<p><strong>ಮಳವಳ್ಳಿ:</strong> ತಾಲ್ಲೂಕು ವ್ಯವಸಾಯೋತ್ಪನ್ನಗಳ ಮಾರಾಟ ಮತ್ತು ರೂಪಾಂತರಗೊಳಿಸುವ ಸಹಕಾರ ಸಂಘ(ಟಿಎಪಿಸಿಎಂಎಸ್)ದ ಆಡಳಿತ ಮಂಡಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದೆ.</p>.<p>ಟಿಎಪಿಸಿಎಂಎಸ್ ನ ಮುಂದಿನ ಐದು ವರ್ಷದ ಆಡಳಿತ ಮಂಡಳಿಯ 14 ಸ್ಥಾನಗಳಲ್ಲಿ ಹಲಗೂರು ಕ್ಷೇತ್ರದಿಂದ ಕಾಂಗ್ರೆಸ್ ನ ಮಾಲಾಶ್ರೀ ಅವಿರೋಧ ಆಯ್ಕೆಯಾಗಿದ್ದರು. ಉಳಿದ 13 ಸ್ಥಾನಗಳಿಗೆ ಸಂಘದ ಸಮುದಾಯದ ಭವನ ಹಾಗೂ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 8 ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟ 5 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇತ್ತ ಕಾಂಗ್ರೆಸ್ ಅಧಿಕಾರ ಉಳಿಸಿಕೊಂಡರೆ, ಅತ್ತ ಜೆಡಿಎಸ್-ಬಿಜೆಪಿ ಮೈತ್ರಿಕೂಟ ಐದು ಸ್ಥಾನಗಳನ್ನು ಗೆದ್ದು ಕಳೆದ ಬಾರಿಗಿಂತ ಉತ್ತಮ ಸಾಧನೆ ಮಾಡಿದೆ.</p>.<p>ಎ ತರಗತಿಯ ಎಲ್ಲ ಆರು ಸ್ಥಾನಗಳಲ್ಲಿ ಕಾಂಗ್ರೆಸ್ ನ ಕೆ.ಜೆ.ದೇವರಾಜು, ಕೆ.ಪಿ.ನರೇಂದ್ರ ಕೆ.ಎಂ.ಪುಟ್ಟು, ಎಂ.ಲಿಂಗರಾಜು, ಬಿ.ಪುಟ್ಟಬಸವಯ್ಯ, ವಿ.ಎನ್.ಮನು ಹಾಗೂ ಎನ್.ಸತೀಶ್ ಗೆಲುವು ಸಾಧಿಸಿದ್ದಾರೆ. ಬಿ ತರಗತಿಯಲ್ಲಿ ಕಾಂಗ್ರೆಸ್ ಬೆಂಬಲಿತ ಎಂ.ಮಾದಯ್ಯ(ಮಲ್ಲು) ಹಾಗೂ ದಿಲೀಪ್ ಕುಮಾರ್(ವಿಶ್ವ) ಗೆಲುವು ಪಡೆದುಕೊಂಡರೆ, ಇತ್ತ ಜೆಡಿಎಸ್-ಬಿಜೆಪಿ ಬೆಂಬಲಿತ ಎಚ್.ವಿ.ಶಿವರುದ್ರಪ್ಪ, ಎನ್.ಶೋಭಾ, ರತ್ನಮ್ಮ, ರಾಮಣ್ಣ ಹಾಗೂ ಶ್ರೀಧರ್ ಗೆದ್ದಿದ್ದಾರೆ.</p>.<p>ಚುನಾವಣಾಧಿಕಾರಿ ತಹಶೀಲ್ದಾರ್ ಎಸ್.ವಿ.ಲೋಕೇಶ್ ಅವರು ಗೆಲುವು ಸಾಧಿಸಿದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು. ಸಿಪಿಐ ಎಂ.ರವಿಕುಮಾರ್ ಅವರ ನೇತೃತ್ವದಲ್ಲಿ ಸೂಕ್ತ ಭದ್ರತೆ ಕಲ್ಪಿಸಲಾಗಿತ್ತು. ಬಹುತೇಕ ಚುನಾವಣೆ ಶಾಂತಿಯುತವಾಗಿ ನಡೆಯಿತು.</p>.<p><strong>ಆರೋಪ ನಿರಾಧಾರ:</strong> ಕಾಂಗ್ರೆಸ್ ನಿಂದ ಗೆಲುವು ಸಾಧಿಸಿದ ನಿರ್ದೇಶಕರನ್ನು ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು ಹಾಗೂ ಟಿಎಪಿಎಎಂಎಸ್ ಅಧ್ಯಕ್ಷ ಟಿ.ಸಿ.ಚೌಡಯ್ಯ ನೇತೃತ್ವದಲ್ಲಿ ಮುಖಂಡರು ಅಭಿನಂದಿಸಿದರು.</p><p>ನಂತರ ಸಿ.ಪಿ.ರಾಜು ಹಾಗೂ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಜೆ.ದೇವರಾಜು ಮಾತನಾಡಿ, ಬಿ ತರಗತಿಯಲ್ಲಿ ಕಾಂಗ್ರೆಸ್ ಗೆ ಅಲ್ಪ ಹಿನ್ನೆಡೆಯಾಗಿದೆ. ಆದರೆ ಎರಡು ಎ ತರಗತಿಯ ಎಲ್ಲ 6 ಸ್ಥಾನಗಳನ್ನು ಗೆದ್ದಿರುವುದು ಕಾಂಗ್ರೆಸ್ ನ ಸದೃಢ ಸಂಘಟನೆಗೆ ಸಾಕ್ಷಿಯಾಗಿದೆ ಎಂದರು.</p>.<div><blockquote>ಅವಿರೋಧವಾಗಿ ಆಯ್ಕೆಯಾಗಿರುವ ನಿರ್ದೇಶಕರು ಸೇರಿದಂತೆ 9 ಸ್ಥಾನಗಳನ್ನು ಕಾಂಗ್ರೆಸ್ ಹೊಂದಿದ್ದು ಟಿಎಪಿಸಿಎಂಎಸ್ ನ ಆಡಳಿತ ಚುಕ್ಕಾಣಿ ಹಿಡಿಯಲಿದ್ದೇವೆ. ಜೆಡಿಎಸ್ ನವರ ಆರೋಪ ನಿರಾಧಾರವಾಗಿದೆ </blockquote><span class="attribution">ಸಿ.ಪಿ.ರಾಜು ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ</span></div>.<p><strong>ಕಾಂಗ್ರೆಸ್ ವಿರುದ್ಧ ವಾಗ್ದಾಳಿ</strong> </p><p>ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ನಿರ್ದೇಶಕರನ್ನು ಅಭಿನಂದಿಸಿ ತಾಲ್ಲೂಕು ಜೆಡಿಎಸ್ ಘಟಕದ ಅಧ್ಯಕ್ಷ ವಿ.ಎಂ.ವಿಶ್ವನಾಥ್ ಹಾಗೂ ಜೆಡಿಎಸ್ ಯುವ ಘಟಕದ ಜಿಲ್ಲಾ ಅಧ್ಯಕ್ಷ ಬಿ.ರವಿ ಕಂಸಾಗರ ಮಾತನಾಡಿ ಚುನಾವಣೆಯಲ್ಲಿ ಶಾಸಕರು ಸಹಕಾರ ಸಂಘದ ಪ್ರತಿನಿಧಿಗಳ ಮೇಲೆ ಪ್ರಭಾವ ಬೀರಿ ವಾಮಮಾರ್ಗದಿಂದ ಎ ತರಗತಿಯ ಎಲ್ಲ 6 ಸ್ಥಾನಗಳನ್ನು ಗೆದ್ದಿದ್ದು ಬಿ ತರಗತಿಯ 7 ಸ್ಥಾನಗಳ ಪೈಕಿ 5 ಸ್ಥಾನಗಳಲ್ಲಿ ನಮ್ಮ ಮೈತ್ರಿಕೂಟದ ಅಭ್ಯರ್ಥಿಗಳನ್ನು ಸದಸ್ಯರು ಹಾಗೂ ರೈತರು ಬೆಂಬಲಿಸಿದ್ದಾರೆ. ಕಾಂಗ್ರೆಸ್ ನವರಿಗೆ ಮುಂದಿನ ದಿನಗಳಲ್ಲಿ ಜನರು ತಕ್ಕಪಾಠ ಕಲಿಸಲಿದ್ದಾರೆ ಎಂದು ವಿರುದ್ಧ ವಾಗ್ದಾಳಿ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಳವಳ್ಳಿ:</strong> ತಾಲ್ಲೂಕು ವ್ಯವಸಾಯೋತ್ಪನ್ನಗಳ ಮಾರಾಟ ಮತ್ತು ರೂಪಾಂತರಗೊಳಿಸುವ ಸಹಕಾರ ಸಂಘ(ಟಿಎಪಿಸಿಎಂಎಸ್)ದ ಆಡಳಿತ ಮಂಡಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದೆ.</p>.<p>ಟಿಎಪಿಸಿಎಂಎಸ್ ನ ಮುಂದಿನ ಐದು ವರ್ಷದ ಆಡಳಿತ ಮಂಡಳಿಯ 14 ಸ್ಥಾನಗಳಲ್ಲಿ ಹಲಗೂರು ಕ್ಷೇತ್ರದಿಂದ ಕಾಂಗ್ರೆಸ್ ನ ಮಾಲಾಶ್ರೀ ಅವಿರೋಧ ಆಯ್ಕೆಯಾಗಿದ್ದರು. ಉಳಿದ 13 ಸ್ಥಾನಗಳಿಗೆ ಸಂಘದ ಸಮುದಾಯದ ಭವನ ಹಾಗೂ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 8 ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟ 5 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇತ್ತ ಕಾಂಗ್ರೆಸ್ ಅಧಿಕಾರ ಉಳಿಸಿಕೊಂಡರೆ, ಅತ್ತ ಜೆಡಿಎಸ್-ಬಿಜೆಪಿ ಮೈತ್ರಿಕೂಟ ಐದು ಸ್ಥಾನಗಳನ್ನು ಗೆದ್ದು ಕಳೆದ ಬಾರಿಗಿಂತ ಉತ್ತಮ ಸಾಧನೆ ಮಾಡಿದೆ.</p>.<p>ಎ ತರಗತಿಯ ಎಲ್ಲ ಆರು ಸ್ಥಾನಗಳಲ್ಲಿ ಕಾಂಗ್ರೆಸ್ ನ ಕೆ.ಜೆ.ದೇವರಾಜು, ಕೆ.ಪಿ.ನರೇಂದ್ರ ಕೆ.ಎಂ.ಪುಟ್ಟು, ಎಂ.ಲಿಂಗರಾಜು, ಬಿ.ಪುಟ್ಟಬಸವಯ್ಯ, ವಿ.ಎನ್.ಮನು ಹಾಗೂ ಎನ್.ಸತೀಶ್ ಗೆಲುವು ಸಾಧಿಸಿದ್ದಾರೆ. ಬಿ ತರಗತಿಯಲ್ಲಿ ಕಾಂಗ್ರೆಸ್ ಬೆಂಬಲಿತ ಎಂ.ಮಾದಯ್ಯ(ಮಲ್ಲು) ಹಾಗೂ ದಿಲೀಪ್ ಕುಮಾರ್(ವಿಶ್ವ) ಗೆಲುವು ಪಡೆದುಕೊಂಡರೆ, ಇತ್ತ ಜೆಡಿಎಸ್-ಬಿಜೆಪಿ ಬೆಂಬಲಿತ ಎಚ್.ವಿ.ಶಿವರುದ್ರಪ್ಪ, ಎನ್.ಶೋಭಾ, ರತ್ನಮ್ಮ, ರಾಮಣ್ಣ ಹಾಗೂ ಶ್ರೀಧರ್ ಗೆದ್ದಿದ್ದಾರೆ.</p>.<p>ಚುನಾವಣಾಧಿಕಾರಿ ತಹಶೀಲ್ದಾರ್ ಎಸ್.ವಿ.ಲೋಕೇಶ್ ಅವರು ಗೆಲುವು ಸಾಧಿಸಿದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು. ಸಿಪಿಐ ಎಂ.ರವಿಕುಮಾರ್ ಅವರ ನೇತೃತ್ವದಲ್ಲಿ ಸೂಕ್ತ ಭದ್ರತೆ ಕಲ್ಪಿಸಲಾಗಿತ್ತು. ಬಹುತೇಕ ಚುನಾವಣೆ ಶಾಂತಿಯುತವಾಗಿ ನಡೆಯಿತು.</p>.<p><strong>ಆರೋಪ ನಿರಾಧಾರ:</strong> ಕಾಂಗ್ರೆಸ್ ನಿಂದ ಗೆಲುವು ಸಾಧಿಸಿದ ನಿರ್ದೇಶಕರನ್ನು ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು ಹಾಗೂ ಟಿಎಪಿಎಎಂಎಸ್ ಅಧ್ಯಕ್ಷ ಟಿ.ಸಿ.ಚೌಡಯ್ಯ ನೇತೃತ್ವದಲ್ಲಿ ಮುಖಂಡರು ಅಭಿನಂದಿಸಿದರು.</p><p>ನಂತರ ಸಿ.ಪಿ.ರಾಜು ಹಾಗೂ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಜೆ.ದೇವರಾಜು ಮಾತನಾಡಿ, ಬಿ ತರಗತಿಯಲ್ಲಿ ಕಾಂಗ್ರೆಸ್ ಗೆ ಅಲ್ಪ ಹಿನ್ನೆಡೆಯಾಗಿದೆ. ಆದರೆ ಎರಡು ಎ ತರಗತಿಯ ಎಲ್ಲ 6 ಸ್ಥಾನಗಳನ್ನು ಗೆದ್ದಿರುವುದು ಕಾಂಗ್ರೆಸ್ ನ ಸದೃಢ ಸಂಘಟನೆಗೆ ಸಾಕ್ಷಿಯಾಗಿದೆ ಎಂದರು.</p>.<div><blockquote>ಅವಿರೋಧವಾಗಿ ಆಯ್ಕೆಯಾಗಿರುವ ನಿರ್ದೇಶಕರು ಸೇರಿದಂತೆ 9 ಸ್ಥಾನಗಳನ್ನು ಕಾಂಗ್ರೆಸ್ ಹೊಂದಿದ್ದು ಟಿಎಪಿಸಿಎಂಎಸ್ ನ ಆಡಳಿತ ಚುಕ್ಕಾಣಿ ಹಿಡಿಯಲಿದ್ದೇವೆ. ಜೆಡಿಎಸ್ ನವರ ಆರೋಪ ನಿರಾಧಾರವಾಗಿದೆ </blockquote><span class="attribution">ಸಿ.ಪಿ.ರಾಜು ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ</span></div>.<p><strong>ಕಾಂಗ್ರೆಸ್ ವಿರುದ್ಧ ವಾಗ್ದಾಳಿ</strong> </p><p>ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ನಿರ್ದೇಶಕರನ್ನು ಅಭಿನಂದಿಸಿ ತಾಲ್ಲೂಕು ಜೆಡಿಎಸ್ ಘಟಕದ ಅಧ್ಯಕ್ಷ ವಿ.ಎಂ.ವಿಶ್ವನಾಥ್ ಹಾಗೂ ಜೆಡಿಎಸ್ ಯುವ ಘಟಕದ ಜಿಲ್ಲಾ ಅಧ್ಯಕ್ಷ ಬಿ.ರವಿ ಕಂಸಾಗರ ಮಾತನಾಡಿ ಚುನಾವಣೆಯಲ್ಲಿ ಶಾಸಕರು ಸಹಕಾರ ಸಂಘದ ಪ್ರತಿನಿಧಿಗಳ ಮೇಲೆ ಪ್ರಭಾವ ಬೀರಿ ವಾಮಮಾರ್ಗದಿಂದ ಎ ತರಗತಿಯ ಎಲ್ಲ 6 ಸ್ಥಾನಗಳನ್ನು ಗೆದ್ದಿದ್ದು ಬಿ ತರಗತಿಯ 7 ಸ್ಥಾನಗಳ ಪೈಕಿ 5 ಸ್ಥಾನಗಳಲ್ಲಿ ನಮ್ಮ ಮೈತ್ರಿಕೂಟದ ಅಭ್ಯರ್ಥಿಗಳನ್ನು ಸದಸ್ಯರು ಹಾಗೂ ರೈತರು ಬೆಂಬಲಿಸಿದ್ದಾರೆ. ಕಾಂಗ್ರೆಸ್ ನವರಿಗೆ ಮುಂದಿನ ದಿನಗಳಲ್ಲಿ ಜನರು ತಕ್ಕಪಾಠ ಕಲಿಸಲಿದ್ದಾರೆ ಎಂದು ವಿರುದ್ಧ ವಾಗ್ದಾಳಿ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>