<p><strong>ಪಾಂಡವಪುರ</strong>: ರಾಷ್ಟೀಯ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಸೆ.14 ರಂದು ಬೃಹತ್ ಜನತಾ ನ್ಯಾಯಾಲಯ ಆಯೋಜಿಸಲಾಗಿದೆ ಎಂದು ಪಟ್ಟಣದ ಜೆಎಂಎಫ್ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ಮಹೇಶ್ ಮಂಗಳವಾರ ತಿಳಿಸಿದರು.</p>.<p>ಲೋಕ್ ಅದಾಲತ್ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಶೀಘ್ರವಾಗಿ ಮತ್ತು ಪರಿಣಾಮಕಾರಿಯಾಗಿ ಇತ್ಯರ್ಥ ಪಡಿಸಿಕೊಳ್ಳಬಹುದು. ಕಕ್ಷಿದಾರರು ಕಾನೂನು ಸೇವೆಗಳ ಸಮಿತಿಯನ್ನು ಸಂಪರ್ಕಿಸ ಬಹುದಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ತಾಲ್ಲೂಕಿನಲ್ಲಿ ಸೆ.14 ರಂದು ಲೋಕ್ ಅದಾಲತ್ಗೆ 150 ಎಂವಿಸಿ ಪ್ರಕರಣಗಳು, 9 ಎಂ.ಎಂ.ಆರ್.ಡಿ, 7 ಎಲ್.ಎ.ಸಿ, 100 ವಿಭಾಗದ ದಾವೆ ಪ್ರಕರಣಗಳು, 145 ಇತರೆ ಸಿವಿಲ್ ಪ್ರಕರಣಗಳು, 150 ನಿರ್ದಿಷ್ಟ ಪರಿಹಾರದ ದಾವೆ, 40 ಕ್ರಮಿನಲ್ ಪ್ರಕರಣಗಳು ಹಾಗೂ 330 ಎನ್ಐ ಆಕ್ಟ್ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ತೆಗೆದುಕೊಳ್ಳಲಾಗಿದೆ ಎಂದು ವಿವರಿಸಿದರು.</p>.<p>ಹಿರಿಯ ಸಿವಿಲ್ ನ್ಯಾಯಾಧೀಶರಾದ ಪಾರ್ವತಮ್ಮ, ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಾಬು, ಎಂ.ಪದ್ಮ, ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಕಾಳೇಗೌಡ, ಕಾರ್ಯದರ್ಶಿ ಕನಗನಮರಡಿ ನಾಗರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಂಡವಪುರ</strong>: ರಾಷ್ಟೀಯ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಸೆ.14 ರಂದು ಬೃಹತ್ ಜನತಾ ನ್ಯಾಯಾಲಯ ಆಯೋಜಿಸಲಾಗಿದೆ ಎಂದು ಪಟ್ಟಣದ ಜೆಎಂಎಫ್ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ಮಹೇಶ್ ಮಂಗಳವಾರ ತಿಳಿಸಿದರು.</p>.<p>ಲೋಕ್ ಅದಾಲತ್ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಶೀಘ್ರವಾಗಿ ಮತ್ತು ಪರಿಣಾಮಕಾರಿಯಾಗಿ ಇತ್ಯರ್ಥ ಪಡಿಸಿಕೊಳ್ಳಬಹುದು. ಕಕ್ಷಿದಾರರು ಕಾನೂನು ಸೇವೆಗಳ ಸಮಿತಿಯನ್ನು ಸಂಪರ್ಕಿಸ ಬಹುದಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ತಾಲ್ಲೂಕಿನಲ್ಲಿ ಸೆ.14 ರಂದು ಲೋಕ್ ಅದಾಲತ್ಗೆ 150 ಎಂವಿಸಿ ಪ್ರಕರಣಗಳು, 9 ಎಂ.ಎಂ.ಆರ್.ಡಿ, 7 ಎಲ್.ಎ.ಸಿ, 100 ವಿಭಾಗದ ದಾವೆ ಪ್ರಕರಣಗಳು, 145 ಇತರೆ ಸಿವಿಲ್ ಪ್ರಕರಣಗಳು, 150 ನಿರ್ದಿಷ್ಟ ಪರಿಹಾರದ ದಾವೆ, 40 ಕ್ರಮಿನಲ್ ಪ್ರಕರಣಗಳು ಹಾಗೂ 330 ಎನ್ಐ ಆಕ್ಟ್ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ತೆಗೆದುಕೊಳ್ಳಲಾಗಿದೆ ಎಂದು ವಿವರಿಸಿದರು.</p>.<p>ಹಿರಿಯ ಸಿವಿಲ್ ನ್ಯಾಯಾಧೀಶರಾದ ಪಾರ್ವತಮ್ಮ, ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಾಬು, ಎಂ.ಪದ್ಮ, ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಕಾಳೇಗೌಡ, ಕಾರ್ಯದರ್ಶಿ ಕನಗನಮರಡಿ ನಾಗರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>