<p><strong>ಮಳವಳ್ಳಿ:</strong> ‘ಪ್ರಸ್ತುತ ದಿನಮಾನಗಳಲ್ಲಿ ನಮ್ಮಗಳ ಬದುಕಿಗಾಗಿ ಪರಿಸರವನ್ನು ನಾಶ ಮಾಡುತ್ತಿದ್ದೇವೆ. ಪರಿಸರ ಹಾಳಾದಂತೆ ನಮ್ಮಗಳ ಆರೋಗ್ಯದ ಮೇಲೆ ದುಷ್ಟಪರಿಣಾಮ ಬೀರುತ್ತದೆ’ ಎಂದು ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಕುಳ್ಳಚನ್ನಂಕಯ್ಯ ತಿಳಿಸಿದರು.</p>.<p>ತಾಲ್ಲೂಕಿನ ಕಂದೇಗಾಲ-ಕಲ್ಲುವೀರನಹಳ್ಳಿ ಬಳಿಯ ಮತ್ತಿತಾಳೇಶ್ವರಸ್ವಾಮಿ ದೇವಸ್ಥಾನ ಆವರಣದಲ್ಲಿ ತಳಗವಾದಿ ಸರ್ಕಾರಿ ಪ್ರೌಢಶಾಲೆಯ ವತಿಯಿಂದ ಆಯೋಜಿಸಿದ್ದ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಮನುಷ್ಯರು ಆರೋಗ್ಯವಂತರಾಗಿರಬೇಕಾದರೆ ಪ್ರತಿಯೊಬ್ಬರು ಗಿಡ-ಮರಗಳನ್ನು ಬೆಳಸಿ ಪರಿಸರವನ್ನು ಉಳಿಸುವುದಕ್ಕೆ ಮುಂದಾಗಬೇಕು. ಎಲ್ಲರಿಗೂ ಪರಿಸರದ ಬಗ್ಗೆ ಕಾಳಜಿ ಇರಬೇಕು. ಭೂಮಿ ಮೇಲೆ ಗಿಡಮರಗಳು ಹೆಚ್ಚಾಗಿದ್ದರೆ ಉತ್ತಮ ಗಾಳಿ ಬೀಸಲಿದೆ. ಮಳೆ ಆಗುತ್ತದೆ. ಪ್ರತಿಯೊಬ್ಬರು ಒಂದರೆಡು ಗಿಡಗಳನ್ನಾದರೂ ಬೆಳಸುವಂತಾಬೇಕು’ ಎಂದು ಕರೆ ನೀಡಿದರು.</p>.<p>ಮುಖ್ಯಶಿಕ್ಷಕ ಆರ್.ನಿರಂಜನ್ ಮಾತನಾಡಿ, ‘ವಿದ್ಯಾರ್ಥಿಗಳು ಬಾಲ್ಯದಿಂದಲೇ ಪರಿಸರದ ಬಗ್ಗೆ ಜಾಗೃತಿ ಹೊಂದಬೇಕು. ಶಾಲೆಯ ಆವರಣದಲ್ಲಿ ಕೇವಲ ಸಸಿಗಳನ್ನು ನೆಟ್ಟರ ಆಗುವುದಿಲ್ಲ, ನೆಟ್ಟ ಸಸಿಗಳನ್ನು ಪೋಷಿಸುವ ಕೆಲಸವನ್ನು ಸಹ ಮಾಡಬೇಕು’ ಎಂದು ಹೇಳಿದರು. ಎಸ್ಡಿಎಂಸಿ ಅಧ್ಯಕ್ಷ ಚೌಡೇಗೌಡ ಮಾತನಾಡಿದರು.</p>.<p>ದೇವಸ್ಥಾನದ ಆರ್ಚಕ ಮಂಜುನಾಥ್, ಗ್ರಾ.ಪಂ.ಮಾಜಿ ಅಧ್ಯಕ್ಷ ಮರಿಸ್ವಾಮಿ, ಮುಖಂಡರಾದ ರಾಜೇಶ್, ರಘು, ನಾಗೇಗೌಡ, ಶಿಕ್ಷಕರಾದ ಎಚ್.ಕೆ.ನಾಗರಾಜು, ಎ.ಎನ್.ಮಹೇಂದ್ರ, ಎನ್.ರಮೇಶ್, ಕಂದೇಗಾಲ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಹಾಗೂ ಶಿಕ್ಷಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಳವಳ್ಳಿ:</strong> ‘ಪ್ರಸ್ತುತ ದಿನಮಾನಗಳಲ್ಲಿ ನಮ್ಮಗಳ ಬದುಕಿಗಾಗಿ ಪರಿಸರವನ್ನು ನಾಶ ಮಾಡುತ್ತಿದ್ದೇವೆ. ಪರಿಸರ ಹಾಳಾದಂತೆ ನಮ್ಮಗಳ ಆರೋಗ್ಯದ ಮೇಲೆ ದುಷ್ಟಪರಿಣಾಮ ಬೀರುತ್ತದೆ’ ಎಂದು ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಕುಳ್ಳಚನ್ನಂಕಯ್ಯ ತಿಳಿಸಿದರು.</p>.<p>ತಾಲ್ಲೂಕಿನ ಕಂದೇಗಾಲ-ಕಲ್ಲುವೀರನಹಳ್ಳಿ ಬಳಿಯ ಮತ್ತಿತಾಳೇಶ್ವರಸ್ವಾಮಿ ದೇವಸ್ಥಾನ ಆವರಣದಲ್ಲಿ ತಳಗವಾದಿ ಸರ್ಕಾರಿ ಪ್ರೌಢಶಾಲೆಯ ವತಿಯಿಂದ ಆಯೋಜಿಸಿದ್ದ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಮನುಷ್ಯರು ಆರೋಗ್ಯವಂತರಾಗಿರಬೇಕಾದರೆ ಪ್ರತಿಯೊಬ್ಬರು ಗಿಡ-ಮರಗಳನ್ನು ಬೆಳಸಿ ಪರಿಸರವನ್ನು ಉಳಿಸುವುದಕ್ಕೆ ಮುಂದಾಗಬೇಕು. ಎಲ್ಲರಿಗೂ ಪರಿಸರದ ಬಗ್ಗೆ ಕಾಳಜಿ ಇರಬೇಕು. ಭೂಮಿ ಮೇಲೆ ಗಿಡಮರಗಳು ಹೆಚ್ಚಾಗಿದ್ದರೆ ಉತ್ತಮ ಗಾಳಿ ಬೀಸಲಿದೆ. ಮಳೆ ಆಗುತ್ತದೆ. ಪ್ರತಿಯೊಬ್ಬರು ಒಂದರೆಡು ಗಿಡಗಳನ್ನಾದರೂ ಬೆಳಸುವಂತಾಬೇಕು’ ಎಂದು ಕರೆ ನೀಡಿದರು.</p>.<p>ಮುಖ್ಯಶಿಕ್ಷಕ ಆರ್.ನಿರಂಜನ್ ಮಾತನಾಡಿ, ‘ವಿದ್ಯಾರ್ಥಿಗಳು ಬಾಲ್ಯದಿಂದಲೇ ಪರಿಸರದ ಬಗ್ಗೆ ಜಾಗೃತಿ ಹೊಂದಬೇಕು. ಶಾಲೆಯ ಆವರಣದಲ್ಲಿ ಕೇವಲ ಸಸಿಗಳನ್ನು ನೆಟ್ಟರ ಆಗುವುದಿಲ್ಲ, ನೆಟ್ಟ ಸಸಿಗಳನ್ನು ಪೋಷಿಸುವ ಕೆಲಸವನ್ನು ಸಹ ಮಾಡಬೇಕು’ ಎಂದು ಹೇಳಿದರು. ಎಸ್ಡಿಎಂಸಿ ಅಧ್ಯಕ್ಷ ಚೌಡೇಗೌಡ ಮಾತನಾಡಿದರು.</p>.<p>ದೇವಸ್ಥಾನದ ಆರ್ಚಕ ಮಂಜುನಾಥ್, ಗ್ರಾ.ಪಂ.ಮಾಜಿ ಅಧ್ಯಕ್ಷ ಮರಿಸ್ವಾಮಿ, ಮುಖಂಡರಾದ ರಾಜೇಶ್, ರಘು, ನಾಗೇಗೌಡ, ಶಿಕ್ಷಕರಾದ ಎಚ್.ಕೆ.ನಾಗರಾಜು, ಎ.ಎನ್.ಮಹೇಂದ್ರ, ಎನ್.ರಮೇಶ್, ಕಂದೇಗಾಲ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಹಾಗೂ ಶಿಕ್ಷಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>