<p><strong>ನಾಗಮಂಗಲ</strong>: ‘ಮನಸ್ಸುಗಳ ಬೆಸುಗೆಯನ್ನು ಸಾಕ್ಷೀಕರಿಸುವ ಮಾಂಗಲ್ಯ ಧಾರಣೆಯೊಂದಿಗೆ ಶುರುವಾಗುವ ದಾಂಪತ್ಯ ಜೀವನದಲ್ಲಿ ಕಷ್ಟ-ಸುಖಗಳನ್ನು ಸಮಾನವಾಗಿ ಸ್ವೀಕರಿಸಬೇಕು’ ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸಲಹೆ ನೀಡಿದರು.</p>.<p>ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀಮಠದ ಬಿಜಿಎಸ್ ಸಭಾ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ 10 ಜೋಡಿಗಳ ಸರಳ ವಿವಾಹ ಹಾಗೂ ಹಿರಿಯ ದಂಪತಿಗಳಿಗೆ ಗೌರವ ಸಮರ್ಪಣೆ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು. </p>.<p>‘ಗೃಹಸ್ಥಾಶ್ರಮ ಬಹಳ ಗಟ್ಟಿಯಾಗಿರುವ ನೆಲದಲ್ಲಿ ಮಾತ್ರ ಸಂಸ್ಕಾರ, ಸಂಸ್ಕೃತಿಯೂ ಭದ್ರವಾಗಿರುತ್ತದೆ. ಶ್ರೀಕ್ಷೇತ್ರದಲ್ಲಿ ವರ್ಷವಿಡೀ ಸರಳ ವಿವಾಹ ಮಹೋತ್ಸವ ನಡೆಯುತ್ತಿದ್ದರೂ ಭೈರವೈಕ್ಯ ಶ್ರೀಗಳ ಸಂಕಲ್ಪದಂತೆ ಜಾತ್ರಾ ಮಹೋತ್ಸವದಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ’ ಎಂದರು. </p>.<p>ವಧು-ವರರಿಗೆ ಮಂತ್ರಾಕ್ಷತೆ ಹಾಕಿ ಫಲ ತಾಂಬೂಲ ನೀಡಿ ಶ್ರೀಗಳು ಹರಸಿದರು. ವಧುವಿಗೆ ಸೀರೆ, ರವಿಕೆ, ತಾಳಿ, ಕಾಲುಂಗುರ, ವರರಿಗೆ ಪೇಟ, ಪಂಚೆ, ಶರ್ಟ್ ವಿತರಿಸಿದರು. </p>.<p>ಶ್ರೀಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಶ್ರೀಮಠದ ಚೈತನ್ಯನಾಥ ಸ್ವಾಮೀಜಿ, ಮಂಡ್ಯ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್. ನಂದಿನಿ, ಪಾಂಡವಪುರದ ಪುಸ್ತಕಮನೆಯ ಎಂ. ಅಂಕೇಗೌಡ, ಇತಿಹಾಸ ತಜ್ಞ ಪ್ರೊ.ಕೆ. ಪುಟ್ಟರಂಗಪ್ಪ ಪಾಲ್ಗೊಂಡಿದ್ದರು. </p>.<p><strong>ಹಿರಿಯ ದಂಪತಿಗಳಿಗೆ ಸನ್ಮಾನ</strong></p><p>ವಿವಾಹವಾಗಿ 50 ವರ್ಷ ದಾಂಪತ್ಯ ಜೀವನ ಪೂರೈಸಿದ ದಂಪತಿಗಳನ್ನು ನಿರ್ಮಲಾನಂದನಾಥ ಸ್ವಾಮೀಜಿ ಅವರು ಮೈಸೂರು ಪೇಟ ಶಾಲು ಹೊದಿಸಿ ಸನ್ಮಾನಿಸಿದರು. ಮಂಡ್ಯ ಹಾಸನ ಮೈಸೂರು ರಾಮನಗರ ಹಾಗೂ ತುಮಕೂರು ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ 260 ಹಿರಿಯ ದಂಪತಿಗಳು ಆಗಮಿಸಿದ್ದು ವಿಶೇಷವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಮಂಗಲ</strong>: ‘ಮನಸ್ಸುಗಳ ಬೆಸುಗೆಯನ್ನು ಸಾಕ್ಷೀಕರಿಸುವ ಮಾಂಗಲ್ಯ ಧಾರಣೆಯೊಂದಿಗೆ ಶುರುವಾಗುವ ದಾಂಪತ್ಯ ಜೀವನದಲ್ಲಿ ಕಷ್ಟ-ಸುಖಗಳನ್ನು ಸಮಾನವಾಗಿ ಸ್ವೀಕರಿಸಬೇಕು’ ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸಲಹೆ ನೀಡಿದರು.</p>.<p>ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀಮಠದ ಬಿಜಿಎಸ್ ಸಭಾ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ 10 ಜೋಡಿಗಳ ಸರಳ ವಿವಾಹ ಹಾಗೂ ಹಿರಿಯ ದಂಪತಿಗಳಿಗೆ ಗೌರವ ಸಮರ್ಪಣೆ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು. </p>.<p>‘ಗೃಹಸ್ಥಾಶ್ರಮ ಬಹಳ ಗಟ್ಟಿಯಾಗಿರುವ ನೆಲದಲ್ಲಿ ಮಾತ್ರ ಸಂಸ್ಕಾರ, ಸಂಸ್ಕೃತಿಯೂ ಭದ್ರವಾಗಿರುತ್ತದೆ. ಶ್ರೀಕ್ಷೇತ್ರದಲ್ಲಿ ವರ್ಷವಿಡೀ ಸರಳ ವಿವಾಹ ಮಹೋತ್ಸವ ನಡೆಯುತ್ತಿದ್ದರೂ ಭೈರವೈಕ್ಯ ಶ್ರೀಗಳ ಸಂಕಲ್ಪದಂತೆ ಜಾತ್ರಾ ಮಹೋತ್ಸವದಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ’ ಎಂದರು. </p>.<p>ವಧು-ವರರಿಗೆ ಮಂತ್ರಾಕ್ಷತೆ ಹಾಕಿ ಫಲ ತಾಂಬೂಲ ನೀಡಿ ಶ್ರೀಗಳು ಹರಸಿದರು. ವಧುವಿಗೆ ಸೀರೆ, ರವಿಕೆ, ತಾಳಿ, ಕಾಲುಂಗುರ, ವರರಿಗೆ ಪೇಟ, ಪಂಚೆ, ಶರ್ಟ್ ವಿತರಿಸಿದರು. </p>.<p>ಶ್ರೀಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಶ್ರೀಮಠದ ಚೈತನ್ಯನಾಥ ಸ್ವಾಮೀಜಿ, ಮಂಡ್ಯ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್. ನಂದಿನಿ, ಪಾಂಡವಪುರದ ಪುಸ್ತಕಮನೆಯ ಎಂ. ಅಂಕೇಗೌಡ, ಇತಿಹಾಸ ತಜ್ಞ ಪ್ರೊ.ಕೆ. ಪುಟ್ಟರಂಗಪ್ಪ ಪಾಲ್ಗೊಂಡಿದ್ದರು. </p>.<p><strong>ಹಿರಿಯ ದಂಪತಿಗಳಿಗೆ ಸನ್ಮಾನ</strong></p><p>ವಿವಾಹವಾಗಿ 50 ವರ್ಷ ದಾಂಪತ್ಯ ಜೀವನ ಪೂರೈಸಿದ ದಂಪತಿಗಳನ್ನು ನಿರ್ಮಲಾನಂದನಾಥ ಸ್ವಾಮೀಜಿ ಅವರು ಮೈಸೂರು ಪೇಟ ಶಾಲು ಹೊದಿಸಿ ಸನ್ಮಾನಿಸಿದರು. ಮಂಡ್ಯ ಹಾಸನ ಮೈಸೂರು ರಾಮನಗರ ಹಾಗೂ ತುಮಕೂರು ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ 260 ಹಿರಿಯ ದಂಪತಿಗಳು ಆಗಮಿಸಿದ್ದು ವಿಶೇಷವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>