<p><strong>ಮಂಡ್ಯ</strong>: ತುಮಕೂರಿನಲ್ಲಿ ನಡೆದ ರಾಜ್ಯ ಸರ್ಕಾರದ ಸಾಧನಾ ಸಮಾವೇಶ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಅಣಕು ವಿಜಯೋತ್ಸವದ ಪ್ರತಿಭಟನೆ ನಡೆಸಿದರು.</p>.<p>ನಗರದ ಜೆ.ಸಿ. ವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ಅವರ ಭಾವಚಿತ್ರದ ಮಾಸ್ಕ್ ಮುಖಕ್ಕೆ ಧರಿಸಿಕೊಂಡು ತಮಟೆ ಬಾರಿಸುತ್ತಾ, ತಮಟೆ ಸದ್ದಿಗೆ ಹೆಜ್ಜೆ ಹಾಕುವ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.</p>.<p>ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ. ಮಂಜುನಾಥ್ ಮಾತನಾಡಿ, ‘ಹಗರಣಗಳ ಸರಮಾಲೆ, ಆಡಳಿತಾತ್ಮಕ ವೈಫಲ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಆರ್ಥಿಕ ಸಂಕಷ್ಟ ಸೇರಿದಂತೆ ವಿವಿಧ ಸಂಕಟಗಳಿಂದ ಬಳಲುತ್ತಿರುವ ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರ ಯಾವ ಪುರುಷಾರ್ಥಕ್ಕಾಗಿ ಸಾಧನಾ ಸಮಾವೇಶ ಮಾಡುತ್ತಿದೆ’ ಎಂದು ಟೀಕಿಸಿದರು.</p>.<p>‘ಆಡಳಿತಾತ್ಮಕ ವೈಫಲ್ಯಗಳ ಆರೋಪಗಳಿದ್ದು, ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ. ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಗಳು ನಡೆದಿವೆ. ಪ್ರತ್ಯೇಕತೆಯ ಕೂಗು ಮತ್ತು ಪಾಕಿಸ್ತಾನ ಪರ ಘೋಷಣೆಗಳು ವಿಧಾನಸಭೆಯಲ್ಲಿ ಮೊಳಗಿದಾಗ ಸರ್ಕಾರ ಕಠಿಣ ಕ್ರಮ ಕೈಗೊಂಡಿಲ್ಲ’ ಎಂದು ಆರೋಪಿಸಿದರು.</p>.<p>ಬಿಜೆಪಿ ನಗರ ಘಟಕದ ಅಧ್ಯಕ್ಷ ಪ್ರಸನ್ನಕುಮಾರ್, ಮುಖಂಡರಾದ ಆನಂದ್, ಗೊರವಾಲೆ ಶಿವಣ್ಣ, ಶಿವಕುಮಾರ್ ಆರಾಧ್ಯ, ನಾಗರಾಜು, ಶಿವಲಿಂಗಯ್ಯ, ಮಾದರಾಜೇ ಅರಸು, ಸಂತೋಷ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-40-256907604</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ತುಮಕೂರಿನಲ್ಲಿ ನಡೆದ ರಾಜ್ಯ ಸರ್ಕಾರದ ಸಾಧನಾ ಸಮಾವೇಶ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಅಣಕು ವಿಜಯೋತ್ಸವದ ಪ್ರತಿಭಟನೆ ನಡೆಸಿದರು.</p>.<p>ನಗರದ ಜೆ.ಸಿ. ವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ಅವರ ಭಾವಚಿತ್ರದ ಮಾಸ್ಕ್ ಮುಖಕ್ಕೆ ಧರಿಸಿಕೊಂಡು ತಮಟೆ ಬಾರಿಸುತ್ತಾ, ತಮಟೆ ಸದ್ದಿಗೆ ಹೆಜ್ಜೆ ಹಾಕುವ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.</p>.<p>ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ. ಮಂಜುನಾಥ್ ಮಾತನಾಡಿ, ‘ಹಗರಣಗಳ ಸರಮಾಲೆ, ಆಡಳಿತಾತ್ಮಕ ವೈಫಲ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಆರ್ಥಿಕ ಸಂಕಷ್ಟ ಸೇರಿದಂತೆ ವಿವಿಧ ಸಂಕಟಗಳಿಂದ ಬಳಲುತ್ತಿರುವ ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರ ಯಾವ ಪುರುಷಾರ್ಥಕ್ಕಾಗಿ ಸಾಧನಾ ಸಮಾವೇಶ ಮಾಡುತ್ತಿದೆ’ ಎಂದು ಟೀಕಿಸಿದರು.</p>.<p>‘ಆಡಳಿತಾತ್ಮಕ ವೈಫಲ್ಯಗಳ ಆರೋಪಗಳಿದ್ದು, ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ. ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಗಳು ನಡೆದಿವೆ. ಪ್ರತ್ಯೇಕತೆಯ ಕೂಗು ಮತ್ತು ಪಾಕಿಸ್ತಾನ ಪರ ಘೋಷಣೆಗಳು ವಿಧಾನಸಭೆಯಲ್ಲಿ ಮೊಳಗಿದಾಗ ಸರ್ಕಾರ ಕಠಿಣ ಕ್ರಮ ಕೈಗೊಂಡಿಲ್ಲ’ ಎಂದು ಆರೋಪಿಸಿದರು.</p>.<p>ಬಿಜೆಪಿ ನಗರ ಘಟಕದ ಅಧ್ಯಕ್ಷ ಪ್ರಸನ್ನಕುಮಾರ್, ಮುಖಂಡರಾದ ಆನಂದ್, ಗೊರವಾಲೆ ಶಿವಣ್ಣ, ಶಿವಕುಮಾರ್ ಆರಾಧ್ಯ, ನಾಗರಾಜು, ಶಿವಲಿಂಗಯ್ಯ, ಮಾದರಾಜೇ ಅರಸು, ಸಂತೋಷ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-40-256907604</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>