ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದ್ದೂರಿನಲ್ಲಿ ಪೊಲೀಸ್ ಸಿಬ್ಬಂದಿಗೆ ಕಚ್ಚಿದ ವ್ಯಕ್ತಿ; ಬಂಧನ

Last Updated 20 ಸೆಪ್ಟೆಂಬರ್ 2021, 4:34 IST
ಅಕ್ಷರ ಗಾತ್ರ

ಮದ್ದೂರು: ಪಟ್ಟಣದ ಲೀಲಾವತಿ ಬಡಾವಣೆಯಲ್ಲಿರುವ ಶಾಸಕ ಡಿ.ಸಿ.ತಮ್ಮಣ್ಣ ಅವರ ಮನೆ ಮುಂದೆ ಗಲಾಟೆ ಮಾಡುತ್ತಿದ್ದ ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸ್ ಸಿಬ್ಬಂದಿಗೆ ವ್ಯಕ್ತಿಯೊಬ್ಬ ಕಚ್ಚಿ ಗಾಯಗೊಳಿಸಿದ ಘಟನೆ ಭಾನುವಾರ ನಡೆದಿದೆ.

ಪಟ್ಟಣದ ನಾಗರಾಜು ಅಲಿಯಾಸ್ ಹಂದಿ ನಾಗ ಶಾಸಕರ ಮನೆ ಮುಂದೆ ಇದ್ದ ವಸ್ತುಗಳನ್ನು ನಾಶಪಡಿಸಿ ಗಲಾಟೆ ಮಾಡುತ್ತಿದ್ದ. ಈ ವೇಳೆ ಸ್ಥಳಕ್ಕೆ ಹೋದ ಕಾನ್‌ಸ್ಟೆಬಲ್‌ ಅನಿಲ್ ಕುಮಾರ್ ಅವರ ಕೈಗೆ ಕಚ್ಚಿದ್ದಾನೆ.

ಜೆಡಿಎಸ್ ಮುಖಂಡ ಚಿಕ್ಕತಮ್ಮೆಗೌಡ, ಅನಿಲ್ ಕುಮಾರ್‌ ನೀಡಿದ ದೂರಿನನ್ವಯ ಮದ್ದೂರು ಪೊಲೀಸರು ಆರೋಪಿಯನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT