<p>ಭಾರತೀನಗರ: ‘ಶಿಕ್ಷಣ ಸೋಮಾರಿಗಳಿಗೆ ಒಲಿಯುವ ಸ್ವತ್ತಲ್ಲ. ಶಿಕ್ಷಣಕ್ಕೆ ಶ್ರಮವೆಂಬ ಬಂಡವಾಳ ಹಾಕಿದಾಗ ಮಾತ್ರ ಅದನ್ನು ಒಲಿಸಿಕೊಳ್ಳಬಹುದು’ ಎಂದು ನಿವೃತ್ತ ಮುಖ್ಯ ಶಿಕ್ಷಕ ಎಂ.ಮಾಯಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಇಲ್ಲಿಯ ಭಾರತೀ ಕಾಲೇಜು ಆವರಣದ ಕುವೆಂಪು ಸಭಾಂಗಣದಲ್ಲಿ ಭಾರತೀಪದವಿ ಪೂರ್ವ ಕಾಲೇಜು ವತಿಯಿಂದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗಿದ್ದ ಅಭಿವಿನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪಿಯು ಕಾಲೇಜು ಆಡಳಿತಾಧಿಕಾರಿ ಎಸ್.ಜವರೇಗೌಡಗೌಡ ಮಾತನಾಡಿ, ‘ಇಂದು ದೇಶ–ವಿದೇಶಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸುವವರು ಪಿಯುಸಿ ಎಂಬ ಪರ್ವಕಾಲವನ್ನು ದಾಟಿ ಸಾಧನೆಗೈದವರು ಮಾತ್ರ. ಜೀವನದಲ್ಲಿ ಪಿಯುಸಿ ಎಂಬುವುದು ಒಂದು ದೊಡ್ಡ ತಿರುವು ನೀಡಲಿದೆ. ಈ ಹಂತದಲ್ಲಿ ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಶೈಕ್ಷಣಿಕ ಹೆಜ್ಜೆ ಇಡಬೇಕು’ ಎಂದು ಸಲಹೆ ನೀಡಿದರು. ನಿವೃತ್ತ ಮುಖ್ಯ ಶಿಕ್ಷಕ ಎಂ.ಮಾಯಪ್ಪ ಅವರನ್ನು ಭಾರತೀ ಪದವಿ ಪೂರ್ವ ಕಾಲೇಜು ವತಿಯಿಂದ ಅಭಿನಂದಿಸಲಾಯಿತು. ಪ್ರಾಂಶುಪಾಲೆ ಪಲ್ಲವಿ ಮಾತನಾಡಿದರು.</p>.<p>ಉಪನ್ಯಾಸಕ ನಾಗಮಾದಯ್ಯ, ದೈಹಿಕ ಶಿಕ್ಷಣ ನಿರ್ದೇಶಕಿ ಶೋಭಾ, ಉಪನ್ಯಾಸಕಿ ಕಾವ್ಯ, ಗ್ರಂಥಪಾಲಕ ಎ.ಎಸ್.ಸಂಜೀವ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-40-60039456</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಾರತೀನಗರ: ‘ಶಿಕ್ಷಣ ಸೋಮಾರಿಗಳಿಗೆ ಒಲಿಯುವ ಸ್ವತ್ತಲ್ಲ. ಶಿಕ್ಷಣಕ್ಕೆ ಶ್ರಮವೆಂಬ ಬಂಡವಾಳ ಹಾಕಿದಾಗ ಮಾತ್ರ ಅದನ್ನು ಒಲಿಸಿಕೊಳ್ಳಬಹುದು’ ಎಂದು ನಿವೃತ್ತ ಮುಖ್ಯ ಶಿಕ್ಷಕ ಎಂ.ಮಾಯಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಇಲ್ಲಿಯ ಭಾರತೀ ಕಾಲೇಜು ಆವರಣದ ಕುವೆಂಪು ಸಭಾಂಗಣದಲ್ಲಿ ಭಾರತೀಪದವಿ ಪೂರ್ವ ಕಾಲೇಜು ವತಿಯಿಂದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗಿದ್ದ ಅಭಿವಿನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪಿಯು ಕಾಲೇಜು ಆಡಳಿತಾಧಿಕಾರಿ ಎಸ್.ಜವರೇಗೌಡಗೌಡ ಮಾತನಾಡಿ, ‘ಇಂದು ದೇಶ–ವಿದೇಶಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸುವವರು ಪಿಯುಸಿ ಎಂಬ ಪರ್ವಕಾಲವನ್ನು ದಾಟಿ ಸಾಧನೆಗೈದವರು ಮಾತ್ರ. ಜೀವನದಲ್ಲಿ ಪಿಯುಸಿ ಎಂಬುವುದು ಒಂದು ದೊಡ್ಡ ತಿರುವು ನೀಡಲಿದೆ. ಈ ಹಂತದಲ್ಲಿ ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಶೈಕ್ಷಣಿಕ ಹೆಜ್ಜೆ ಇಡಬೇಕು’ ಎಂದು ಸಲಹೆ ನೀಡಿದರು. ನಿವೃತ್ತ ಮುಖ್ಯ ಶಿಕ್ಷಕ ಎಂ.ಮಾಯಪ್ಪ ಅವರನ್ನು ಭಾರತೀ ಪದವಿ ಪೂರ್ವ ಕಾಲೇಜು ವತಿಯಿಂದ ಅಭಿನಂದಿಸಲಾಯಿತು. ಪ್ರಾಂಶುಪಾಲೆ ಪಲ್ಲವಿ ಮಾತನಾಡಿದರು.</p>.<p>ಉಪನ್ಯಾಸಕ ನಾಗಮಾದಯ್ಯ, ದೈಹಿಕ ಶಿಕ್ಷಣ ನಿರ್ದೇಶಕಿ ಶೋಭಾ, ಉಪನ್ಯಾಸಕಿ ಕಾವ್ಯ, ಗ್ರಂಥಪಾಲಕ ಎ.ಎಸ್.ಸಂಜೀವ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-40-60039456</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>