<p><strong>ಮಳವಳ್ಳಿ (ಮಂಡ್ಯ):</strong> ಕಲುಷಿತ ಆಹಾರ ಸೇವನೆಯಿಂದ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದ 40 ಮಕ್ಕಳ ಪೈಕಿ, ತಾಲ್ಲೂಕಿನ ಟಿ.ಕಾಗೇಪುರ ಗೋಕುಲ ವಿದ್ಯಾಸಂಸ್ಥೆಯ ಮತ್ತೊಬ್ಬ ವಿದ್ಯಾರ್ಥಿ, ಮೇಘಾಲಯದ ನಮೀಬ್ ಮಾಂತೆ (12) ಸೋಮವಾರ ತಡರಾತ್ರಿ ಮೈಸೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 2ಕ್ಕೇರಿದೆ. </p>.<p>ಉದ್ಯಮಿ ಪುಷ್ಪೇಂದ್ರಕುಮಾರ್ ಶುಕ್ರವಾರ ಕಳಿಸಿದ್ದ ಆಹಾರ ಸೇವಿಸಿ ಅಸ್ವಸ್ಥಗೊಂಡಿದ್ದ ಮಾಂತೆಯನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಯಿಂದ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉದ್ಯಮಿ ಸೇರಿ ಆತನ 40 ಸಂಬಂಧಿಕರು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. </p>.<h2><strong>ಮೇಘಾಲಯದ ಅಧಿಕಾರಿಗಳು ಭೇಟಿ:</strong></h2>.<p>ಮೇಘಾಲಯ ಆಡಳಿತ ಇಲಾಖೆಯ ಆಯುಕ್ತ ಸಿರಿಲ್, ಕಾರ್ಯದರ್ಶಿ ಕ್ರಯಿಲ್ ವಿ ಡಿಂಗ್ ದೋ ಅವರು ಮಿಮ್ಸ್ ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ, ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿ, ವೈದ್ಯರಿಂದ ಮಾಹಿತಿ ಪಡೆದರು. ಘಟನೆಯ ಬಗ್ಗೆ ಜಿಲ್ಲಾಧಿಕಾರಿ ಕುಮಾರ ಮಾಹಿತಿ ನೀಡಿದರು. </p>.<p>‘ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ನಾಲ್ವರು ಐಸಿಯುನಲ್ಲಿದ್ದಾರೆ. 16 ವಿದ್ಯಾರ್ಥಿಗಳು ಸಾಮಾನ್ಯ ವಾರ್ಡಿನಲ್ಲಿದ್ದಾರೆ. ಮೇಘಾಲಯ ಮುಖ್ಯಮಂತ್ರಿ ಸೂಚನೆ ಮೇರೆಗೆ ಭೇಟಿ ನೀಡಿದ್ದು, ಮೃತದೇಹಗಳನ್ನು ಅಲ್ಲಿಗೆ ರವಾನಿಸುವ ಬಗ್ಗೆ ಚಿಂತನೆ ನಡೆದಿದೆ. ಮೃತರ ಕುಟುಂಬಕ್ಕೆ ಪರಿಹಾರ ನೀಡಲಾಗುವುದು’ ಎಂದರು. </p>.<p>ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳ ತಂಡವು, ಘಟನೆಗೆ ಕಾರಣ ಎನ್ನಲಾದ ಮಳವಳ್ಳಿಯ ಲಕ್ಷ್ಮೀನರಸಿಂಹಸ್ವಾಮಿ ಹೋಟೆಲ್ನಿಂದ ಆಹಾರದ ಮಾದರಿಗಳನ್ನು ಮಂಗಳವಾರ ಸಂಗ್ರಹಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಳವಳ್ಳಿ (ಮಂಡ್ಯ):</strong> ಕಲುಷಿತ ಆಹಾರ ಸೇವನೆಯಿಂದ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದ 40 ಮಕ್ಕಳ ಪೈಕಿ, ತಾಲ್ಲೂಕಿನ ಟಿ.ಕಾಗೇಪುರ ಗೋಕುಲ ವಿದ್ಯಾಸಂಸ್ಥೆಯ ಮತ್ತೊಬ್ಬ ವಿದ್ಯಾರ್ಥಿ, ಮೇಘಾಲಯದ ನಮೀಬ್ ಮಾಂತೆ (12) ಸೋಮವಾರ ತಡರಾತ್ರಿ ಮೈಸೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 2ಕ್ಕೇರಿದೆ. </p>.<p>ಉದ್ಯಮಿ ಪುಷ್ಪೇಂದ್ರಕುಮಾರ್ ಶುಕ್ರವಾರ ಕಳಿಸಿದ್ದ ಆಹಾರ ಸೇವಿಸಿ ಅಸ್ವಸ್ಥಗೊಂಡಿದ್ದ ಮಾಂತೆಯನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಯಿಂದ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉದ್ಯಮಿ ಸೇರಿ ಆತನ 40 ಸಂಬಂಧಿಕರು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. </p>.<h2><strong>ಮೇಘಾಲಯದ ಅಧಿಕಾರಿಗಳು ಭೇಟಿ:</strong></h2>.<p>ಮೇಘಾಲಯ ಆಡಳಿತ ಇಲಾಖೆಯ ಆಯುಕ್ತ ಸಿರಿಲ್, ಕಾರ್ಯದರ್ಶಿ ಕ್ರಯಿಲ್ ವಿ ಡಿಂಗ್ ದೋ ಅವರು ಮಿಮ್ಸ್ ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ, ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿ, ವೈದ್ಯರಿಂದ ಮಾಹಿತಿ ಪಡೆದರು. ಘಟನೆಯ ಬಗ್ಗೆ ಜಿಲ್ಲಾಧಿಕಾರಿ ಕುಮಾರ ಮಾಹಿತಿ ನೀಡಿದರು. </p>.<p>‘ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ನಾಲ್ವರು ಐಸಿಯುನಲ್ಲಿದ್ದಾರೆ. 16 ವಿದ್ಯಾರ್ಥಿಗಳು ಸಾಮಾನ್ಯ ವಾರ್ಡಿನಲ್ಲಿದ್ದಾರೆ. ಮೇಘಾಲಯ ಮುಖ್ಯಮಂತ್ರಿ ಸೂಚನೆ ಮೇರೆಗೆ ಭೇಟಿ ನೀಡಿದ್ದು, ಮೃತದೇಹಗಳನ್ನು ಅಲ್ಲಿಗೆ ರವಾನಿಸುವ ಬಗ್ಗೆ ಚಿಂತನೆ ನಡೆದಿದೆ. ಮೃತರ ಕುಟುಂಬಕ್ಕೆ ಪರಿಹಾರ ನೀಡಲಾಗುವುದು’ ಎಂದರು. </p>.<p>ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳ ತಂಡವು, ಘಟನೆಗೆ ಕಾರಣ ಎನ್ನಲಾದ ಮಳವಳ್ಳಿಯ ಲಕ್ಷ್ಮೀನರಸಿಂಹಸ್ವಾಮಿ ಹೋಟೆಲ್ನಿಂದ ಆಹಾರದ ಮಾದರಿಗಳನ್ನು ಮಂಗಳವಾರ ಸಂಗ್ರಹಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>