<p><strong>ಮದ್ದೂರು</strong>: ಮೈಸೂರು –ಬೆಂಗಳೂರು ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ನಗರದ ಮರಿಯಪ್ಪ ಕಾನ್ವೆಂಟ್ ವಾಹನಕ್ಕೆ ಉದಯರಂಗ ಬಸ್ ಡಿಕ್ಕಿ ಹೊಡೆದು 7 ಮಕ್ಕಳು ಸೇರಿ 15 ಮಂದಿ ಗಾಯಗೊಂಡರು.</p>.<p>ವಿದ್ಯಾರ್ಥಿಗಳಾದ ಶಶಾಂಕ್ ಗೌಡ, ಹಿತಾ, ನಂದಿನಿ, ವಂದನಾ, ಮೋಹಿತ್, ಧ್ರುವ, ಸಾನ್ವಿಕಾ, ಶಾಲೆಯ ಬಸ್ ಚಾಲಕ ರಾಜಣ್ಣ ಹಾಗೂ ಉದಯರಂಗದಲ್ಲಿದ್ದ 8 ಮಂದಿ ಗಾಯಗೊಂಡವರು. ತಾಲ್ಲೂಕು ಆಸ್ಪತ್ರೆಯಲ್ಲಿ ಹಲವರಿಗೆ ಚಿಕಿತ್ಸೆ ನೀಡಲಾಗಿದ್ದು, ಕೆಲವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಹುಳುಗನಹಳ್ಳಿಗೆ ಮಕ್ಕಳನ್ನು ಬಿಡಲು ಹೋಗುವಾಗ, ಸೋಮನಹಳ್ಳಿ ಬಳಿಯ ತಿಮ್ಮದಾಸ್ ಹೋಟೆಲ್ ಮುಂಭಾಗ ಅಪಘಾತ ನಡೆದಿದೆ. ಖಾಸಗಿ ಬಸ್ ಮದ್ದೂರಿನಿಂದ ಬೆಂಗಳೂರಿಗೆ ಹೋಗುತ್ತಿತ್ತು.</p>.<p>ಆಸ್ಪತ್ರೆಗೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶೋಭಾರಾಣಿ, ಬಿಇಒ ಧನಂಜಯ, ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ, ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ನ ಟ್ರಸ್ಟಿ ಕೆ.ಎಂ.ರವಿ, ಶಾಲಾ ಆಡಳಿತ ಮಂಡಳಿಯ ಅಪೂರ್ವ ಚಂದ್ರು ನೀಡಿದ್ದರು.</p>.<p>ಮಳವಳ್ಳಿ ಡಿವೈಎಸ್ಪಿ ಯಶವಂತ್ ಕುಮಾರ್, ಇನ್ಸ್ಪೆಕ್ಟರ್ ನವೀನ್ ಕುಮಾರ್, ಪಿಎಸ್ಐ ಮಂಜುನಾಥ್, ರಾಮಸ್ವಾಮಿ, ಕಮಾಲಾಕ್ಷಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ವಾಹನಗಳನ್ನು ಬದಿಗೆ ಸರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ನಗರದ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಮದ್ದೂರು, ಕೊಳ್ಳೇಗಾಲ ರಸ್ತೆಯಲ್ಲಿ ಉದಯರಂಗ ಬಸ್ಗಳು ಅತಿವೇಗ ಹಾಗೂ ಅಜಾಗರೂಕತೆಯಿಂದ ಸಂಚರಿಸುವುದರಿಂದ ಅಪಘಾತಗಳು ನಡೆಯುತ್ತವೆ ಎಂದು ಸಾರ್ವಜನಿಕರು ದೂರಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-40-1456810836</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು</strong>: ಮೈಸೂರು –ಬೆಂಗಳೂರು ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ನಗರದ ಮರಿಯಪ್ಪ ಕಾನ್ವೆಂಟ್ ವಾಹನಕ್ಕೆ ಉದಯರಂಗ ಬಸ್ ಡಿಕ್ಕಿ ಹೊಡೆದು 7 ಮಕ್ಕಳು ಸೇರಿ 15 ಮಂದಿ ಗಾಯಗೊಂಡರು.</p>.<p>ವಿದ್ಯಾರ್ಥಿಗಳಾದ ಶಶಾಂಕ್ ಗೌಡ, ಹಿತಾ, ನಂದಿನಿ, ವಂದನಾ, ಮೋಹಿತ್, ಧ್ರುವ, ಸಾನ್ವಿಕಾ, ಶಾಲೆಯ ಬಸ್ ಚಾಲಕ ರಾಜಣ್ಣ ಹಾಗೂ ಉದಯರಂಗದಲ್ಲಿದ್ದ 8 ಮಂದಿ ಗಾಯಗೊಂಡವರು. ತಾಲ್ಲೂಕು ಆಸ್ಪತ್ರೆಯಲ್ಲಿ ಹಲವರಿಗೆ ಚಿಕಿತ್ಸೆ ನೀಡಲಾಗಿದ್ದು, ಕೆಲವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಹುಳುಗನಹಳ್ಳಿಗೆ ಮಕ್ಕಳನ್ನು ಬಿಡಲು ಹೋಗುವಾಗ, ಸೋಮನಹಳ್ಳಿ ಬಳಿಯ ತಿಮ್ಮದಾಸ್ ಹೋಟೆಲ್ ಮುಂಭಾಗ ಅಪಘಾತ ನಡೆದಿದೆ. ಖಾಸಗಿ ಬಸ್ ಮದ್ದೂರಿನಿಂದ ಬೆಂಗಳೂರಿಗೆ ಹೋಗುತ್ತಿತ್ತು.</p>.<p>ಆಸ್ಪತ್ರೆಗೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶೋಭಾರಾಣಿ, ಬಿಇಒ ಧನಂಜಯ, ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ, ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ನ ಟ್ರಸ್ಟಿ ಕೆ.ಎಂ.ರವಿ, ಶಾಲಾ ಆಡಳಿತ ಮಂಡಳಿಯ ಅಪೂರ್ವ ಚಂದ್ರು ನೀಡಿದ್ದರು.</p>.<p>ಮಳವಳ್ಳಿ ಡಿವೈಎಸ್ಪಿ ಯಶವಂತ್ ಕುಮಾರ್, ಇನ್ಸ್ಪೆಕ್ಟರ್ ನವೀನ್ ಕುಮಾರ್, ಪಿಎಸ್ಐ ಮಂಜುನಾಥ್, ರಾಮಸ್ವಾಮಿ, ಕಮಾಲಾಕ್ಷಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ವಾಹನಗಳನ್ನು ಬದಿಗೆ ಸರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ನಗರದ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಮದ್ದೂರು, ಕೊಳ್ಳೇಗಾಲ ರಸ್ತೆಯಲ್ಲಿ ಉದಯರಂಗ ಬಸ್ಗಳು ಅತಿವೇಗ ಹಾಗೂ ಅಜಾಗರೂಕತೆಯಿಂದ ಸಂಚರಿಸುವುದರಿಂದ ಅಪಘಾತಗಳು ನಡೆಯುತ್ತವೆ ಎಂದು ಸಾರ್ವಜನಿಕರು ದೂರಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-40-1456810836</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>