<p><strong>ಮಳವಳ್ಳಿ:</strong> ತಾಲ್ಲೂಕಿನ ಕಿರುಗಾವಲು ಗ್ರಾಮದ ಯುವ ರೈತ ಉಲ್ಲಾಸ್ ಗೌಡ ಅವರು ಬಹು ಬೇಡಿಕೆಯ ಬಂಡೂರು ತಳಿಯ ಏಳು ತಿಂಗಳ 2 ಟಗರು ಮರಿಗಳನ್ನು ಬರೋಬ್ಬರಿ ₹1.60 ಲಕ್ಷಕ್ಕೆ ಮಾರಾಟ ಮಾಡಿದ್ದಾರೆ.</p>.<p>ಕಿರುಗಾವಲಿನ ಕುಮಾರ್ ಮತ್ತು ವಡ್ಡರಹಳ್ಳಿಯ ಕುಳ್ಳೇಗೌಡ ಎಂಬುವವರು ಖರೀದಿಸಿದ್ದಾರೆ.</p>.<p>ಬಿಸಿಎ ವ್ಯಾಸಂಗ ಮಾಡುತ್ತಿರುವ ಉಲ್ಲಾಸ್ ಗೌಡ ಅವರ ಕುಟುಂಬ ಬಂಡೂರು ಕುರಿ ಸಾಕಾಣಿಕೆಯಲ್ಲಿ ತೊಡಗಿದೆ. ನಾಲ್ಕೈದು ತಿಂಗಳ ಹಿಂದೆ ಶಿವಮೊಗ್ಗ ಮೂಲದ ರೈತರಿಗೆ ಕುರಿಯೊಂದನ್ನು ₹1.48 ಲಕ್ಷಕ್ಕೆ ಮಾರಾಟ ಮಾಡಿದ್ದರು.</p>.<p>‘ನಮ್ಮ ತಾತ ಹಾಗೂ ತಂದೆ ಮನೋಹರ್ ಅವರು ಕುರಿ ಸಾಕಾಣಿಕೆ ಮಾಡುತ್ತಿದ್ದರು, ನಾನು ಅವರೊಂದಿಗೆ ಕೈಜೋಡಿಸಿದ್ದೇನೆ. ವಿಶೇಷ ಕಾಳಜಿಯಿಂದ ಸಾಕುತ್ತೇವೆ’ ಎಂದು ಉಲ್ಲಾಸ್ ಗೌಡ ಹೇಳಿದರು.</p>.<p>‘ಬಂಡೂರು ಕುರಿಯ ಮಾಂಸ ಸಾಮಾನ್ಯ ಕುರಿ ಹಾಗೂ ಮೇಕೆಗಳಿಗಿಂತ ಹೆಚ್ಚು ರುಚಿ ಇರುತ್ತದೆ. ಮಾಂಸ ಮಾರಾಟ ತೀರ ಅಪರೂವಾಗಿದೆ. ಈ ತಳಿಯ ಕುರಿಗಳು ಕಡಿಮೆ ಇವೆ’ ಎಂದರು.</p>.<p>ಹೆಚ್ಚು ಬೆಲೆಗೆ ಮಾರಾಟವಾದ ಕುರಿಗಳಿಗೆ ವಿಶೇಷ ಪೂಜೆ ಮಾಡಿ, ಮೆರವಣಿಗೆ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಳವಳ್ಳಿ:</strong> ತಾಲ್ಲೂಕಿನ ಕಿರುಗಾವಲು ಗ್ರಾಮದ ಯುವ ರೈತ ಉಲ್ಲಾಸ್ ಗೌಡ ಅವರು ಬಹು ಬೇಡಿಕೆಯ ಬಂಡೂರು ತಳಿಯ ಏಳು ತಿಂಗಳ 2 ಟಗರು ಮರಿಗಳನ್ನು ಬರೋಬ್ಬರಿ ₹1.60 ಲಕ್ಷಕ್ಕೆ ಮಾರಾಟ ಮಾಡಿದ್ದಾರೆ.</p>.<p>ಕಿರುಗಾವಲಿನ ಕುಮಾರ್ ಮತ್ತು ವಡ್ಡರಹಳ್ಳಿಯ ಕುಳ್ಳೇಗೌಡ ಎಂಬುವವರು ಖರೀದಿಸಿದ್ದಾರೆ.</p>.<p>ಬಿಸಿಎ ವ್ಯಾಸಂಗ ಮಾಡುತ್ತಿರುವ ಉಲ್ಲಾಸ್ ಗೌಡ ಅವರ ಕುಟುಂಬ ಬಂಡೂರು ಕುರಿ ಸಾಕಾಣಿಕೆಯಲ್ಲಿ ತೊಡಗಿದೆ. ನಾಲ್ಕೈದು ತಿಂಗಳ ಹಿಂದೆ ಶಿವಮೊಗ್ಗ ಮೂಲದ ರೈತರಿಗೆ ಕುರಿಯೊಂದನ್ನು ₹1.48 ಲಕ್ಷಕ್ಕೆ ಮಾರಾಟ ಮಾಡಿದ್ದರು.</p>.<p>‘ನಮ್ಮ ತಾತ ಹಾಗೂ ತಂದೆ ಮನೋಹರ್ ಅವರು ಕುರಿ ಸಾಕಾಣಿಕೆ ಮಾಡುತ್ತಿದ್ದರು, ನಾನು ಅವರೊಂದಿಗೆ ಕೈಜೋಡಿಸಿದ್ದೇನೆ. ವಿಶೇಷ ಕಾಳಜಿಯಿಂದ ಸಾಕುತ್ತೇವೆ’ ಎಂದು ಉಲ್ಲಾಸ್ ಗೌಡ ಹೇಳಿದರು.</p>.<p>‘ಬಂಡೂರು ಕುರಿಯ ಮಾಂಸ ಸಾಮಾನ್ಯ ಕುರಿ ಹಾಗೂ ಮೇಕೆಗಳಿಗಿಂತ ಹೆಚ್ಚು ರುಚಿ ಇರುತ್ತದೆ. ಮಾಂಸ ಮಾರಾಟ ತೀರ ಅಪರೂವಾಗಿದೆ. ಈ ತಳಿಯ ಕುರಿಗಳು ಕಡಿಮೆ ಇವೆ’ ಎಂದರು.</p>.<p>ಹೆಚ್ಚು ಬೆಲೆಗೆ ಮಾರಾಟವಾದ ಕುರಿಗಳಿಗೆ ವಿಶೇಷ ಪೂಜೆ ಮಾಡಿ, ಮೆರವಣಿಗೆ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>