ಸಾವಿರಾರು ಭಕ್ತರು ಮದ್ದೂರಮ್ಮ ದೇವರಿಗೆ ಪೂಜೆ ಸಲ್ಲಿಸಿದರು. ಸಿಡಿ ಉತ್ಸವದ ಅಂಗವಾಗಿ ಸಂಜೆ ಸಿಡಿರಣ್ಣನ ಉತ್ಸವ ನಡೆಯಿತು. ವಿವಿಧ ಕಡೆಗಳಿಂದ ಬಂದಿದ್ದ ಪೋಷಕರು ಸಿಡಿರಣ್ಣನ ತೊಟ್ಟಿಲಿನಲ್ಲಿ ಮಕ್ಕಳನ್ನು ಕೂರಿಸಿ ಹರಕೆ ತೀರಿಸಿದರು. ತೊಟ್ಟಿಲಲ್ಲಿ ಮಕ್ಕಳನ್ನು ಕೂರಿಸಿ ತೂಗುವುದರಿಂದ ಆ ಮಗುವಿಗೆ ಭವಿಷ್ಯದಲ್ಲಿ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಇದೆ. ಈ ಉತ್ಸವ ನೋಡಲು ಸಾವಿರಾರು ಮಂದಿ ನೆರೆದಿದ್ದರು. ಮೈಸೂರು– ಬೆಂಗಳೂರು ಹೆದ್ದಾರಿಯಲ್ಲಿ ಜನ ದಟ್ಟಣೆ ಹೆಚ್ಚಾಗಿತ್ತು.