ಹೇಳಿದರು.

ಕೆಲವು ಸಾಲಗಳಿಂದ ಬ್ಯಾಂಕ್ ನಷ್ಟದಲ್ಲಿದ್ದು, ಇದಕ್ಕೆ ಅಡಳಿತ ಮಂಡಳಿ, ಅಧಿಕಾರಿಗಳ ಬೇಜವಾಬ್ದಾರಿ ಕಾರಣ ಎಂದರು.

ಅಧ್ಯಕ್ಷತೆಯನ್ನು ಪಿ.ಎಲ್.ಡಿ ಬ್ಯಾಂಕ್ ಅದ್ಯಕ್ಷ ಸಿದ್ದಮರೀಗೌಡ ವಹಿಸಿದ್ದರು.

ಉಪಾಧ್ಯಕ್ಷ ಸಿದ್ದಧರಾಮು, ನಿರ್ದೇಶಕರಾದ ನ.ಲಿ.ಕೃಷ್ಣ, ಸಿದ್ದೇಗೌಡ, ಈರೇಗೌಡ, ಕೆಂಪೇಗೌಡ, ಮುತ್ತುರಾಜು ಹಾಗೂ ಬ್ಯಾಂಕಿನ ಪ್ರಭಾರ ವ್ಯವಸ್ಥಾಪಕ ಶಿವಕುಮಾರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT