‘ನಾಗರಿಕರಿಗೊಂದು ಸವಾಲು ಕಾರ್ಯಕ್ರಮದ ಅಡಿ ಗ್ರಾಮೀಣ, ನಗರ ಪ್ರದೇಶಗಳಲ್ಲಿರುವ ಮನೆಗಳು ಮತ್ತು ಸರ್ಕಾರಿ ಹಾಗೂ ಎಲ್ಲಾ ಖಾಸಗಿ ಸಂಸ್ಥೆಗಳಿಗೆ ಆರೋಗ್ಯ ಸಹಾಯಕರು,ಆಶಾ ಕಾರ್ಯಕರ್ತೆಯರು ಭೇಟಿ ನೀಡಿ ಡೆಂಗಿ, ಚಿಕೂನ್ಗುನ್ಯಾ ಸೇರಿ ಇತರ ರೋಗಗಳ ಬಗ್ಗೆ ಅವರಲ್ಲಿ ಪ್ರಶ್ನೆಗಳನ್ನು ಕೇಳಿ, ಸರಿಯಾದ ಉತ್ತರ ನೀಡಿದವರಿಗೆ ಪ್ರಮಾಣ ಪತ್ರವನ್ನು ಕೊಡುವುದರ ಮೂಲಕ ರೋಗ ನಿಯಂತ್ರಣದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಲಾಗುತ್ತದೆ’ ಎಂದು ಸಲಹೆ ನೀಡಿದರು.