<p><strong>ಮದ್ದೂರು:</strong> ಪಟ್ಟಣದ ಸಿದ್ಧಾರೂಢ ಕಲ್ಯಾಣ ಮಂಟಪದ ಆವರಣದಲ್ಲಿ ನಡೆದ ಪಿಎಲ್ಡಿ ಬ್ಯಾಂಕ್ನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಷೇರುದಾರರು ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡರು.</p>.<p>ಸಭೆ ಆರಂಭಗೊಳ್ಳುತ್ತಿದ್ದಂತೆ ಷೇರುದಾರರಾದ ಹನುಮೇಗೌಡ, ಕುದರಗುಂಡಿ ನಾಗರಾಜು ಎದ್ದು ನಿಂತು, ‘ಕೇವಲ ಹೆಸರಿಗೆ ಮಾತ್ರ ವರ್ಷಕೊಮ್ಮೆ ಸಭೆ ಕರೆಯುತ್ತೀರಿ. ಸಾಲ ಸೇರಿದಂತೆ ಯಾವುದೇ ವಿಚಾರದ ಸೂಚನಾ ಪತ್ರಗಳು ಷೇರುದಾರರ ಗಮನಕ್ಕೆ ತಲುಪುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಬ್ಯಾಂಕ್ನಿಂದ ಷೇರುದಾರರಿಗೆ ಸರಿಯಾಗಿ ಸಾಲ ಸೌಲಭ್ಯಗಳು ದೊರಕುತ್ತಿಲ್ಲ. ಅಧ್ಯಕ್ಷರು ಸೇರಿದಂತೆ ಕೆಲವರಿಗೆ ಮಾತ್ರ ಸಾಲ ನೀಡಲಾಗುತ್ತಿದೆ. ಕೆಲವೊಮ್ಮೆ ಸಾಲ ದೊರಕಿದರೂ ಬ್ಯಾಂಕ್ ಅಧಿಕಾರಿಗಳಿಗೆ ಲಂಚ ನೀಡಬೇಕಾಗುತ್ತದೆ ಎಂದು ಹೇಳಿದರು.</p>.<p>ಕೆಲವು ಸಾಲಗಳಿಂದ ಬ್ಯಾಂಕ್ ನಷ್ಟದಲ್ಲಿದ್ದು, ಇದಕ್ಕೆ ಅಡಳಿತ ಮಂಡಳಿ, ಅಧಿಕಾರಿಗಳ ಬೇಜವಾಬ್ದಾರಿ ಕಾರಣ ಎಂದರು.</p>.<p>ಅಧ್ಯಕ್ಷತೆಯನ್ನು ಪಿ.ಎಲ್.ಡಿ ಬ್ಯಾಂಕ್ ಅದ್ಯಕ್ಷ ಸಿದ್ದಮರೀಗೌಡ ವಹಿಸಿದ್ದರು.</p>.<p>ಉಪಾಧ್ಯಕ್ಷ ಸಿದ್ದಧರಾಮು, ನಿರ್ದೇಶಕರಾದ ನ.ಲಿ.ಕೃಷ್ಣ, ಸಿದ್ದೇಗೌಡ, ಈರೇಗೌಡ, ಕೆಂಪೇಗೌಡ, ಮುತ್ತುರಾಜು ಹಾಗೂ ಬ್ಯಾಂಕಿನ ಪ್ರಭಾರ ವ್ಯವಸ್ಥಾಪಕ ಶಿವಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು:</strong> ಪಟ್ಟಣದ ಸಿದ್ಧಾರೂಢ ಕಲ್ಯಾಣ ಮಂಟಪದ ಆವರಣದಲ್ಲಿ ನಡೆದ ಪಿಎಲ್ಡಿ ಬ್ಯಾಂಕ್ನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಷೇರುದಾರರು ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡರು.</p>.<p>ಸಭೆ ಆರಂಭಗೊಳ್ಳುತ್ತಿದ್ದಂತೆ ಷೇರುದಾರರಾದ ಹನುಮೇಗೌಡ, ಕುದರಗುಂಡಿ ನಾಗರಾಜು ಎದ್ದು ನಿಂತು, ‘ಕೇವಲ ಹೆಸರಿಗೆ ಮಾತ್ರ ವರ್ಷಕೊಮ್ಮೆ ಸಭೆ ಕರೆಯುತ್ತೀರಿ. ಸಾಲ ಸೇರಿದಂತೆ ಯಾವುದೇ ವಿಚಾರದ ಸೂಚನಾ ಪತ್ರಗಳು ಷೇರುದಾರರ ಗಮನಕ್ಕೆ ತಲುಪುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಬ್ಯಾಂಕ್ನಿಂದ ಷೇರುದಾರರಿಗೆ ಸರಿಯಾಗಿ ಸಾಲ ಸೌಲಭ್ಯಗಳು ದೊರಕುತ್ತಿಲ್ಲ. ಅಧ್ಯಕ್ಷರು ಸೇರಿದಂತೆ ಕೆಲವರಿಗೆ ಮಾತ್ರ ಸಾಲ ನೀಡಲಾಗುತ್ತಿದೆ. ಕೆಲವೊಮ್ಮೆ ಸಾಲ ದೊರಕಿದರೂ ಬ್ಯಾಂಕ್ ಅಧಿಕಾರಿಗಳಿಗೆ ಲಂಚ ನೀಡಬೇಕಾಗುತ್ತದೆ ಎಂದು ಹೇಳಿದರು.</p>.<p>ಕೆಲವು ಸಾಲಗಳಿಂದ ಬ್ಯಾಂಕ್ ನಷ್ಟದಲ್ಲಿದ್ದು, ಇದಕ್ಕೆ ಅಡಳಿತ ಮಂಡಳಿ, ಅಧಿಕಾರಿಗಳ ಬೇಜವಾಬ್ದಾರಿ ಕಾರಣ ಎಂದರು.</p>.<p>ಅಧ್ಯಕ್ಷತೆಯನ್ನು ಪಿ.ಎಲ್.ಡಿ ಬ್ಯಾಂಕ್ ಅದ್ಯಕ್ಷ ಸಿದ್ದಮರೀಗೌಡ ವಹಿಸಿದ್ದರು.</p>.<p>ಉಪಾಧ್ಯಕ್ಷ ಸಿದ್ದಧರಾಮು, ನಿರ್ದೇಶಕರಾದ ನ.ಲಿ.ಕೃಷ್ಣ, ಸಿದ್ದೇಗೌಡ, ಈರೇಗೌಡ, ಕೆಂಪೇಗೌಡ, ಮುತ್ತುರಾಜು ಹಾಗೂ ಬ್ಯಾಂಕಿನ ಪ್ರಭಾರ ವ್ಯವಸ್ಥಾಪಕ ಶಿವಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>