<p><strong>ಮಳವಳ್ಳಿ(ಮಂಡ್ಯ):</strong> ‘ಬಾಕಿ ಉಳಿಸಿಕೊಂಡಿರುವ ₹55 ಲಕ್ಷ ತೆರಿಗೆ ಪಾವತಿಸುವಂತೆ ಒತ್ತಾಯಿಸಿ ಪಟ್ಟಣದ ರೋಟರಿ ವಿದ್ಯಾಸಂಸ್ಥೆ ಮುಂಭಾಗ ಪುರಸಭೆ ಅಧಿಕಾರಿ ಹಾಗೂ ಸಿಬ್ಬಂದಿ ಶನಿವಾರ ಧರಣಿ ನಡೆಸಿದರು. </p><p>12 ವರ್ಷಗಳಿಂದ ಸರಿಯಾಗಿ ಕಟ್ಟಡ ಶುಲ್ಕ ಪಾವತಿ ಮಾಡಿಲ್ಲ. ಇದುವರೆಗೂ ₹8 ಲಕ್ಷ ಮಾತ್ರ ತೆರಿಗೆ ಪಾವತಿಸಲಾಗಿದೆ. ಬಾಕಿ ತೆರಿಗೆ ಕಟ್ಟುವಂತೆ ಪುರಸಭೆಯಿಂದ ಹಲವಾರು ಬಾರಿ ನೋಟಿಸ್ ನೀಡಿದ್ದರೂ, ಸಂಸ್ಥೆ ನಿರ್ಲಕ್ಷ್ಯ ತೋರಿತ್ತು ಎಂದು ದೂರಲಾಗಿದೆ. </p><p>ಪುರಸಭೆ ಮುಖ್ಯಾಧಿಕಾರಿ ಎಂ.ಸಿ. ನಾಗರತ್ನಾ ಮಾತನಾಡಿ, ‘ಶನಿವಾರ ನಮ್ಮ ಸಿಬ್ಬಂದಿ ತೆರಿಗೆ ಕಟ್ಟುವಂತೆ ಕೇಳಲು ಹೋದಾಗ ರೋಟರಿ ಸಂಸ್ಥೆಯಿಂದ ಸಮರ್ಪಕ ಉತ್ತರ ಬಂದಿಲ್ಲ. ನಮ್ಮ ಸಿಬ್ಬಂದಿಗೆ ಸಂಕ್ರಾಂತಿ ಹಬ್ಬಕ್ಕೆ ಸಂಬಳ ನೀಡಲು ಆಗಿಲ್ಲ. ಶಿಕ್ಷಣ ಸಂಸ್ಥೆಯಾಗಿರುವುದರಿಂದ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಬೀಗ ಹಾಕದೇ ತೆರಿಗೆ ಕಟ್ಟುವಂತೆ ಆಗ್ರಹ ಮಾಡಲಾಗುತ್ತಿದೆ’ ಎಂದು ಹೇಳಿದರು.</p><p>ರೋಟರಿ ಸಂಸ್ಥೆ ಅಧ್ಯಕ್ಷ ಹಬಿ ಉಲ್ಲಾ ಖಾನ್ ಮಾತನಾಡಿ, ‘ಸಂಸ್ಥೆಗೆ ಯಾವುದೇ ನೋಟಿಸ್ ಬಂದಿಲ್ಲ, ಬಂದಿದ್ದರೆ ಆಡಳಿತ ಮಂಡಳಿ ಜೊತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಳವಳ್ಳಿ(ಮಂಡ್ಯ):</strong> ‘ಬಾಕಿ ಉಳಿಸಿಕೊಂಡಿರುವ ₹55 ಲಕ್ಷ ತೆರಿಗೆ ಪಾವತಿಸುವಂತೆ ಒತ್ತಾಯಿಸಿ ಪಟ್ಟಣದ ರೋಟರಿ ವಿದ್ಯಾಸಂಸ್ಥೆ ಮುಂಭಾಗ ಪುರಸಭೆ ಅಧಿಕಾರಿ ಹಾಗೂ ಸಿಬ್ಬಂದಿ ಶನಿವಾರ ಧರಣಿ ನಡೆಸಿದರು. </p><p>12 ವರ್ಷಗಳಿಂದ ಸರಿಯಾಗಿ ಕಟ್ಟಡ ಶುಲ್ಕ ಪಾವತಿ ಮಾಡಿಲ್ಲ. ಇದುವರೆಗೂ ₹8 ಲಕ್ಷ ಮಾತ್ರ ತೆರಿಗೆ ಪಾವತಿಸಲಾಗಿದೆ. ಬಾಕಿ ತೆರಿಗೆ ಕಟ್ಟುವಂತೆ ಪುರಸಭೆಯಿಂದ ಹಲವಾರು ಬಾರಿ ನೋಟಿಸ್ ನೀಡಿದ್ದರೂ, ಸಂಸ್ಥೆ ನಿರ್ಲಕ್ಷ್ಯ ತೋರಿತ್ತು ಎಂದು ದೂರಲಾಗಿದೆ. </p><p>ಪುರಸಭೆ ಮುಖ್ಯಾಧಿಕಾರಿ ಎಂ.ಸಿ. ನಾಗರತ್ನಾ ಮಾತನಾಡಿ, ‘ಶನಿವಾರ ನಮ್ಮ ಸಿಬ್ಬಂದಿ ತೆರಿಗೆ ಕಟ್ಟುವಂತೆ ಕೇಳಲು ಹೋದಾಗ ರೋಟರಿ ಸಂಸ್ಥೆಯಿಂದ ಸಮರ್ಪಕ ಉತ್ತರ ಬಂದಿಲ್ಲ. ನಮ್ಮ ಸಿಬ್ಬಂದಿಗೆ ಸಂಕ್ರಾಂತಿ ಹಬ್ಬಕ್ಕೆ ಸಂಬಳ ನೀಡಲು ಆಗಿಲ್ಲ. ಶಿಕ್ಷಣ ಸಂಸ್ಥೆಯಾಗಿರುವುದರಿಂದ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಬೀಗ ಹಾಕದೇ ತೆರಿಗೆ ಕಟ್ಟುವಂತೆ ಆಗ್ರಹ ಮಾಡಲಾಗುತ್ತಿದೆ’ ಎಂದು ಹೇಳಿದರು.</p><p>ರೋಟರಿ ಸಂಸ್ಥೆ ಅಧ್ಯಕ್ಷ ಹಬಿ ಉಲ್ಲಾ ಖಾನ್ ಮಾತನಾಡಿ, ‘ಸಂಸ್ಥೆಗೆ ಯಾವುದೇ ನೋಟಿಸ್ ಬಂದಿಲ್ಲ, ಬಂದಿದ್ದರೆ ಆಡಳಿತ ಮಂಡಳಿ ಜೊತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>