<p><strong>ಮದ್ದೂರು</strong>: ಇಲ್ಲಿನ ಪುರಸಭೆಯನ್ನು ನಗರಸಭೆಯನ್ನಾಗಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.</p>.<p>23 ವಾರ್ಡ್ಗಳನ್ನು ಹೊಂದಿರುವ ಪುರಸಭೆಗೆ ಸಮೀಪದ ಚಾಮನಹಳ್ಳಿ ಗ್ರಾ.ಪಂ.ದೇಶಹಳ್ಳಿ, ಸೋಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೋಮನಹಳ್ಳಿ, ಕೆ. ಕೋಡಿಹಳ್ಳಿ, ರುದ್ರಾಕ್ಷಿಪುರ, ಅಗರಲಿಂಗನದೊಡ್ಡಿ, ಗೆಜ್ಜಲಗೆರೆ ಗ್ರಾಮ ಪಂಚಾಯಿತಿಯ ಗೆಜ್ಜಲಗೆರೆ ಹಾಗೂ ಗೊರವನಹಳ್ಳಿ ಗ್ರಾಮಗಳು ನಗರಸಭಾ ವ್ಯಾಪ್ತಿಗೆ ಬರಲಿವೆ.</p>.<p>ಮದ್ದೂರು ನಗರಸಭಾ ವ್ಯಾಪ್ತಿಗೆ ಸೇರ್ಪಡೆಗೊಳಿಸಬಾರದು ಎಂದು ಆಗ್ರಹಿಸಿ ಕೆಲವು ತಿಂಗಳುಗಳ ಹಿಂದೆ ಗೆಜ್ಜಲಗೆರೆ, ಸೋಮನಹಳ್ಳಿ, ಚಾಮನಹಳ್ಳಿ ಹಾಗೂ ಗೊರವನಹಳ್ಳಿ ಗ್ರಾಮದ ಗ್ರಾಮಸ್ಥರು ಹಾಗೂ ಕೆಲವು ಸಂಘಟನೆಯವರು ಸ್ಥಳೀಯ ಗ್ರಾಮ ಪಂಚಾಯಿತಿಗಳ ಮುಂದೆ ಹಾಗೂ ಪಟ್ಟಣದ ತಾಲ್ಲೂಕು ಕಚೇರಿಯೆದುರು ಪ್ರತಿಭಟನೆ ನಡೆಸಿದ್ದರು.</p>.<p>ಗ್ರಾಮಗಳು ಮದ್ದೂರು ನಗರಸಭೆಗೆ ಒಳಪಟ್ಟರೆ ಗ್ರಾಮೀಣ ಕೃಪಾಂಕ, ನರೇಗಾ ಕೆಲಸಗಳಿಂದ ವಂಚಿತರಾಗಬೇಕಾಗುತ್ತದೆ. ನಿವೇಶನಗಳ ಹಾಗೂ ನೀರಿನ ಕಂದಾಯ ಹೆಚ್ಚಾಗುತ್ತದೆ ಎಂಬುದು ಅವರ ವಾದವಾಗಿತ್ತು.</p>.<div><blockquote>ನಗರಸಭೆಯಾಗುವುದು ಸ್ವಾಗತಾರ್ಹವಾಗಿದ್ದು ಮದ್ದೂರಿನ ಅಭಿವೃದ್ಧಿಗೆ ಪೂರಕವಾಗಿದೆ. ಇದರಲ್ಲಿ ಕ್ಷೇತ್ರದ ಶಾಸಕ ಕೆ.ಎಂ.ಉದಯ್ ಅವರ ಶ್ರಮವಿದೆ.</blockquote><span class="attribution">– ಕೋಕಿಲಾ ಅರುಣ್, ಪುರಸಭಾ ಅಧ್ಯಕ್ಷೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು</strong>: ಇಲ್ಲಿನ ಪುರಸಭೆಯನ್ನು ನಗರಸಭೆಯನ್ನಾಗಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.</p>.<p>23 ವಾರ್ಡ್ಗಳನ್ನು ಹೊಂದಿರುವ ಪುರಸಭೆಗೆ ಸಮೀಪದ ಚಾಮನಹಳ್ಳಿ ಗ್ರಾ.ಪಂ.ದೇಶಹಳ್ಳಿ, ಸೋಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೋಮನಹಳ್ಳಿ, ಕೆ. ಕೋಡಿಹಳ್ಳಿ, ರುದ್ರಾಕ್ಷಿಪುರ, ಅಗರಲಿಂಗನದೊಡ್ಡಿ, ಗೆಜ್ಜಲಗೆರೆ ಗ್ರಾಮ ಪಂಚಾಯಿತಿಯ ಗೆಜ್ಜಲಗೆರೆ ಹಾಗೂ ಗೊರವನಹಳ್ಳಿ ಗ್ರಾಮಗಳು ನಗರಸಭಾ ವ್ಯಾಪ್ತಿಗೆ ಬರಲಿವೆ.</p>.<p>ಮದ್ದೂರು ನಗರಸಭಾ ವ್ಯಾಪ್ತಿಗೆ ಸೇರ್ಪಡೆಗೊಳಿಸಬಾರದು ಎಂದು ಆಗ್ರಹಿಸಿ ಕೆಲವು ತಿಂಗಳುಗಳ ಹಿಂದೆ ಗೆಜ್ಜಲಗೆರೆ, ಸೋಮನಹಳ್ಳಿ, ಚಾಮನಹಳ್ಳಿ ಹಾಗೂ ಗೊರವನಹಳ್ಳಿ ಗ್ರಾಮದ ಗ್ರಾಮಸ್ಥರು ಹಾಗೂ ಕೆಲವು ಸಂಘಟನೆಯವರು ಸ್ಥಳೀಯ ಗ್ರಾಮ ಪಂಚಾಯಿತಿಗಳ ಮುಂದೆ ಹಾಗೂ ಪಟ್ಟಣದ ತಾಲ್ಲೂಕು ಕಚೇರಿಯೆದುರು ಪ್ರತಿಭಟನೆ ನಡೆಸಿದ್ದರು.</p>.<p>ಗ್ರಾಮಗಳು ಮದ್ದೂರು ನಗರಸಭೆಗೆ ಒಳಪಟ್ಟರೆ ಗ್ರಾಮೀಣ ಕೃಪಾಂಕ, ನರೇಗಾ ಕೆಲಸಗಳಿಂದ ವಂಚಿತರಾಗಬೇಕಾಗುತ್ತದೆ. ನಿವೇಶನಗಳ ಹಾಗೂ ನೀರಿನ ಕಂದಾಯ ಹೆಚ್ಚಾಗುತ್ತದೆ ಎಂಬುದು ಅವರ ವಾದವಾಗಿತ್ತು.</p>.<div><blockquote>ನಗರಸಭೆಯಾಗುವುದು ಸ್ವಾಗತಾರ್ಹವಾಗಿದ್ದು ಮದ್ದೂರಿನ ಅಭಿವೃದ್ಧಿಗೆ ಪೂರಕವಾಗಿದೆ. ಇದರಲ್ಲಿ ಕ್ಷೇತ್ರದ ಶಾಸಕ ಕೆ.ಎಂ.ಉದಯ್ ಅವರ ಶ್ರಮವಿದೆ.</blockquote><span class="attribution">– ಕೋಕಿಲಾ ಅರುಣ್, ಪುರಸಭಾ ಅಧ್ಯಕ್ಷೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>