ತಾಲ್ಲೂಕಿನ ಮಠದದೊಡ್ಡಿ, ಹುಲಿಗೆರೆಪುರ, ನಗರಕೆರೆ, ಉಪ್ಪಾರದೊಡ್ಡಿ, ಬೋರಾಪುರ, ಗೆಜ್ಜಲಗೆರೆ, ಗೊರವನಹಳ್ಳಿ, ಚನ್ನಸಂದ್ರ, ಉಪ್ಪಿನಕೆರೆ ಸೇರಿದಂತೆ ತಾಲ್ಲೂಕಿನಾದ್ಯಂತ ಬಿರುಸಿನ ಪ್ರಚಾರ ನಡೆಸಿ ಉಪ್ಪಿನಕೆರೆ ಗ್ರಾಮದಲ್ಲಿ ಮಾತನಾಡಿ, ‘ಡಿ.ಸಿ.ತಮ್ಮಣ್ಣ ಅವರು ತಮ್ಮ ಚುನಾವಣಾ ಪ್ರಚಾರದಲ್ಲಿ ಅಂಬರೀಷ್ರ ವಿರುದ್ಧ ಮಾತನಾಡಿ ಅವರು ಏನೂ ಮಾಡಿಲ್ಲ ಅಂತಾರೆ. ಅವರು ಏನು ಮಾಡಿದ್ದಾರೆ ಎಂದು ಅವರ ಮನಸಾಕ್ಷಿಯನ್ನು ಕೇಳಿಕೊಳ್ಳಲಿ? ಈ ದಿನ ಅವರು ಸಚಿವರಾಗಿ ಅಧಿಕಾರ ನಡೆಸುತ್ತಿರುವುದಕ್ಕೆ ಯಾರು ಕಾರಣ ಅಂತ ಕೇಳಿ, ಆವತ್ತು ನಮ್ಮ ಮನೆಯಲ್ಲಿ ಕುಳಿತು ನನ್ನ ಪತಿ ಅಂಬರೀಷ್ ಬಳಿ ಮಂತ್ರಿ ಸ್ಥಾನಕ್ಕಾಗಿ ಚಡಪಡಿಸುತ್ತಿದ್ದಾಗ ಅಂಬಿ ಯಾರಿಗೆ ಇವರನ್ನು ಮಂತ್ರಿ ಮಾಡಿ ಎಂದು ಹೇಳಿದರು ಎಂದು ನೆನಪಿಸಿಕೊಳ್ಳಲಿ’ ಎಂದರು.