<p>ಮಂಡ್ಯ: ‘ರಾಸುಗಳಿಗೆ ವಿಮೆ ಮಾಡಿಸುವುದರಿಂದ ರೈತರಿಗೆ ಅನುಕೂಲವಾಗುತ್ತದೆ. ಇದರ ಬಗ್ಗೆ ಅಧಿಕಾರಿಗಳು ಗಮನ ಹರಿಸಿ ಜಾಗೃತಿ ಮೂಡಿಸಬೇಕು’ ಎಂದು ಶಾಸಕ ಪಿ.ರವಿಕುಮಾರ್ ಸಲಹೆ ನೀಡಿದರು.</p>.<p>ತಾಲ್ಲೂಕಿನ ದೊಡ್ಡಬಾಣಸವಾಡಿ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಜಿಲ್ಲಾ ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತಿದ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ 9ನೇ ಸುತ್ತಿನ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ರಾಸುಗಳ ಪ್ರಾಣಕ್ಕೆ ತೊಂದರೆಯಾಗಿ ಸಾವನ್ನಪ್ಪಿದರೆ ಅಂತಹ ಸಂದರ್ಭದಲ್ಲಿ ವಿಮೆ ಮಾಡಿಸಿದ್ದರೆ ನಷ್ಟದ ಪರಿಹಾರ ತುಂಬಿಕೊಳ್ಳಲು ಸಾಧ್ಯವಾಗುತ್ತದೆ. ಇಲ್ಲವಾದರೆ ರೈತರ ಸಂಕಷ್ಟಕ್ಕೆ ಒಳಗಾಗುತ್ತಾರೆ. ರೈತರು ತಪ್ಪದೆ ರಾಸುಗಳಿಗೆ ವಿಮೆ ಮಾಡಿಸುವ ಮೂಲಕ ಜಾಗೃತರಾಗಬೇಕು’ ಎಂದು ತಿಳಿಸಿದರು.</p>.<p>ಮನ್ಮುಲ್ ಅಧ್ಯಕ್ಷ ಯು.ಸಿ.ಶಿವಕುಮಾರ್ ಮಾತನಾಡಿ, ‘ಲಕ್ಷ ಲಕ್ಷ ಕೊಟ್ಟು ಹಸುಗಳನ್ನು ಖರೀದಿ ಮಾಡಿರುವ ರೈತರಿಗೆ ನಷ್ಟ ಆಗಬಾರದೆಂಬ ದೃಷ್ಟಿಯಿಂದಲೇ ರಾಸುಗಳಿಗೆ ವಿಮೆ ಮಾಡಿಸಿಕೊಳ್ಳುವುದು ಸೂಕ್ತವಾಗಿದೆ. ರೈತರು ಕಷ್ಟದಿಂದ ಪಾರಾಗುವ ಕಡೆ ಹೆಚ್ಚು ಗಮನ ಹರಿಸಬೇಕು. ಸರ್ಕಾರದಿಂದ ಸಿಗುವ ಯೋಜನೆಗಳನ್ನು ಬಳಸಿಕೊಳ್ಳಬೇಕು’ ಎಂದರು.</p>.<p>ಪಶುವೈದ್ಯಾಧಿಕಾರಿ ಡಾ.ಸುರೇಶ್ ಮಾತನಾಡಿ, ‘ಹಸುಗಳಿಗೆ ಕಾಲು ಬಾಯಿ ಜ್ವರದ ಲಸಿಕೆ ಹಾಕಿಸಿದರೆ ಆರೋಗ್ಯ ಕಾಪಾಡಿಕೊಳ್ಳುವುದು ಅಲ್ಲದೇ ಹಾಲಿನ ಗುಣಮಟ್ಟ ಹೆಚ್ಚಳವಾಗುತ್ತದೆ. ಹಸುಗಳ ಆರೋಗ್ಯವು ಪ್ರಮುಖವಾಗಿರುತ್ತದೆ’ ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮನುಕುಮಾರ್, ನಿರ್ದೇಶಕರಾದ ಮಹೇಶ್, ಶಿವರಾಮು, ಮಾಜಿ ಅಧ್ಯಕ್ಷ ಆನಂದ್, ಪಶುವೈದ್ಯಾಧಿಕಾರಿ ಡಾ.ಶರತ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-40-1081164833</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ‘ರಾಸುಗಳಿಗೆ ವಿಮೆ ಮಾಡಿಸುವುದರಿಂದ ರೈತರಿಗೆ ಅನುಕೂಲವಾಗುತ್ತದೆ. ಇದರ ಬಗ್ಗೆ ಅಧಿಕಾರಿಗಳು ಗಮನ ಹರಿಸಿ ಜಾಗೃತಿ ಮೂಡಿಸಬೇಕು’ ಎಂದು ಶಾಸಕ ಪಿ.ರವಿಕುಮಾರ್ ಸಲಹೆ ನೀಡಿದರು.</p>.<p>ತಾಲ್ಲೂಕಿನ ದೊಡ್ಡಬಾಣಸವಾಡಿ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಜಿಲ್ಲಾ ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತಿದ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ 9ನೇ ಸುತ್ತಿನ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ರಾಸುಗಳ ಪ್ರಾಣಕ್ಕೆ ತೊಂದರೆಯಾಗಿ ಸಾವನ್ನಪ್ಪಿದರೆ ಅಂತಹ ಸಂದರ್ಭದಲ್ಲಿ ವಿಮೆ ಮಾಡಿಸಿದ್ದರೆ ನಷ್ಟದ ಪರಿಹಾರ ತುಂಬಿಕೊಳ್ಳಲು ಸಾಧ್ಯವಾಗುತ್ತದೆ. ಇಲ್ಲವಾದರೆ ರೈತರ ಸಂಕಷ್ಟಕ್ಕೆ ಒಳಗಾಗುತ್ತಾರೆ. ರೈತರು ತಪ್ಪದೆ ರಾಸುಗಳಿಗೆ ವಿಮೆ ಮಾಡಿಸುವ ಮೂಲಕ ಜಾಗೃತರಾಗಬೇಕು’ ಎಂದು ತಿಳಿಸಿದರು.</p>.<p>ಮನ್ಮುಲ್ ಅಧ್ಯಕ್ಷ ಯು.ಸಿ.ಶಿವಕುಮಾರ್ ಮಾತನಾಡಿ, ‘ಲಕ್ಷ ಲಕ್ಷ ಕೊಟ್ಟು ಹಸುಗಳನ್ನು ಖರೀದಿ ಮಾಡಿರುವ ರೈತರಿಗೆ ನಷ್ಟ ಆಗಬಾರದೆಂಬ ದೃಷ್ಟಿಯಿಂದಲೇ ರಾಸುಗಳಿಗೆ ವಿಮೆ ಮಾಡಿಸಿಕೊಳ್ಳುವುದು ಸೂಕ್ತವಾಗಿದೆ. ರೈತರು ಕಷ್ಟದಿಂದ ಪಾರಾಗುವ ಕಡೆ ಹೆಚ್ಚು ಗಮನ ಹರಿಸಬೇಕು. ಸರ್ಕಾರದಿಂದ ಸಿಗುವ ಯೋಜನೆಗಳನ್ನು ಬಳಸಿಕೊಳ್ಳಬೇಕು’ ಎಂದರು.</p>.<p>ಪಶುವೈದ್ಯಾಧಿಕಾರಿ ಡಾ.ಸುರೇಶ್ ಮಾತನಾಡಿ, ‘ಹಸುಗಳಿಗೆ ಕಾಲು ಬಾಯಿ ಜ್ವರದ ಲಸಿಕೆ ಹಾಕಿಸಿದರೆ ಆರೋಗ್ಯ ಕಾಪಾಡಿಕೊಳ್ಳುವುದು ಅಲ್ಲದೇ ಹಾಲಿನ ಗುಣಮಟ್ಟ ಹೆಚ್ಚಳವಾಗುತ್ತದೆ. ಹಸುಗಳ ಆರೋಗ್ಯವು ಪ್ರಮುಖವಾಗಿರುತ್ತದೆ’ ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮನುಕುಮಾರ್, ನಿರ್ದೇಶಕರಾದ ಮಹೇಶ್, ಶಿವರಾಮು, ಮಾಜಿ ಅಧ್ಯಕ್ಷ ಆನಂದ್, ಪಶುವೈದ್ಯಾಧಿಕಾರಿ ಡಾ.ಶರತ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-40-1081164833</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>