<p>ಮಂಡ್ಯ: ‘ಪಶು– ಪಕ್ಷಿಗಳಿಗೆ ಬೇಸಿಗೆಯಲ್ಲಿ ನೀರಿನ ಅಭಾವ ಕಂಡು ಬರುವುದರಿಂದ, ಎಲ್ಲರೂ ಮನೆ ಚಾವಣಿ ಮತ್ತು ಮುಂಭಾಗ ನೀರು, ಆಹಾರ ಇರಿಸುವ ಮೂಲಕ ಮೂಕಜೀವಿಗಳ ಜೀವ ಉಳಿಸಿ’ ಎಂದು ಜೈ ಕರ್ನಾಟಕ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ ಎಸ್. ನಾರಾಯಣ್ ಮನವಿ ಮಾಡಿದರು.</p>.<p>ನಗರದ ಸ್ವರ್ಣಸಂದ್ರ ಬಡಾವಣೆಯಲ್ಲಿರುವ ಶಿವಕುಮಾರ ಸ್ವಾಮೀಜಿ ಉದ್ಯಾನದಲ್ಲಿ ಜೈ ಕರ್ನಾಟಕ ಪರಿಷತ್ ವತಿಯಿಂದ ‘ಪರಿಸರ ಉಳಿಸಿ’ ಅಭಿಯಾನ ಮತ್ತು ಪ್ರಾಣಿ ಪಕ್ಷಿಗಳಿಗೆ ‘ನೀರಿನ ತೊಟ್ಟಿ’ ಅಳವಡಿಸುವ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ನಮ್ಮ ನಡುವೆ ಇರುವ ಪ್ರಾಣಿ, ಪಕ್ಷಿಗಳಿಗೆ ಕುಡಿಯುವ ನೀರು ತಕ್ಷಣ ಸಿಗುವಂತೆ ನೋಡಿಕೊಳ್ಳಬೇಕು. ನಮ್ಮ ಸಂಘಟನೆಯೊಂದಿಗೆ ಹಲವು ಸಂಘ ಸಂಸ್ಥೆಗಳು ಕೂಡ ಕೈ ಜೋಡಿಸಿವೆ. ನಗರದಾದ್ಯಂತ ಈ ಕಾರ್ಯ ಪೂರ್ಣಗೊಳಿಸಲಾಗುವುದು ಎಂದರು.</p>.<p>‘ಎಲ್ಲರೊಳಗೊಂದಾಗು ಮಂಕುತಿಮ್ಮ ಟ್ರಸ್ಟ್’ನ ವಿನಯ್ ಕುಮಾರ್ ಮಾತನಾಡಿ, ಜೈ ಕರ್ನಾಟಕ ಪರಿಷತ್ನವರು ಉತ್ತಮ ಕೆಲಸ ಮಾಡುತ್ತಿದ್ದು, ಈ ಸೇವಾ ಕಾರ್ಯಕ್ಕೆ ಎಲ್ಲರೂ ಜೊತೆಯಾಗಿರೋಣ ಎಂದು ತಿಳಿಸಿದರು.</p>.<p>ನುಡಿಭಾರತಿ ಸಹಕಾರ ಸಂಘದ ಎ.ಎಲ್. ಬಸವೇಗೌಡ, ಮುಖಂಡರಾದ ಎಂ.ಜೆ. ಯೋಗೇಶ್, ಶಿವಕುಮಾರ್, ಕಿರಣ್ ಕುಮಾರ್, ಭಾರತಿ, ಪುಟ್ಟಮ್ಮ, ರೇಖಾ, ನಾಗಮ್ಮ, ವರಲಕ್ಷ್ಮಿ, ಸಂಘಟನೆಯ ಜೆ.ಬಸವರಾಜ್, ಪುಟ್ಟಸ್ವಾಮಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-40-112080293</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ‘ಪಶು– ಪಕ್ಷಿಗಳಿಗೆ ಬೇಸಿಗೆಯಲ್ಲಿ ನೀರಿನ ಅಭಾವ ಕಂಡು ಬರುವುದರಿಂದ, ಎಲ್ಲರೂ ಮನೆ ಚಾವಣಿ ಮತ್ತು ಮುಂಭಾಗ ನೀರು, ಆಹಾರ ಇರಿಸುವ ಮೂಲಕ ಮೂಕಜೀವಿಗಳ ಜೀವ ಉಳಿಸಿ’ ಎಂದು ಜೈ ಕರ್ನಾಟಕ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ ಎಸ್. ನಾರಾಯಣ್ ಮನವಿ ಮಾಡಿದರು.</p>.<p>ನಗರದ ಸ್ವರ್ಣಸಂದ್ರ ಬಡಾವಣೆಯಲ್ಲಿರುವ ಶಿವಕುಮಾರ ಸ್ವಾಮೀಜಿ ಉದ್ಯಾನದಲ್ಲಿ ಜೈ ಕರ್ನಾಟಕ ಪರಿಷತ್ ವತಿಯಿಂದ ‘ಪರಿಸರ ಉಳಿಸಿ’ ಅಭಿಯಾನ ಮತ್ತು ಪ್ರಾಣಿ ಪಕ್ಷಿಗಳಿಗೆ ‘ನೀರಿನ ತೊಟ್ಟಿ’ ಅಳವಡಿಸುವ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ನಮ್ಮ ನಡುವೆ ಇರುವ ಪ್ರಾಣಿ, ಪಕ್ಷಿಗಳಿಗೆ ಕುಡಿಯುವ ನೀರು ತಕ್ಷಣ ಸಿಗುವಂತೆ ನೋಡಿಕೊಳ್ಳಬೇಕು. ನಮ್ಮ ಸಂಘಟನೆಯೊಂದಿಗೆ ಹಲವು ಸಂಘ ಸಂಸ್ಥೆಗಳು ಕೂಡ ಕೈ ಜೋಡಿಸಿವೆ. ನಗರದಾದ್ಯಂತ ಈ ಕಾರ್ಯ ಪೂರ್ಣಗೊಳಿಸಲಾಗುವುದು ಎಂದರು.</p>.<p>‘ಎಲ್ಲರೊಳಗೊಂದಾಗು ಮಂಕುತಿಮ್ಮ ಟ್ರಸ್ಟ್’ನ ವಿನಯ್ ಕುಮಾರ್ ಮಾತನಾಡಿ, ಜೈ ಕರ್ನಾಟಕ ಪರಿಷತ್ನವರು ಉತ್ತಮ ಕೆಲಸ ಮಾಡುತ್ತಿದ್ದು, ಈ ಸೇವಾ ಕಾರ್ಯಕ್ಕೆ ಎಲ್ಲರೂ ಜೊತೆಯಾಗಿರೋಣ ಎಂದು ತಿಳಿಸಿದರು.</p>.<p>ನುಡಿಭಾರತಿ ಸಹಕಾರ ಸಂಘದ ಎ.ಎಲ್. ಬಸವೇಗೌಡ, ಮುಖಂಡರಾದ ಎಂ.ಜೆ. ಯೋಗೇಶ್, ಶಿವಕುಮಾರ್, ಕಿರಣ್ ಕುಮಾರ್, ಭಾರತಿ, ಪುಟ್ಟಮ್ಮ, ರೇಖಾ, ನಾಗಮ್ಮ, ವರಲಕ್ಷ್ಮಿ, ಸಂಘಟನೆಯ ಜೆ.ಬಸವರಾಜ್, ಪುಟ್ಟಸ್ವಾಮಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-40-112080293</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>