<p>ಮಳವಳ್ಳಿ: ಬಿ.ಆರ್.ಅಂಬೇಡ್ಕರ್ ಅವರನ್ನು ಒಂದು ಜಾತಿ ಹಾಗೂ ಮತಕ್ಕೆ ಸೀಮಿತಗೊಳಿಸುವ ಕ್ಷುಲ್ಲಕ ಮನಸ್ಥಿತಿಯಿಂದ ಹೊರ ಬಂದು ಅವರನ್ನು ವಿಶ್ವಮಾನವರಾಗಿ ನಾವು ನೋಡಬೇಕು ಎಂದು ವಿಶ್ವಮಾನವ ವಿಚಾರ ವೇದಿಕೆಯ ಅಧ್ಯಕ್ಷ ಬಿ.ಮಹದೇವು ಹೇಳಿದರು.</p>.<p>ಪಟ್ಟಣದ ವಿಶ್ವಮಾನವ ವಿಚಾರ ವೇದಿಕೆಯ ಕಚೇರಿಯಲ್ಲಿ ಈಚೆಗೆ ಆಯೋಜಿಸಿದ್ದ ಬಿ.ಆರ್.ಅಂಬೇಡ್ಕರ್ ಅವರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ದೇಶದ ಘನತೆಯನ್ನು ಉತ್ತುಂಗಕ್ಕೆ ಎತ್ತರಿಸಿ ಈ ದೇಶದ ನಾಗರಿಕರಿಗೆ ಗರ್ಭದಿಂದ ಗೋರಿಯವರೆಗೂ ಹಕ್ಕುಗಳನ್ನು ಸ್ಥಾಪಿಸುವುದರ ಮೂಲಕ ಶ್ರೇಷ್ಠ ಸಂವಿಧಾನವನ್ನು ನೀಡಿದ ಕೀರ್ತಿ ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ. ಇಂತಹ ಮಹನೀಯರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ’ ಎಂದು ಅಭಿಪ್ರಾಯಪಟ್ಟರು.</p>.<p>‘ಜಗತ್ತಿನಲ್ಲಿಯೇ ಶ್ರೇಷ್ಠ ಸಂವಿಧಾನವನ್ನು ನೀಡುವ ಮೂಲಕ ಪ್ರಜಾಪ್ರಭುತ್ವಕ್ಕೆ ಬುನಾದಿ ಹಾಕಿದ ಅಂಬೇಡ್ಕರ್ ಅವರ ಪರಿಶ್ರಮವನ್ನು ಶ್ಲಾಘಿಸಲು ಬರಿ ಪ್ರತಿಮೆ ನಿರ್ಮಿಸಿದರೆ ಸಾಲದು. ಬದಲಾಗಿ ಅವರ ವಿಚಾರಧಾರೆಗಳನ್ನು ಅಳವಡಿಸಿಕೊಂಡು ಅವರ ಕನಸಿನ ಭಾರತ ಕಟ್ಟಲು ಸಾಧ್ಯವಾಗುತ್ತದೆ’ ಎಂದು ಹೇಳಿದರು.</p>.<p>ವೇದಿಕೆಯ ಪ್ರಧಾನ ಕಾರ್ಯದರ್ಶಿ ಎನ್.ಎಲ್.ಭರತ್ ರಾಜ್, ಮುಖಂಡರಾದ ಸುರೇಶ್, ದಯಾಶಂಕರ್, ಚೇತನ್ ಕುಮಾರ್, ಮಲ್ಲಿಕಾರ್ಜುನಸ್ವಾಮಿ, ಎಂ.ಇ.ಮಹದೇವು, ಎಂ.ನಾಗೇಶ್, ದೊಡ್ಡಮರಿಗೌಡ, ಚುಂಚಣ್ಣ, ಪುಟ್ಟಮಂಚಮ್ಮ, ಲೋಕೇಶ್, ಮಲ್ಲಿಕಾರ್ಜುನ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-40-2093112275</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಳವಳ್ಳಿ: ಬಿ.ಆರ್.ಅಂಬೇಡ್ಕರ್ ಅವರನ್ನು ಒಂದು ಜಾತಿ ಹಾಗೂ ಮತಕ್ಕೆ ಸೀಮಿತಗೊಳಿಸುವ ಕ್ಷುಲ್ಲಕ ಮನಸ್ಥಿತಿಯಿಂದ ಹೊರ ಬಂದು ಅವರನ್ನು ವಿಶ್ವಮಾನವರಾಗಿ ನಾವು ನೋಡಬೇಕು ಎಂದು ವಿಶ್ವಮಾನವ ವಿಚಾರ ವೇದಿಕೆಯ ಅಧ್ಯಕ್ಷ ಬಿ.ಮಹದೇವು ಹೇಳಿದರು.</p>.<p>ಪಟ್ಟಣದ ವಿಶ್ವಮಾನವ ವಿಚಾರ ವೇದಿಕೆಯ ಕಚೇರಿಯಲ್ಲಿ ಈಚೆಗೆ ಆಯೋಜಿಸಿದ್ದ ಬಿ.ಆರ್.ಅಂಬೇಡ್ಕರ್ ಅವರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ದೇಶದ ಘನತೆಯನ್ನು ಉತ್ತುಂಗಕ್ಕೆ ಎತ್ತರಿಸಿ ಈ ದೇಶದ ನಾಗರಿಕರಿಗೆ ಗರ್ಭದಿಂದ ಗೋರಿಯವರೆಗೂ ಹಕ್ಕುಗಳನ್ನು ಸ್ಥಾಪಿಸುವುದರ ಮೂಲಕ ಶ್ರೇಷ್ಠ ಸಂವಿಧಾನವನ್ನು ನೀಡಿದ ಕೀರ್ತಿ ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ. ಇಂತಹ ಮಹನೀಯರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ’ ಎಂದು ಅಭಿಪ್ರಾಯಪಟ್ಟರು.</p>.<p>‘ಜಗತ್ತಿನಲ್ಲಿಯೇ ಶ್ರೇಷ್ಠ ಸಂವಿಧಾನವನ್ನು ನೀಡುವ ಮೂಲಕ ಪ್ರಜಾಪ್ರಭುತ್ವಕ್ಕೆ ಬುನಾದಿ ಹಾಕಿದ ಅಂಬೇಡ್ಕರ್ ಅವರ ಪರಿಶ್ರಮವನ್ನು ಶ್ಲಾಘಿಸಲು ಬರಿ ಪ್ರತಿಮೆ ನಿರ್ಮಿಸಿದರೆ ಸಾಲದು. ಬದಲಾಗಿ ಅವರ ವಿಚಾರಧಾರೆಗಳನ್ನು ಅಳವಡಿಸಿಕೊಂಡು ಅವರ ಕನಸಿನ ಭಾರತ ಕಟ್ಟಲು ಸಾಧ್ಯವಾಗುತ್ತದೆ’ ಎಂದು ಹೇಳಿದರು.</p>.<p>ವೇದಿಕೆಯ ಪ್ರಧಾನ ಕಾರ್ಯದರ್ಶಿ ಎನ್.ಎಲ್.ಭರತ್ ರಾಜ್, ಮುಖಂಡರಾದ ಸುರೇಶ್, ದಯಾಶಂಕರ್, ಚೇತನ್ ಕುಮಾರ್, ಮಲ್ಲಿಕಾರ್ಜುನಸ್ವಾಮಿ, ಎಂ.ಇ.ಮಹದೇವು, ಎಂ.ನಾಗೇಶ್, ದೊಡ್ಡಮರಿಗೌಡ, ಚುಂಚಣ್ಣ, ಪುಟ್ಟಮಂಚಮ್ಮ, ಲೋಕೇಶ್, ಮಲ್ಲಿಕಾರ್ಜುನ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-40-2093112275</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>