<p><strong>ಮಳವಳ್ಳಿ</strong>: ಮೊಬೈಲ್ನಲ್ಲಿ ರೀಲ್ಸ್ ನೋಡುತ್ತಾ ಕೆಎಸ್ಆರ್ಟಿಸಿ ಬಸ್ ಚಾಲನೆ ಮಾಡುತ್ತಿದ್ದ ಚಾಲಕನ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ಬಸ್ ಚಾಲಕನನ್ನು ಅಮಾನತುಗೊಳಿಸಲಾಗಿದೆ.</p>.<p>ಶುಕ್ರವಾರ ಸಂಜೆ ಮಳವಳ್ಳಿಯಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ ಚಾಲನೆ ಮಾಡುವಾಗ ಚಾಲಕ ವಿ.ಮಹೇಶ್ ತಮ್ಮ ಮೊಬೈಲ್ನಲ್ಲಿ ರೀಲ್ಸ್ ನೋಡುತ್ತಿದ್ದ ಎನ್ನಲಾಗಿದೆ. ಇದನ್ನು ಗಮನಿಸಿದ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್ನಲ್ಲಿ ವಿಡಿಯೊ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.</p>.<p>ವೈರಲ್ ಆಗಿರುವ ವಿಡಿಯೊದಲ್ಲಿ ಬಸ್ ಚಾಲಕ ಮಹೇಶ್ ಸ್ಟಿಯರಿಂಗ್ ಬಳಿ ಮೊಬೈಲ್ ಇಟ್ಟುಕೊಂಡು ರೀಲ್ಸ್ ನೋಡುತ್ತಾ ಬಸ್ ಓಡಿಸುತ್ತಿರೊ ವಿಡಿಯೊ ಸೆರೆಯಾಗಿದೆ. ಬಸ್ ಸುಮಾರು 70-80 ಕಿ.ಮೀ. ವೇಗದಲ್ಲಿ ಚಲಿಸುತ್ತಿದ್ದ ಮಹೇಶ್ ಆ ಸಮಯದಲ್ಲಿ ಚಾಲಕನ ಗಮನ ಸಂಪೂರ್ಣವಾಗಿ ಮೊಬೈಲ್ ಮೇಲೆ ಇತ್ತು ಎಂದು ವಿಡಿಯೊ ನಿಖರವಾಗಿ ತೋರಿಸುತ್ತದೆ.</p>.<p>ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕೆಎಸ್ಆರ್ಟಿಸಿ ಅಧಿಕಾರಿಗಳು ರಸ್ತೆಯಲ್ಲಿ ಸಂಭವಿಸುವ ಸಾಕಷ್ಟು ಅಪಘಾತಗಳು ಬೇಜವಾಬ್ದಾರಿತನ, ನಿರ್ಲಕ್ಷ್ಯದ ಚಾಲನೆಯಿಂದ ಸಂಭವಿಸುತ್ತವೆ. ಸಾರ್ವಜನಿಕ ಸಾರಿಗೆಯ ಬಸ್ನಲ್ಲಿ ಚಾಲಕನ ಈ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯ ವರ್ತನೆಗೆ ನಿಗಮವು ಅವರನ್ನು ವಿಚಾರಣಾ ಪೂರ್ವ ಅಮಾನತು ಮಾಡಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಳವಳ್ಳಿ</strong>: ಮೊಬೈಲ್ನಲ್ಲಿ ರೀಲ್ಸ್ ನೋಡುತ್ತಾ ಕೆಎಸ್ಆರ್ಟಿಸಿ ಬಸ್ ಚಾಲನೆ ಮಾಡುತ್ತಿದ್ದ ಚಾಲಕನ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ಬಸ್ ಚಾಲಕನನ್ನು ಅಮಾನತುಗೊಳಿಸಲಾಗಿದೆ.</p>.<p>ಶುಕ್ರವಾರ ಸಂಜೆ ಮಳವಳ್ಳಿಯಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ ಚಾಲನೆ ಮಾಡುವಾಗ ಚಾಲಕ ವಿ.ಮಹೇಶ್ ತಮ್ಮ ಮೊಬೈಲ್ನಲ್ಲಿ ರೀಲ್ಸ್ ನೋಡುತ್ತಿದ್ದ ಎನ್ನಲಾಗಿದೆ. ಇದನ್ನು ಗಮನಿಸಿದ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್ನಲ್ಲಿ ವಿಡಿಯೊ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.</p>.<p>ವೈರಲ್ ಆಗಿರುವ ವಿಡಿಯೊದಲ್ಲಿ ಬಸ್ ಚಾಲಕ ಮಹೇಶ್ ಸ್ಟಿಯರಿಂಗ್ ಬಳಿ ಮೊಬೈಲ್ ಇಟ್ಟುಕೊಂಡು ರೀಲ್ಸ್ ನೋಡುತ್ತಾ ಬಸ್ ಓಡಿಸುತ್ತಿರೊ ವಿಡಿಯೊ ಸೆರೆಯಾಗಿದೆ. ಬಸ್ ಸುಮಾರು 70-80 ಕಿ.ಮೀ. ವೇಗದಲ್ಲಿ ಚಲಿಸುತ್ತಿದ್ದ ಮಹೇಶ್ ಆ ಸಮಯದಲ್ಲಿ ಚಾಲಕನ ಗಮನ ಸಂಪೂರ್ಣವಾಗಿ ಮೊಬೈಲ್ ಮೇಲೆ ಇತ್ತು ಎಂದು ವಿಡಿಯೊ ನಿಖರವಾಗಿ ತೋರಿಸುತ್ತದೆ.</p>.<p>ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕೆಎಸ್ಆರ್ಟಿಸಿ ಅಧಿಕಾರಿಗಳು ರಸ್ತೆಯಲ್ಲಿ ಸಂಭವಿಸುವ ಸಾಕಷ್ಟು ಅಪಘಾತಗಳು ಬೇಜವಾಬ್ದಾರಿತನ, ನಿರ್ಲಕ್ಷ್ಯದ ಚಾಲನೆಯಿಂದ ಸಂಭವಿಸುತ್ತವೆ. ಸಾರ್ವಜನಿಕ ಸಾರಿಗೆಯ ಬಸ್ನಲ್ಲಿ ಚಾಲಕನ ಈ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯ ವರ್ತನೆಗೆ ನಿಗಮವು ಅವರನ್ನು ವಿಚಾರಣಾ ಪೂರ್ವ ಅಮಾನತು ಮಾಡಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>