ತಿ.ನರಸೀಪುರ ತಾಲ್ಲೂಕಿನ ವಡ್ಡರಕೊಪ್ಪಲು ಗ್ರಾಮದ ಶಿವಕುಮಾರ್ ಎಂಬವರ ಪತ್ನಿ ಸವಿತಾ ದೂರು ಕೊಟ್ಟವರು. ಈ ದಂಪತಿ ಹಲವು ವರ್ಷಗಳ ಹಿಂದೆಯೇ ಗ್ರಾಮ ತೊರೆದಿದ್ದರು. ಮರಳಿ ಗ್ರಾಮಕ್ಕೆ ಭೇಟಿ ನೀಡಬೇಕಾದಾಗ, ತಮಗೆ ಮಗುವಿದೆ ಎಂದು ಸಂಬಂಧಿಗಳಿಗೆ ತಿಳಿಸಲು ನಿರ್ಧರಿಸಿದ್ದರು. ಸೋಮವಾರ ಸಂಜೆ ಚನ್ನಪಟ್ಟಣದಿಂದ ಮಳವಳ್ಳಿಗೆ ಬಂದಾಗ ಸಾರಿಗೆ ಬಸ್ನಲ್ಲಿ ಮಗು ಅಪಹರಣವಾಗಿದೆ ಎಂದು ಸುಳ್ಳು ಹೇಳಿ, ಕಣ್ಣೀರು ಹಾಕುತ್ತಾ ಪಟ್ಟಣದ ಪೊಲೀಸ್ ಠಾಣೆಗೆ ಮಹಿಳೆ ದೂರು ನೀಡಿದ್ದರು.