<p>ಮಂಡ್ಯ: ಅಕ್ಷಯ ತೃತೀಯ ಅಂಗವಾಗಿ ಚಿನ್ನಾಭರಣ ಖರೀದಿಸಲು ಗ್ರಾಹಕರು ಮುಗಿಬಿದ್ದರು. ನಗರದ ಚಿನ್ನಾಭರಣ ಮಳಿಗೆಗಳಲ್ಲಿ ಸೋಮವಾರ ಜನರು ಕಿಕ್ಕಿರಿದು ತುಂಬಿದ್ದರು.</p>.<p>ಅಕ್ಷಯ ತೃತೀಯದಂದು ಚಿನ್ನ, ಬೆಳ್ಳಿ, ವಜ್ರ, ರತ್ನಾಭರಣ, ಭೂಮಿ ಖರೀದಿಸಿದರೆ ಸಂಪತ್ತು ದುಪ್ಪಟ್ಟಾಗುತ್ತದೆ ಎಂಬ ನಂಬಿಕೆಯಿಂದ ನಗರದ ಪೇಟೆಬೀದಿ, ವಿ.ವಿ.ರಸ್ತೆ, ನೂರಡಿ ರಸ್ತೆ, ಬೆಂಗಳೂರು–ಮೈಸೂರು ಹಳೇ ಹೆದ್ದಾರಿಯಲ್ಲಿರುವ ಚಿನ್ನಾಭರಣ ಮಾರಾಟ ಮಳಿಗೆಗಳಲ್ಲಿ ಭರಾಟೆ ಜೋರಾಗಿತ್ತು.</p>.<p>ಬಸವ ಜಯಂತಿ ಪ್ರಯುಕ್ತ ರಜೆಯಿತ್ತು. ಹೀಗಾಗಿ ಚಿನ್ನಾಭರಣ ಖರೀದಿಸಲು ಹೆಚ್ಚಿನ ಸಂಖ್ಯೆಯ ಜನರು ಜ್ಯುವೆಲರಿ ಶಾಪ್ಗಳಿಗೆ ಬಂದಿದ್ದರು. ಮಹಿಳೆಯರು ಆಭರಣ ಖರೀದಿಯಲ್ಲಿ ತೊಡಗಿದ್ದು ಕಂಡುಬಂದಿತು.</p>.<p>ಮಂಡ್ಯ ನಗರವೊಂದರಲ್ಲೇ 120ಕ್ಕೂ ಹೆಚ್ಚು ಚಿನ್ನದ ಅಂಗಡಿಗಳಿದ್ದು, ಮಂಡ್ಯ ಜ್ಯುವೆಲರ್ಸ್ ಅಸೋಸಿಯೇಷನ್ನಲ್ಲಿ 75ಕ್ಕೂ ಹೆಚ್ಚು ಚಿನ್ನದ ಅಂಗಡಿಗಳ ಮಾಲೀಕರು ಸದಸ್ಯರಾಗಿದ್ದಾರೆ. ಇವರಲ್ಲಿ ಬಹುತೇಕ ವರ್ತಕರು ಬಾಂಬೆ, ಬೆಂಗಳೂರಿನಿಂದದ ಚಿನ್ನದ ಬಿಸ್ಕತ್, ಗಟ್ಟಿಗಳನ್ನು ಖರೀದಿಸಿ ತಂದು ಸ್ಥಳೀಯವಾಗಿ ಆಭರಣಗಳ ರೂಪದಲ್ಲಿ ಮಾರಾಟ ಮಾಡುತ್ತಾರೆ.</p>.<p>‘ಚಿನ್ನ, ಬೆಳ್ಳಿ ಬೆಲೆ ಇಳಿಕೆಯಿಂದಾಗಿ ಖರೀದಿಸುವವರ ಸಂಖ್ಯೆ ಈ ವರ್ಷ ಹೆಚ್ಚಾಗಿತ್ತು. ಕಳೆದ ವರ್ಷಕ್ಕಿಂತ ಈ ಬಾರಿ ಶೇ 25ರಷ್ಟು ಹೆಚ್ಚುವರಿ ವ್ಯಾಪಾರವಾಗಿದೆ. ನಮ್ಮ ಮಳಿಗೆಯಲ್ಲಿ ಸಂಜೆವರೆಗೆ ಸುಮಾರು ₹2.50 ಕೋಟಿ ವ್ಯವಹಾರ ನಡೆದಿದೆ’ ಎಂದು ಮಂಡ್ಯ ನಗರದ ‘ಶ್ರೀನಿಧಿ ಗೋಲ್ಡ್’ ವ್ಯವಸ್ಥಾಪಕ ನಿರ್ದೇಶಕ ಜಗನ್ನಾಥಶೆಟ್ಟಿ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-40-865238755</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ಅಕ್ಷಯ ತೃತೀಯ ಅಂಗವಾಗಿ ಚಿನ್ನಾಭರಣ ಖರೀದಿಸಲು ಗ್ರಾಹಕರು ಮುಗಿಬಿದ್ದರು. ನಗರದ ಚಿನ್ನಾಭರಣ ಮಳಿಗೆಗಳಲ್ಲಿ ಸೋಮವಾರ ಜನರು ಕಿಕ್ಕಿರಿದು ತುಂಬಿದ್ದರು.</p>.<p>ಅಕ್ಷಯ ತೃತೀಯದಂದು ಚಿನ್ನ, ಬೆಳ್ಳಿ, ವಜ್ರ, ರತ್ನಾಭರಣ, ಭೂಮಿ ಖರೀದಿಸಿದರೆ ಸಂಪತ್ತು ದುಪ್ಪಟ್ಟಾಗುತ್ತದೆ ಎಂಬ ನಂಬಿಕೆಯಿಂದ ನಗರದ ಪೇಟೆಬೀದಿ, ವಿ.ವಿ.ರಸ್ತೆ, ನೂರಡಿ ರಸ್ತೆ, ಬೆಂಗಳೂರು–ಮೈಸೂರು ಹಳೇ ಹೆದ್ದಾರಿಯಲ್ಲಿರುವ ಚಿನ್ನಾಭರಣ ಮಾರಾಟ ಮಳಿಗೆಗಳಲ್ಲಿ ಭರಾಟೆ ಜೋರಾಗಿತ್ತು.</p>.<p>ಬಸವ ಜಯಂತಿ ಪ್ರಯುಕ್ತ ರಜೆಯಿತ್ತು. ಹೀಗಾಗಿ ಚಿನ್ನಾಭರಣ ಖರೀದಿಸಲು ಹೆಚ್ಚಿನ ಸಂಖ್ಯೆಯ ಜನರು ಜ್ಯುವೆಲರಿ ಶಾಪ್ಗಳಿಗೆ ಬಂದಿದ್ದರು. ಮಹಿಳೆಯರು ಆಭರಣ ಖರೀದಿಯಲ್ಲಿ ತೊಡಗಿದ್ದು ಕಂಡುಬಂದಿತು.</p>.<p>ಮಂಡ್ಯ ನಗರವೊಂದರಲ್ಲೇ 120ಕ್ಕೂ ಹೆಚ್ಚು ಚಿನ್ನದ ಅಂಗಡಿಗಳಿದ್ದು, ಮಂಡ್ಯ ಜ್ಯುವೆಲರ್ಸ್ ಅಸೋಸಿಯೇಷನ್ನಲ್ಲಿ 75ಕ್ಕೂ ಹೆಚ್ಚು ಚಿನ್ನದ ಅಂಗಡಿಗಳ ಮಾಲೀಕರು ಸದಸ್ಯರಾಗಿದ್ದಾರೆ. ಇವರಲ್ಲಿ ಬಹುತೇಕ ವರ್ತಕರು ಬಾಂಬೆ, ಬೆಂಗಳೂರಿನಿಂದದ ಚಿನ್ನದ ಬಿಸ್ಕತ್, ಗಟ್ಟಿಗಳನ್ನು ಖರೀದಿಸಿ ತಂದು ಸ್ಥಳೀಯವಾಗಿ ಆಭರಣಗಳ ರೂಪದಲ್ಲಿ ಮಾರಾಟ ಮಾಡುತ್ತಾರೆ.</p>.<p>‘ಚಿನ್ನ, ಬೆಳ್ಳಿ ಬೆಲೆ ಇಳಿಕೆಯಿಂದಾಗಿ ಖರೀದಿಸುವವರ ಸಂಖ್ಯೆ ಈ ವರ್ಷ ಹೆಚ್ಚಾಗಿತ್ತು. ಕಳೆದ ವರ್ಷಕ್ಕಿಂತ ಈ ಬಾರಿ ಶೇ 25ರಷ್ಟು ಹೆಚ್ಚುವರಿ ವ್ಯಾಪಾರವಾಗಿದೆ. ನಮ್ಮ ಮಳಿಗೆಯಲ್ಲಿ ಸಂಜೆವರೆಗೆ ಸುಮಾರು ₹2.50 ಕೋಟಿ ವ್ಯವಹಾರ ನಡೆದಿದೆ’ ಎಂದು ಮಂಡ್ಯ ನಗರದ ‘ಶ್ರೀನಿಧಿ ಗೋಲ್ಡ್’ ವ್ಯವಸ್ಥಾಪಕ ನಿರ್ದೇಶಕ ಜಗನ್ನಾಥಶೆಟ್ಟಿ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-40-865238755</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>