ರಾಜ್ಯದಲ್ಲಿ 8 ಲಕ್ಷ ಮಡಿವಾಳರು ಇದ್ದಾರೆ ಎಂದು ಸರ್ಕಾರದ ವರದಿ ಹೇಳುತ್ತಿದೆ. ಆದರೆ, ಮಡಿವಾಳರು ಎಲ್ಲ ಕ್ಷೇತ್ರಗಳಲ್ಲಿ ಹಿಂದುಳಿದಿದ್ದು, ಪಡಿತರ ಚೀಟಿ, ಸಾಲ ಸೌಲಭ್ಯ ಕೂಡ ಸಿಗುತ್ತಿಲ್ಲ. ನಿಕೃಷ್ಟ ಜೀವನ ನಡೆಸುತ್ತಿದ್ದೇವೆ. ನಮ್ಮ ಹಕ್ಕು ನಮಗೆ ದಕ್ಕಬೇಕು. ಅದಕ್ಕಾಗಿ ಅಗತ್ಯ ಬಿದ್ದರೆ ಹೋರಾಟ ರೂಪಿಸುತ್ತೇವೆ’ ಎಂದು ಎಚ್ಚರಿಸಿದರು.