<p>ಮಂಡ್ಯ: ‘ಸಾಮಾಜಿಕ ಸಮಾನತೆ ಸಾರಿದ ಬಸವಣ್ಣ ಅವರ ಅಶ್ವಾರೂಢ ಸಮೇತ ಪುತ್ಥಳಿಯನ್ನು ಜಿಲ್ಲಾಧಿಕಾರಿ ಕಚೇರಿ ಎದುರು ನಿರ್ಮಿಸಬೇಕು’ ಎಂದು ವೀರಶೈವ ಲಿಂಗಾಯತ ವೇದಿಕೆ ಅಧ್ಯಕ್ಷ ಸುಂಡಹಳ್ಳಿ ಸೋಮಶೇಖರ್ ಒತ್ತಾಯಿಸಿದರು.</p>.<p>‘ಬಸವ ಜಯಂತಿಯಂದು ಜಿಲ್ಲೆಯ ಎಲ್ಲಾ ಮಠಾಧೀಶರನ್ನು ಆಹ್ವಾನಿಸಬೇಕು. ಜೊತೆಗೆ ವಿವಿಧ ಕಾಯಕ ಮಾಡುವ ಎಲ್ಲಾ ಸಮಾಜದ ಮುಖಂಡರನ್ನು ಗುರುತಿಸಿ ಜಿಲ್ಲಾಡಳಿತ ‘ಬಸವಶ್ರೀ’ ಪ್ರಶಸ್ತಿ ನೀಡಿ ಗೌರವಿಸಬೇಕು’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು.</p>.<p>‘ಬಸವಣ್ಣ ಅವರ ತತ್ವಗಳು ಇಂದಿನ ಸಮಾಜಕ್ಕೆ ಅವಶ್ಯಕವಾಗಿದ್ದು, ಜಿಲ್ಲಾಡಳಿತ, ಮಂಡ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ನಡೆಯುತ್ತಿರುವ ಬಸವೇಶ್ವರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸೋಣ’ ಎಂದರು.</p>.<p>ವೇದಿಕೆಯ ಎಂ.ಎಸ್.ಮಂಜುನಾಥ್ ಮಾತನಾಡಿ, ‘ಬಸವಣ್ಣನವರ ವಚನಗಳು ಕೇವಲ ಭಾಷಣದಲ್ಲಿ ಇರಬಾರದು, ನರೇಂದ್ರ ಮೋದಿ ಅವರು ಸಂಸತ್ ಎದುರು ಬಸವಣ್ಣನವರ ಪುತ್ಥಳಿ ಸ್ಥಾಪಿಸಬೇಕು. ಎಲ್ಲಾ ಭಾಷೆಗಳಲ್ಲಿಯೂ ವಚನಗಳನ್ನು ಪ್ರಚುರ ಪಡಿಸಲು ಕೇಂದ್ರ ಕ್ರಮ ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ಮುಖಂಡರಾದ ಶಿವರುದ್ರಪ್ಪ, ಶಿವಲಿಂಗಯ್ಯ, ಕೃಷ್ಣರಾಜೇ ಅರಸ್, ಮಲ್ಲಿಕಾರ್ಜುನಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-40-1157292012</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ‘ಸಾಮಾಜಿಕ ಸಮಾನತೆ ಸಾರಿದ ಬಸವಣ್ಣ ಅವರ ಅಶ್ವಾರೂಢ ಸಮೇತ ಪುತ್ಥಳಿಯನ್ನು ಜಿಲ್ಲಾಧಿಕಾರಿ ಕಚೇರಿ ಎದುರು ನಿರ್ಮಿಸಬೇಕು’ ಎಂದು ವೀರಶೈವ ಲಿಂಗಾಯತ ವೇದಿಕೆ ಅಧ್ಯಕ್ಷ ಸುಂಡಹಳ್ಳಿ ಸೋಮಶೇಖರ್ ಒತ್ತಾಯಿಸಿದರು.</p>.<p>‘ಬಸವ ಜಯಂತಿಯಂದು ಜಿಲ್ಲೆಯ ಎಲ್ಲಾ ಮಠಾಧೀಶರನ್ನು ಆಹ್ವಾನಿಸಬೇಕು. ಜೊತೆಗೆ ವಿವಿಧ ಕಾಯಕ ಮಾಡುವ ಎಲ್ಲಾ ಸಮಾಜದ ಮುಖಂಡರನ್ನು ಗುರುತಿಸಿ ಜಿಲ್ಲಾಡಳಿತ ‘ಬಸವಶ್ರೀ’ ಪ್ರಶಸ್ತಿ ನೀಡಿ ಗೌರವಿಸಬೇಕು’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು.</p>.<p>‘ಬಸವಣ್ಣ ಅವರ ತತ್ವಗಳು ಇಂದಿನ ಸಮಾಜಕ್ಕೆ ಅವಶ್ಯಕವಾಗಿದ್ದು, ಜಿಲ್ಲಾಡಳಿತ, ಮಂಡ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ನಡೆಯುತ್ತಿರುವ ಬಸವೇಶ್ವರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸೋಣ’ ಎಂದರು.</p>.<p>ವೇದಿಕೆಯ ಎಂ.ಎಸ್.ಮಂಜುನಾಥ್ ಮಾತನಾಡಿ, ‘ಬಸವಣ್ಣನವರ ವಚನಗಳು ಕೇವಲ ಭಾಷಣದಲ್ಲಿ ಇರಬಾರದು, ನರೇಂದ್ರ ಮೋದಿ ಅವರು ಸಂಸತ್ ಎದುರು ಬಸವಣ್ಣನವರ ಪುತ್ಥಳಿ ಸ್ಥಾಪಿಸಬೇಕು. ಎಲ್ಲಾ ಭಾಷೆಗಳಲ್ಲಿಯೂ ವಚನಗಳನ್ನು ಪ್ರಚುರ ಪಡಿಸಲು ಕೇಂದ್ರ ಕ್ರಮ ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ಮುಖಂಡರಾದ ಶಿವರುದ್ರಪ್ಪ, ಶಿವಲಿಂಗಯ್ಯ, ಕೃಷ್ಣರಾಜೇ ಅರಸ್, ಮಲ್ಲಿಕಾರ್ಜುನಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-40-1157292012</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>