<p><strong>ಮಳವಳ್ಳಿ: ‘</strong>ಭಾರತೀಯ ಸಂಸ್ಕೃತಿಯಲ್ಲಿ ಯುಗಾದಿ ಹಬ್ಬಕ್ಕೆ ತನ್ನದೇ ಆಗ ಮಹತ್ವವಿದೆ. ಜೀವನದ ಎಲ್ಲ ಕಹಿ ಘಟನೆಗಳನ್ನು ಮರೆತು ಸುಖ ಸಂತೋಷ ಹಾಗೂ ನೆಮ್ಮದಿಯಿಂದ ಬಾಳ್ವೆ ನಡೆಸುವ ಸಂದೇಶ ಸಾರುವ ಆಚರಣೆಯಾಗಿದೆ’ ಎಂದು ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಬಸಪ್ಪ ನೆಲಮಾಕನಹಳ್ಳಿ ತಿಳಿಸಿದರು.</p>.<p>ತಾಲ್ಲೂಕಿನ ರಾಗಿಬೊಮ್ಮನಹಳ್ಳಿ ಗ್ರಾಮದಲ್ಲಿ ಪೂರಿಗಾಲಿಯ ಜೈ ಭೀಮ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವತಿಯಿಂದ ಗುರುವಾರ ಆಯೋಜಿಸಿದ ಯುಗಾದಿ ಸಂಭ್ರಮ ಹಾಗೂ ಜನಪದ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಿಶ್ವದೆಲ್ಲೆಡೆ ಪ್ರಸ್ತುತ ಸಣ್ಣಪುಟ್ಟ ವಿಚಾರಗಳಿಗಾಗಿ ಧರ್ಮ, ಜಾತಿಯ ನಡುವೆ ಕೋಮು ಸಂಘರ್ಷಗಳು ನಡೆಯುತ್ತಿದ್ದು, ಜಗತ್ತಿನಲ್ಲಿಡೆ ಅಶಾಂತಿ ಉಂಟಾಗಿ ತಲ್ಲಣಿಸುವಂತಹ ಸನ್ನಿವೇಶಗಳನ್ನು ನಾವು ಕಾಣುತ್ತಿದ್ದೇವೆ. ಇಂತಹ ಸನ್ನಿವೇಶಗಳು ಇಲ್ಲಿಗೆ ಕೊನೆಯಾಗಿ ಮುಂದಿನ ದಿನಗಳಲ್ಲಿ ಸುಖ, ಶಾಂತಿ, ನೆಮ್ಮದಿಯೊಂದಿಗೆ ಹರ್ಷದಿಂದ ಬಾಳುವಂತಾಗಲಿ’ ಎಂದು ಹಾರೈಸಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಲ್.ಚೇತನ್ ಕುಮಾರ್ ಮಾತನಾಡಿ, ‘ಈ ನೆಲದ ಜಾನಪದ ಕಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಸಂಘ ಸಂಸ್ಥೆಗಳನ್ನು ಗುರುತಿಸಿ ಹೆಚ್ಚಿನ ಪ್ರಮಾಣದಲ್ಲಿ ಧನ ಸಹಾಯವನ್ನು ನೀಡುವುದರ ಜೊತೆಗೆ ಕಲಾವಿದರರಿಗೆ ಹೆಚ್ಚಿನ ಮಾಸಾಶನ, ಆರೋಗ್ಯ ವಿಮೆ, ಮನೆಗಳನ್ನು ಸರ್ಕಾರವೇ ನಿರ್ಮಿಸಿಕೊಟ್ಟು ಅಳಿವಿನಂಚಿನಲ್ಲಿರುವ ಜಾನಪದ ಕಲೆಗಳನ್ನು ಉಳಿಸಬೇಕು’ ಎಂದು ಒತ್ತಾಯಿಸಿದರು.</p>.<p>ಜೈ ಭೀಮ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಎಂ.ಎನ್.ಜಯರಾಜ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ವಿಸ್ಮಯ ಕಲಾ ಬಳಗದ ಅಧ್ಯಕ್ಷ ಆರ್.ಎಂ.ಮಹದೇವಸ್ವಾಮಿ, ಎಂ.ಜಗದೀಶ್, ಮಲ್ಲೇಶ್, ದೇವಪ್ರಸಾದ್, ಶಾಂತಿ ಶ್ರೀನಿವಾಸ್, ನಾಗರಾಜಮೂರ್ತಿ, ಗಾಯಕಿ ನಾಗರತ್ನ ಸೇರಿದಂತೆ ಅನೇಕರು ಜಾನಪದ ಉತ್ಸವದಲ್ಲಿ ಜನಪದ ಗೀತೆಗಳನ್ನು ಹಾಡಿ ರಂಜಿಸಿದರು. ಮುಖಂಡರಾದ ವಿನೋದ್ ಕುಮಾರ್, ಮಹದೇವ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260321-40-1934170032</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಳವಳ್ಳಿ: ‘</strong>ಭಾರತೀಯ ಸಂಸ್ಕೃತಿಯಲ್ಲಿ ಯುಗಾದಿ ಹಬ್ಬಕ್ಕೆ ತನ್ನದೇ ಆಗ ಮಹತ್ವವಿದೆ. ಜೀವನದ ಎಲ್ಲ ಕಹಿ ಘಟನೆಗಳನ್ನು ಮರೆತು ಸುಖ ಸಂತೋಷ ಹಾಗೂ ನೆಮ್ಮದಿಯಿಂದ ಬಾಳ್ವೆ ನಡೆಸುವ ಸಂದೇಶ ಸಾರುವ ಆಚರಣೆಯಾಗಿದೆ’ ಎಂದು ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಬಸಪ್ಪ ನೆಲಮಾಕನಹಳ್ಳಿ ತಿಳಿಸಿದರು.</p>.<p>ತಾಲ್ಲೂಕಿನ ರಾಗಿಬೊಮ್ಮನಹಳ್ಳಿ ಗ್ರಾಮದಲ್ಲಿ ಪೂರಿಗಾಲಿಯ ಜೈ ಭೀಮ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವತಿಯಿಂದ ಗುರುವಾರ ಆಯೋಜಿಸಿದ ಯುಗಾದಿ ಸಂಭ್ರಮ ಹಾಗೂ ಜನಪದ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಿಶ್ವದೆಲ್ಲೆಡೆ ಪ್ರಸ್ತುತ ಸಣ್ಣಪುಟ್ಟ ವಿಚಾರಗಳಿಗಾಗಿ ಧರ್ಮ, ಜಾತಿಯ ನಡುವೆ ಕೋಮು ಸಂಘರ್ಷಗಳು ನಡೆಯುತ್ತಿದ್ದು, ಜಗತ್ತಿನಲ್ಲಿಡೆ ಅಶಾಂತಿ ಉಂಟಾಗಿ ತಲ್ಲಣಿಸುವಂತಹ ಸನ್ನಿವೇಶಗಳನ್ನು ನಾವು ಕಾಣುತ್ತಿದ್ದೇವೆ. ಇಂತಹ ಸನ್ನಿವೇಶಗಳು ಇಲ್ಲಿಗೆ ಕೊನೆಯಾಗಿ ಮುಂದಿನ ದಿನಗಳಲ್ಲಿ ಸುಖ, ಶಾಂತಿ, ನೆಮ್ಮದಿಯೊಂದಿಗೆ ಹರ್ಷದಿಂದ ಬಾಳುವಂತಾಗಲಿ’ ಎಂದು ಹಾರೈಸಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಲ್.ಚೇತನ್ ಕುಮಾರ್ ಮಾತನಾಡಿ, ‘ಈ ನೆಲದ ಜಾನಪದ ಕಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಸಂಘ ಸಂಸ್ಥೆಗಳನ್ನು ಗುರುತಿಸಿ ಹೆಚ್ಚಿನ ಪ್ರಮಾಣದಲ್ಲಿ ಧನ ಸಹಾಯವನ್ನು ನೀಡುವುದರ ಜೊತೆಗೆ ಕಲಾವಿದರರಿಗೆ ಹೆಚ್ಚಿನ ಮಾಸಾಶನ, ಆರೋಗ್ಯ ವಿಮೆ, ಮನೆಗಳನ್ನು ಸರ್ಕಾರವೇ ನಿರ್ಮಿಸಿಕೊಟ್ಟು ಅಳಿವಿನಂಚಿನಲ್ಲಿರುವ ಜಾನಪದ ಕಲೆಗಳನ್ನು ಉಳಿಸಬೇಕು’ ಎಂದು ಒತ್ತಾಯಿಸಿದರು.</p>.<p>ಜೈ ಭೀಮ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಎಂ.ಎನ್.ಜಯರಾಜ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ವಿಸ್ಮಯ ಕಲಾ ಬಳಗದ ಅಧ್ಯಕ್ಷ ಆರ್.ಎಂ.ಮಹದೇವಸ್ವಾಮಿ, ಎಂ.ಜಗದೀಶ್, ಮಲ್ಲೇಶ್, ದೇವಪ್ರಸಾದ್, ಶಾಂತಿ ಶ್ರೀನಿವಾಸ್, ನಾಗರಾಜಮೂರ್ತಿ, ಗಾಯಕಿ ನಾಗರತ್ನ ಸೇರಿದಂತೆ ಅನೇಕರು ಜಾನಪದ ಉತ್ಸವದಲ್ಲಿ ಜನಪದ ಗೀತೆಗಳನ್ನು ಹಾಡಿ ರಂಜಿಸಿದರು. ಮುಖಂಡರಾದ ವಿನೋದ್ ಕುಮಾರ್, ಮಹದೇವ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260321-40-1934170032</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>