ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಜ್ಯೋತಿ ಇಂಟರ್ನ್ಯಾಷನಲ್ ಹೋಟೆಲ್ನಲ್ಲಿ ಆ.30ರಂದು ರಾತ್ರಿ ಬಂದು ತಂಗಿದ್ದಾನೆ. ತನ್ನದೇ ಕಾರ್ನಲ್ಲಿ ಬಂದಿದ್ದಾನೆ. ಹೋಟೆಲ್ನವರು ಹಣ ಕೇಳಿದಾಗ, ಎಟಿಎಂನಿಂದ ತೆಗೆದುಕೊಡುತ್ತೇನೆ ಎಂದು ತಿಳಿಸಿದ್ದಾನೆ. ಹುಚ್ಚ ವೆಂಕಟ್ ಹೋಟೆಲ್ನಲ್ಲಿದ್ದಾನೆ ಎಂಬ ಸುದ್ದಿ ತಿಳಿದ ಯುವಕರು ಭಾನುವಾರ ಬೆಳಿಗ್ಗೆ ಹೋಟೆಲ್ ಮುಂದೆ ಜಮಾಯಿಸಿದ್ದಾರೆ.