<p>ಮಳವಳ್ಳಿ: ಅಸ್ಪೃಶ್ಯತೆಯಿಂದ ತೊಂದರೆಗೆ ಒಳಗಾದವರು ಹಾಗೂ ದೇವಸ್ಥಾನಗಳಿಗೆ ಪ್ರವೇಶ ಸಿಗದ ಘಟನೆಗಳು ಕಂಡುಬಂದರೆ ಪೊಲೀಸ್ ಇಲಾಖೆಯ ಗಮನಕ್ಕೆ ತಂದರೆ ಕೂಡಲೇ ಸಮಸ್ಯೆ ಬಗೆಹರಿಸಲಾಗುವುದು ಎಂದು ಡಿವೈಎಸ್ಪಿ ಎಸ್.ಬಿ.ಯಶವಂತ ಕುಮಾರ್ ತಿಳಿಸಿದರು.</p>.<p>ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಗ್ರಾಮೀಣ ಪ್ರದೇಶದಲ್ಲಿನ ಅಸ್ಪೃಶ್ಯತೆ ಆಚರಣೆ ಸಂಬಂಧ ನಿರ್ದಿಷ್ಟವಾದ ದೂರು ಸಲ್ಲಿಸಿದರೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಹಳ್ಳಿಗಳಲ್ಲಿರುವ ಹೋಟೇಲ್, ಸೇವಿಂಗ್ ಶಾಪ್, ದೇವಸ್ಥಾನ ಸೇರಿ ಇತರೆ ಸ್ಥಳಗಳಲ್ಲಿ ಅಸ್ಪೃಶ್ಯತೆ ನಿಷೇಧಿಸಲಾಗಿದ್ದು, ಸಾರ್ವಜನಿಕರು ಸಮಾನತೆಯಿಂದ ಬದುಕಬೇಕು ಎಂದು ಸಲಹೆ ನೀಡಿದರು.</p>.<p>ಅಗಸನಪುರ ಗ್ರಾ.ಪಂ.ಮಾಜಿ ಅಧ್ಯಕ್ಷೆ ಯಶೋಧ ಮಾತನಾಡಿ, ನಮ್ಮೂರಿನ ಸ್ಮಶಾನದಲ್ಲಿರುವ ಮರಗಳನ್ನು ಖಾಸಗಿ ವ್ಯಕ್ತಿಯೊಬ್ಬ ಕಡಿದು ಮಾರಾಟ ಮಾಡುತ್ತಿರುವ ಬಗ್ಗೆ ದೂರು ಸಲ್ಲಿಸಿದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.</p>.<p>ಹಲಗೂರು ಸಿಪಿಐ ಬಿ.ಎಸ್.ಶ್ರೀಧರ್ ಮಾತನಾಡಿ, ಮತ್ತೊಮ್ಮೆ ದೂರು ನೀಡಿ ನಾವು ಕ್ರಮ ಕೈಗೊಳ್ಳುತ್ತೇವೆ ಎಂದರು.</p>.<p>ಸಿಪಿಐ ಜಯಾನಂದ್, ಪಿಎಸ್ಐಗಳಾದ ಪ್ರಕಾಶ್, ಶಿವಲಿಂಗ ದಳವಾಯಿ, ಲೋಕೇಶ್ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-40-1609746892</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಳವಳ್ಳಿ: ಅಸ್ಪೃಶ್ಯತೆಯಿಂದ ತೊಂದರೆಗೆ ಒಳಗಾದವರು ಹಾಗೂ ದೇವಸ್ಥಾನಗಳಿಗೆ ಪ್ರವೇಶ ಸಿಗದ ಘಟನೆಗಳು ಕಂಡುಬಂದರೆ ಪೊಲೀಸ್ ಇಲಾಖೆಯ ಗಮನಕ್ಕೆ ತಂದರೆ ಕೂಡಲೇ ಸಮಸ್ಯೆ ಬಗೆಹರಿಸಲಾಗುವುದು ಎಂದು ಡಿವೈಎಸ್ಪಿ ಎಸ್.ಬಿ.ಯಶವಂತ ಕುಮಾರ್ ತಿಳಿಸಿದರು.</p>.<p>ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಗ್ರಾಮೀಣ ಪ್ರದೇಶದಲ್ಲಿನ ಅಸ್ಪೃಶ್ಯತೆ ಆಚರಣೆ ಸಂಬಂಧ ನಿರ್ದಿಷ್ಟವಾದ ದೂರು ಸಲ್ಲಿಸಿದರೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಹಳ್ಳಿಗಳಲ್ಲಿರುವ ಹೋಟೇಲ್, ಸೇವಿಂಗ್ ಶಾಪ್, ದೇವಸ್ಥಾನ ಸೇರಿ ಇತರೆ ಸ್ಥಳಗಳಲ್ಲಿ ಅಸ್ಪೃಶ್ಯತೆ ನಿಷೇಧಿಸಲಾಗಿದ್ದು, ಸಾರ್ವಜನಿಕರು ಸಮಾನತೆಯಿಂದ ಬದುಕಬೇಕು ಎಂದು ಸಲಹೆ ನೀಡಿದರು.</p>.<p>ಅಗಸನಪುರ ಗ್ರಾ.ಪಂ.ಮಾಜಿ ಅಧ್ಯಕ್ಷೆ ಯಶೋಧ ಮಾತನಾಡಿ, ನಮ್ಮೂರಿನ ಸ್ಮಶಾನದಲ್ಲಿರುವ ಮರಗಳನ್ನು ಖಾಸಗಿ ವ್ಯಕ್ತಿಯೊಬ್ಬ ಕಡಿದು ಮಾರಾಟ ಮಾಡುತ್ತಿರುವ ಬಗ್ಗೆ ದೂರು ಸಲ್ಲಿಸಿದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.</p>.<p>ಹಲಗೂರು ಸಿಪಿಐ ಬಿ.ಎಸ್.ಶ್ರೀಧರ್ ಮಾತನಾಡಿ, ಮತ್ತೊಮ್ಮೆ ದೂರು ನೀಡಿ ನಾವು ಕ್ರಮ ಕೈಗೊಳ್ಳುತ್ತೇವೆ ಎಂದರು.</p>.<p>ಸಿಪಿಐ ಜಯಾನಂದ್, ಪಿಎಸ್ಐಗಳಾದ ಪ್ರಕಾಶ್, ಶಿವಲಿಂಗ ದಳವಾಯಿ, ಲೋಕೇಶ್ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-40-1609746892</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>