<p><strong>ಮಂಡ್ಯ:</strong> ಭ್ರಷ್ಟಾಚಾರ ಮತ್ತು ಕರ್ತವ್ಯ ಲೋಪ ಆರೋಪದ ಮೇರೆಗೆ ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವೆಂಕಟೇಶ್ ಅವರನ್ನು ಅಮಾನತುಗೊಳಿಸಿ, ಸರ್ಕಾರ ಆದೇಶ ಹೊರಡಿಸಿದೆ. </p><p>ಮಳವಳ್ಳಿ ಉಪವಿಭಾಗದ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದಲ್ಲಿ ಸಹಾಯಕ ಎಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುವ ಸಂದರ್ಭ ವೆಂಕಟೇಶ್ ವಿರುದ್ಧ 2025ರ ಸೆಪ್ಟೆಂಬರ್ 24ರಂದು ಮಂಡ್ಯ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. </p><p>ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಹಲಗೂರು ಗ್ರಾ.ಪಂ. ಸದಸ್ಯರಾಗಿದ್ದ ಕೆ. ಸುರೇಂದ್ರ ದೂರು ನೀಡಿದ್ದರು. ‘ನಕಲಿ ದಾಖಲೆಗಳನ್ನು ಸೃಷ್ಟಿಸಿ, ಖಾಸಗಿ ವ್ಯಕ್ತಿಗಳ ಅಕೌಂಟ್ಗೆ ಚೆಕ್ಗಳನ್ನು ನೀಡಿ, ಸುಮಾರು ₹60 ಲಕ್ಷ ದುರುಪಯೋಗ ಮಾಡಲಾಗಿದೆ. 15ನೇ ಹಣಕಾಸು ಯೋಜನೆಯಡಿ 2023–24ನೇ ಸಾಲಿನಲ್ಲಿ ಸರ್ಕಾರದ ವಿವಿಧ ಯೋಜನೆಗಳಡಿ ಬಿಡುಗಡೆಯಾದ ಅನುದಾನದಲ್ಲಿ ನಿಯಮಬಾಹಿರವಾಗಿ ಅಕ್ರಮ ಬಿಲ್ ಪಾವತಿ ಮಾಡಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಲಾಗಿದೆ’ ಎಂದು ದೂರು ದಾಖಲಾಗಿತ್ತು. </p><p>‘ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ಇಲಾಖೆ ವಿಚಾರಣೆ ಬಾಕಿ ಇಟ್ಟು, ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಚೇತನ ಎಂ. ಆದೇಶದಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಭ್ರಷ್ಟಾಚಾರ ಮತ್ತು ಕರ್ತವ್ಯ ಲೋಪ ಆರೋಪದ ಮೇರೆಗೆ ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವೆಂಕಟೇಶ್ ಅವರನ್ನು ಅಮಾನತುಗೊಳಿಸಿ, ಸರ್ಕಾರ ಆದೇಶ ಹೊರಡಿಸಿದೆ. </p><p>ಮಳವಳ್ಳಿ ಉಪವಿಭಾಗದ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದಲ್ಲಿ ಸಹಾಯಕ ಎಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುವ ಸಂದರ್ಭ ವೆಂಕಟೇಶ್ ವಿರುದ್ಧ 2025ರ ಸೆಪ್ಟೆಂಬರ್ 24ರಂದು ಮಂಡ್ಯ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. </p><p>ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಹಲಗೂರು ಗ್ರಾ.ಪಂ. ಸದಸ್ಯರಾಗಿದ್ದ ಕೆ. ಸುರೇಂದ್ರ ದೂರು ನೀಡಿದ್ದರು. ‘ನಕಲಿ ದಾಖಲೆಗಳನ್ನು ಸೃಷ್ಟಿಸಿ, ಖಾಸಗಿ ವ್ಯಕ್ತಿಗಳ ಅಕೌಂಟ್ಗೆ ಚೆಕ್ಗಳನ್ನು ನೀಡಿ, ಸುಮಾರು ₹60 ಲಕ್ಷ ದುರುಪಯೋಗ ಮಾಡಲಾಗಿದೆ. 15ನೇ ಹಣಕಾಸು ಯೋಜನೆಯಡಿ 2023–24ನೇ ಸಾಲಿನಲ್ಲಿ ಸರ್ಕಾರದ ವಿವಿಧ ಯೋಜನೆಗಳಡಿ ಬಿಡುಗಡೆಯಾದ ಅನುದಾನದಲ್ಲಿ ನಿಯಮಬಾಹಿರವಾಗಿ ಅಕ್ರಮ ಬಿಲ್ ಪಾವತಿ ಮಾಡಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಲಾಗಿದೆ’ ಎಂದು ದೂರು ದಾಖಲಾಗಿತ್ತು. </p><p>‘ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ಇಲಾಖೆ ವಿಚಾರಣೆ ಬಾಕಿ ಇಟ್ಟು, ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಚೇತನ ಎಂ. ಆದೇಶದಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>