<p><strong>ಮಳವಳ್ಳಿ:</strong> ಪುರಸಭೆಯು ಪಕ್ಷೇತರರ ಪಾಲಾಗಿದ್ದು, ಜೆಡಿಎಸ್-ಬಿಜೆಪಿ ಬೆಂಬಲದೊಂದಿಗೆ ಅಧ್ಯಕ್ಷರಾಗಿ 4ನೇ ವಾರ್ಡ್ ಪಕ್ಷೇತರ ಸದಸ್ಯ ಪುಟ್ಟಸ್ವಾಮಿ, ಉಪಾಧ್ಯಕ್ಷರಾಗಿ 18ನೇ ವಾರ್ಡ್ ನ ಪಕ್ಷೇತರ ಸದಸ್ಯ ಎನ್.ಬಸವರಾಜು(ಜಯಸಿಂಹ) ಚುನಾಯಿತರಾದರು.</p>.<p>ಒಟ್ಟು 23 ಸದಸ್ಯ ಬಲ ಹೊಂದಿರುವ ಪುರಸಭೆಯಲ್ಲಿ ಜೆಡಿಎಸ್ 9, ಕಾಂಗ್ರೆಸ್ 5, ಬಿಜೆಪಿ 2, 7 ಮಂದಿ ಪಕ್ಷೇತರ ಆಯ್ಕೆಯಾಗಿದ್ದರು.</p>.<p> ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಎಂ.ಆರ್.ರಾಜಶೇಖರ್ ಹಾಗೂ ಪಕ್ಷೇತರ ಸದಸ್ಯ ಪುಟ್ಟಸ್ವಾಮಿ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಸದಸ್ಯರಾದ ಎಸ್.ಕವಿತಾ ಕೃಷ್ಣ, ಎಂ.ಎನ್.ಶಿವಸ್ವಾಮಿ ಹಾಗೂ ಪಕ್ಷೇತರ ಎನ್.ಬಸವರಾಜು ನಾಮಪತ್ರ ಸಲ್ಲಿಸಿದ್ದರು. ಎಸ್.ಕವಿತಾ ಕೃಷ್ಣ ನಾಮಪತ್ರ ತಿರಸ್ಕೃತಗೊಂಡಿತು.</p>.<p> ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಪಕ್ಷೇತರ ಸದಸ್ಯ ಪುಟ್ಟಸ್ವಾಮಿ ಪರವಾಗಿ 14 ಮತ, ಕಾಂಗ್ರೆಸ್ ನ ಎಂ.ಆರ್.ರಾಜಶೇಖರ್ ಪರ 9 ಮತಗಳು ಬಂದವು. 15 ಮತ ಪಡೆದ ಎನ್.ಬಸವರಾಜು ಉಪಾಧ್ಯಕ್ಷರಾಗಿ ಆಯ್ಕೆಯಾದರೆ, ಎಂ.ಎನ್.ಶಿವಸ್ವಾಮಿ 8 ಮತ ಗಳಿಸಿದರು. ಚುನಾವಣಾಧಿಕಾರಿಯಾಗಿ ತಹಶೀಲ್ದಾರ್ ಕೆ.ಎನ್.ಲೋಕೇಶ್ ಹಾಗೂ ಸಹಾಯಕರಾಗಿ ಗ್ರೇಡ್-2 ತಹಶೀಲ್ದಾರ್ ಬಿ.ವಿ.ಕುಮಾರ್, ಪುರಸಭೆ ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ ಕಾರ್ಯನಿರ್ವಹಿಸಿದ್ದರು. ಮತದಾನದ ಹಕ್ಕು ಹೊಂದಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಗೈರಾಗಿದ್ದರು.</p>.<p>ನೂತನ ಅಧ್ಯಕ್ಷ ಪುಟ್ಟಸ್ವಾಮಿ ಮಾತನಾಡಿ, ಜೆಡಿಎಸ್-ಬಿಜೆಪಿ ಮುಖಂಡರ ಹಾಗೂ ಸದಸ್ಯರ ಬೆಂಬಲದೊಂದಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಪಟ್ಟಣದ ಸಮಗ್ರ ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ರೂಪಿಸಲಾಗುವುದು ಎಂದು ಹೇಳಿದರು.</p>.<p>ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿ ಜೆಡಿಎಸ್ ಎಸ್ಸಿ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಕೆ.ಅನ್ನದಾನಿ ಮಾತನಾಡಿ, ಎನ್ಡಿಎ ಮೈತ್ರಿಕೂಟ ಪುರಸಭೆಯಲ್ಲಿ ಅಧಿಕಾರಕ್ಕೆ ಬಂದಿದೆ ಎಂದು ಹೇಳಿದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಇಂದ್ರೇಶ್ ಮಾತನಾಡಿ, ಜೆಡಿಎಸ್-ಬಿಜೆಪಿ ಮೈತ್ರಿ ಪಾಂಡವಪುರ, ಮಳವಳ್ಳಿ ಸ್ಥಳೀಯಾಡಳಿತದಲ್ಲೂ ನಡೆದಿದೆ. ಇದು ಮತ್ತಷ್ಟು ಬಲಿಷ್ಠವಾಗಲಿದೆ ಎಂದರು.ಬಿಜೆಪಿ ಮುಖಂಡ ಜಿ.ಮುನಿರಾಜು ಮಾತನಾಡಿದರು.</p>.<p>ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.<br /> ಜೆಡಿಎಸ್ ಜಿಲ್ಲಾ ಯುವ ಘಟಕದ ಅಧ್ಯಕ್ಷ ಬಿ.ರವಿ ಕಂಸಾಗರ, ಸದಸ್ಯರಾದ ಎಂ.ಎನ್.ಕೃಷ್ಣ, ರವಿ, ಎಂ.ಟಿ.ಪ್ರಶಾಂತ್, ಟಿ.ನಂದಕುಮಾರ್, ಆರ್.ಎನ್.ಸಿದ್ದರಾಜು, ರಾಧಾ ನಾಗರಾಜು, ಭಾಗ್ಯಮ್ಮ, ಪಿ.ಕುಮಾರ್, ನೂರುಲ್ಲಾ, ಸವಿತಾ, ಮಣಿ, ನಾಗೇಶ್ ಹಾಗೂ ಜೆಡಿಎಸ್-ಬಿಜೆಪಿ ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಳವಳ್ಳಿ:</strong> ಪುರಸಭೆಯು ಪಕ್ಷೇತರರ ಪಾಲಾಗಿದ್ದು, ಜೆಡಿಎಸ್-ಬಿಜೆಪಿ ಬೆಂಬಲದೊಂದಿಗೆ ಅಧ್ಯಕ್ಷರಾಗಿ 4ನೇ ವಾರ್ಡ್ ಪಕ್ಷೇತರ ಸದಸ್ಯ ಪುಟ್ಟಸ್ವಾಮಿ, ಉಪಾಧ್ಯಕ್ಷರಾಗಿ 18ನೇ ವಾರ್ಡ್ ನ ಪಕ್ಷೇತರ ಸದಸ್ಯ ಎನ್.ಬಸವರಾಜು(ಜಯಸಿಂಹ) ಚುನಾಯಿತರಾದರು.</p>.<p>ಒಟ್ಟು 23 ಸದಸ್ಯ ಬಲ ಹೊಂದಿರುವ ಪುರಸಭೆಯಲ್ಲಿ ಜೆಡಿಎಸ್ 9, ಕಾಂಗ್ರೆಸ್ 5, ಬಿಜೆಪಿ 2, 7 ಮಂದಿ ಪಕ್ಷೇತರ ಆಯ್ಕೆಯಾಗಿದ್ದರು.</p>.<p> ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಎಂ.ಆರ್.ರಾಜಶೇಖರ್ ಹಾಗೂ ಪಕ್ಷೇತರ ಸದಸ್ಯ ಪುಟ್ಟಸ್ವಾಮಿ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಸದಸ್ಯರಾದ ಎಸ್.ಕವಿತಾ ಕೃಷ್ಣ, ಎಂ.ಎನ್.ಶಿವಸ್ವಾಮಿ ಹಾಗೂ ಪಕ್ಷೇತರ ಎನ್.ಬಸವರಾಜು ನಾಮಪತ್ರ ಸಲ್ಲಿಸಿದ್ದರು. ಎಸ್.ಕವಿತಾ ಕೃಷ್ಣ ನಾಮಪತ್ರ ತಿರಸ್ಕೃತಗೊಂಡಿತು.</p>.<p> ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಪಕ್ಷೇತರ ಸದಸ್ಯ ಪುಟ್ಟಸ್ವಾಮಿ ಪರವಾಗಿ 14 ಮತ, ಕಾಂಗ್ರೆಸ್ ನ ಎಂ.ಆರ್.ರಾಜಶೇಖರ್ ಪರ 9 ಮತಗಳು ಬಂದವು. 15 ಮತ ಪಡೆದ ಎನ್.ಬಸವರಾಜು ಉಪಾಧ್ಯಕ್ಷರಾಗಿ ಆಯ್ಕೆಯಾದರೆ, ಎಂ.ಎನ್.ಶಿವಸ್ವಾಮಿ 8 ಮತ ಗಳಿಸಿದರು. ಚುನಾವಣಾಧಿಕಾರಿಯಾಗಿ ತಹಶೀಲ್ದಾರ್ ಕೆ.ಎನ್.ಲೋಕೇಶ್ ಹಾಗೂ ಸಹಾಯಕರಾಗಿ ಗ್ರೇಡ್-2 ತಹಶೀಲ್ದಾರ್ ಬಿ.ವಿ.ಕುಮಾರ್, ಪುರಸಭೆ ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ ಕಾರ್ಯನಿರ್ವಹಿಸಿದ್ದರು. ಮತದಾನದ ಹಕ್ಕು ಹೊಂದಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಗೈರಾಗಿದ್ದರು.</p>.<p>ನೂತನ ಅಧ್ಯಕ್ಷ ಪುಟ್ಟಸ್ವಾಮಿ ಮಾತನಾಡಿ, ಜೆಡಿಎಸ್-ಬಿಜೆಪಿ ಮುಖಂಡರ ಹಾಗೂ ಸದಸ್ಯರ ಬೆಂಬಲದೊಂದಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಪಟ್ಟಣದ ಸಮಗ್ರ ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ರೂಪಿಸಲಾಗುವುದು ಎಂದು ಹೇಳಿದರು.</p>.<p>ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿ ಜೆಡಿಎಸ್ ಎಸ್ಸಿ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಕೆ.ಅನ್ನದಾನಿ ಮಾತನಾಡಿ, ಎನ್ಡಿಎ ಮೈತ್ರಿಕೂಟ ಪುರಸಭೆಯಲ್ಲಿ ಅಧಿಕಾರಕ್ಕೆ ಬಂದಿದೆ ಎಂದು ಹೇಳಿದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಇಂದ್ರೇಶ್ ಮಾತನಾಡಿ, ಜೆಡಿಎಸ್-ಬಿಜೆಪಿ ಮೈತ್ರಿ ಪಾಂಡವಪುರ, ಮಳವಳ್ಳಿ ಸ್ಥಳೀಯಾಡಳಿತದಲ್ಲೂ ನಡೆದಿದೆ. ಇದು ಮತ್ತಷ್ಟು ಬಲಿಷ್ಠವಾಗಲಿದೆ ಎಂದರು.ಬಿಜೆಪಿ ಮುಖಂಡ ಜಿ.ಮುನಿರಾಜು ಮಾತನಾಡಿದರು.</p>.<p>ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.<br /> ಜೆಡಿಎಸ್ ಜಿಲ್ಲಾ ಯುವ ಘಟಕದ ಅಧ್ಯಕ್ಷ ಬಿ.ರವಿ ಕಂಸಾಗರ, ಸದಸ್ಯರಾದ ಎಂ.ಎನ್.ಕೃಷ್ಣ, ರವಿ, ಎಂ.ಟಿ.ಪ್ರಶಾಂತ್, ಟಿ.ನಂದಕುಮಾರ್, ಆರ್.ಎನ್.ಸಿದ್ದರಾಜು, ರಾಧಾ ನಾಗರಾಜು, ಭಾಗ್ಯಮ್ಮ, ಪಿ.ಕುಮಾರ್, ನೂರುಲ್ಲಾ, ಸವಿತಾ, ಮಣಿ, ನಾಗೇಶ್ ಹಾಗೂ ಜೆಡಿಎಸ್-ಬಿಜೆಪಿ ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>