<p><strong>ನಾಗಮಂಗಲ:</strong> ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ಫೆ.24ರಿಂದ ಆರಂಭವಾಗಿದ್ದ ಆದಿಚುಂಚನಗಿರಿ ಜಾತ್ರಾ ಮಹೋತ್ಸವ ಕ್ಷೇತ್ರದ ಸಂಪ್ರದಾಯದಂತೆ ಅವಭೃತ ಸ್ನಾನದೊಂದಿಗೆ ಬುಧವಾರ ಸಂಪನ್ನಗೊಂಡಿತು.</p><p>ನಿರ್ಮಲಾನಂದನಾಥ ಸ್ವಾಮೀಜಿಯವರು ಬುಧವಾರ ಶ್ರೀಕ್ಷೇತ್ರದ ದೇವಾಲಯಗಳಲ್ಲಿ ಹೋಮ, ಪೂಜಾ ಕೈಂಕರ್ಯ, ಧರ್ಮ ಧ್ವಜಾರೋಹಣ ಹಾಗೂ ಮಹಾಭಿಷೇಕ ನೆರವೇರಿಸಿ ಜಾತ್ರಾ ಮಹೋತ್ಸವದ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಿದರು.</p><p>ಕ್ಷೇತ್ರದ ಧಾರ್ಮಿಕ ಹಿನ್ನೆಲೆಯುಳ್ಳ ಬಿಂದು ಸರೋವರದಲ್ಲಿ ಅವಭೃತ ಸ್ನಾನ (ಯಜ್ಞ, ಯಾಗದ ನಂತರದ ಪರಿಶುದ್ಧತೆಗಾಗಿ ಮಾಡುವ ಸ್ನಾನ) ಹಾಗೂ ಮಹಾಭಿಷೇಕ ನೆರವೇರಿದ ಬಳಿಕ ವಿಧ್ಯುಕ್ತವಾಗಿ ಜಾತ್ರಾ ಮಹೋತ್ಸವಕ್ಕೆ ತೆರೆ ಬಿದ್ದಿತು. </p><p>ಜಾತ್ರೆಗೆ ಬಂದಿದ್ದ ಶ್ರೀಮಠದ ಭಕ್ತರು ಅವಭೃತ ಸ್ನಾನದಲ್ಲಿ ಪಾಲ್ಗೊಂಡು ಭಕ್ತಿ ಸಮರ್ಪಿಸಿದರು. ಅನ್ನದಾಸೋಹ ನಡೆಸಿದ ವಿವಿಧ ಭಕ್ತರನ್ನು ಮಠದ ಸಂಪ್ರದಾಯದಂತೆ ಸನ್ಮಾನಿಸಲಾಯಿತು.</p><p>ಜಾತ್ರೆಗೆ ಬಂದೋಬಸ್ತ್ ಒದಗಿಸಿದ ಬೆಳ್ಳೂರು ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ರವಿಕುಮಾರ್ ಮತ್ತು ಸಿಬ್ಬಂದಿಯನ್ನು ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವದಿಸಿದರು. ಸೇವೆ ಸಲ್ಲಿಸಿದ ವಿವಿಧ ಶಾಲಾ– ಕಾಲೇಜುಗಳ ವಿದ್ಯಾರ್ಥಿಗಳು, ಮುಖ್ಯಸ್ಥರಿಗೆ ಅಭಿನಂದನೆ ತಿಳಿಸಿದರು.</p><p>ಶ್ರೀಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಚೈತನ್ಯನಾಥ ಸ್ವಾಮೀಜಿ ಸೇರಿದಂತೆ ವಿವಿಧ ಶಾಖಾ ಮಠಗಳ ಸ್ವಾಮೀಜಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಮಂಗಲ:</strong> ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ಫೆ.24ರಿಂದ ಆರಂಭವಾಗಿದ್ದ ಆದಿಚುಂಚನಗಿರಿ ಜಾತ್ರಾ ಮಹೋತ್ಸವ ಕ್ಷೇತ್ರದ ಸಂಪ್ರದಾಯದಂತೆ ಅವಭೃತ ಸ್ನಾನದೊಂದಿಗೆ ಬುಧವಾರ ಸಂಪನ್ನಗೊಂಡಿತು.</p><p>ನಿರ್ಮಲಾನಂದನಾಥ ಸ್ವಾಮೀಜಿಯವರು ಬುಧವಾರ ಶ್ರೀಕ್ಷೇತ್ರದ ದೇವಾಲಯಗಳಲ್ಲಿ ಹೋಮ, ಪೂಜಾ ಕೈಂಕರ್ಯ, ಧರ್ಮ ಧ್ವಜಾರೋಹಣ ಹಾಗೂ ಮಹಾಭಿಷೇಕ ನೆರವೇರಿಸಿ ಜಾತ್ರಾ ಮಹೋತ್ಸವದ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಿದರು.</p><p>ಕ್ಷೇತ್ರದ ಧಾರ್ಮಿಕ ಹಿನ್ನೆಲೆಯುಳ್ಳ ಬಿಂದು ಸರೋವರದಲ್ಲಿ ಅವಭೃತ ಸ್ನಾನ (ಯಜ್ಞ, ಯಾಗದ ನಂತರದ ಪರಿಶುದ್ಧತೆಗಾಗಿ ಮಾಡುವ ಸ್ನಾನ) ಹಾಗೂ ಮಹಾಭಿಷೇಕ ನೆರವೇರಿದ ಬಳಿಕ ವಿಧ್ಯುಕ್ತವಾಗಿ ಜಾತ್ರಾ ಮಹೋತ್ಸವಕ್ಕೆ ತೆರೆ ಬಿದ್ದಿತು. </p><p>ಜಾತ್ರೆಗೆ ಬಂದಿದ್ದ ಶ್ರೀಮಠದ ಭಕ್ತರು ಅವಭೃತ ಸ್ನಾನದಲ್ಲಿ ಪಾಲ್ಗೊಂಡು ಭಕ್ತಿ ಸಮರ್ಪಿಸಿದರು. ಅನ್ನದಾಸೋಹ ನಡೆಸಿದ ವಿವಿಧ ಭಕ್ತರನ್ನು ಮಠದ ಸಂಪ್ರದಾಯದಂತೆ ಸನ್ಮಾನಿಸಲಾಯಿತು.</p><p>ಜಾತ್ರೆಗೆ ಬಂದೋಬಸ್ತ್ ಒದಗಿಸಿದ ಬೆಳ್ಳೂರು ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ರವಿಕುಮಾರ್ ಮತ್ತು ಸಿಬ್ಬಂದಿಯನ್ನು ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವದಿಸಿದರು. ಸೇವೆ ಸಲ್ಲಿಸಿದ ವಿವಿಧ ಶಾಲಾ– ಕಾಲೇಜುಗಳ ವಿದ್ಯಾರ್ಥಿಗಳು, ಮುಖ್ಯಸ್ಥರಿಗೆ ಅಭಿನಂದನೆ ತಿಳಿಸಿದರು.</p><p>ಶ್ರೀಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಚೈತನ್ಯನಾಥ ಸ್ವಾಮೀಜಿ ಸೇರಿದಂತೆ ವಿವಿಧ ಶಾಖಾ ಮಠಗಳ ಸ್ವಾಮೀಜಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>