<p>ಮಂಡ್ಯ: ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಮೂವರು ಕಿಡಿಗೇಡಿಗಳು ಬಸ್ಸಿನ ಗಾಜಿಗೆ ಕಲ್ಲು ಒಡೆದು ಭಾನುವಾರ ಪರಾರಿಯಾಗಿದ್ದಾರೆ.</p>.<p>ನಗರದ ಕೆಎಸ್ಆರ್ಟಿಸಿ ನಿಲ್ದಾಣದಿಂದ ಮದ್ದೂರು ಕಡೆಗೆ ಹೊರಟಿದ್ದ ಬಸ್ ಫ್ಯಾಕ್ಟರಿ ವೃತ್ತದ ಬಳಿ ಸಮೀಪ ಇರುವ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಹೊರಟಿದೆ.</p>.<p>ಫ್ಯಾಕ್ಟರಿ ವೃತ್ತದಲ್ಲಿ ನಿಲುಗಡೆ ಇಲ್ಲದಿದ್ದರೂ ದ್ವಿಚಕ್ರ ವಾಹನದಲ್ಲಿ ನಿಂತಿದ್ದ ಮೂವರು ವ್ಯಕ್ತಿಗಳು ಬಸ್ ನಿಲ್ಲಿಸಲಿಲ್ಲ ಎಂದು ಬಸ್ ಹಿಂಬದಿ ಗ್ಲಾಸ್ಗೆ ಕಲ್ಲು ತೂರಿದ್ದಾರೆ. ರಭಸಕ್ಕೆ ಗಾಜು ಪುಡಿಯಾಗಿದೆ.</p>.<p>ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಪ್ರಯಾಣಿಕರು ಚೀರಿದ್ದಾರೆ, ತಕ್ಷಣ ಎಚ್ಚೆತ್ತ ಚಾಲಕ ಮಧು ಬೆಸಗರಹಳ್ಳಿ ಅವರು ಬಸ್ ಅನ್ನು ರಸ್ತೆ ಬದಿ ನಿಲ್ಲಿಸಿ, ಸಮೀಪದಲ್ಲಿದ್ದ ಟ್ರಾಫಿಕ್ ಪೊಲೀಸ್ ಜೊತೆ ಕಿಡಿಗೇಡಿಗಳನ್ನು ಹಿಂಬಾಲಿಸಿದ್ದಾರೆ ಅಷ್ಟರಲ್ಲಿ ಅವರು ಕಣ್ಮರೆಯಾಗಿದ್ದಾರೆ.</p>.<p>ಘಟನೆಯಿಂದ ಹಿಂಬದಿ ಕುಳಿತಿದ್ದ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ. ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-14-160275526</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಮೂವರು ಕಿಡಿಗೇಡಿಗಳು ಬಸ್ಸಿನ ಗಾಜಿಗೆ ಕಲ್ಲು ಒಡೆದು ಭಾನುವಾರ ಪರಾರಿಯಾಗಿದ್ದಾರೆ.</p>.<p>ನಗರದ ಕೆಎಸ್ಆರ್ಟಿಸಿ ನಿಲ್ದಾಣದಿಂದ ಮದ್ದೂರು ಕಡೆಗೆ ಹೊರಟಿದ್ದ ಬಸ್ ಫ್ಯಾಕ್ಟರಿ ವೃತ್ತದ ಬಳಿ ಸಮೀಪ ಇರುವ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಹೊರಟಿದೆ.</p>.<p>ಫ್ಯಾಕ್ಟರಿ ವೃತ್ತದಲ್ಲಿ ನಿಲುಗಡೆ ಇಲ್ಲದಿದ್ದರೂ ದ್ವಿಚಕ್ರ ವಾಹನದಲ್ಲಿ ನಿಂತಿದ್ದ ಮೂವರು ವ್ಯಕ್ತಿಗಳು ಬಸ್ ನಿಲ್ಲಿಸಲಿಲ್ಲ ಎಂದು ಬಸ್ ಹಿಂಬದಿ ಗ್ಲಾಸ್ಗೆ ಕಲ್ಲು ತೂರಿದ್ದಾರೆ. ರಭಸಕ್ಕೆ ಗಾಜು ಪುಡಿಯಾಗಿದೆ.</p>.<p>ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಪ್ರಯಾಣಿಕರು ಚೀರಿದ್ದಾರೆ, ತಕ್ಷಣ ಎಚ್ಚೆತ್ತ ಚಾಲಕ ಮಧು ಬೆಸಗರಹಳ್ಳಿ ಅವರು ಬಸ್ ಅನ್ನು ರಸ್ತೆ ಬದಿ ನಿಲ್ಲಿಸಿ, ಸಮೀಪದಲ್ಲಿದ್ದ ಟ್ರಾಫಿಕ್ ಪೊಲೀಸ್ ಜೊತೆ ಕಿಡಿಗೇಡಿಗಳನ್ನು ಹಿಂಬಾಲಿಸಿದ್ದಾರೆ ಅಷ್ಟರಲ್ಲಿ ಅವರು ಕಣ್ಮರೆಯಾಗಿದ್ದಾರೆ.</p>.<p>ಘಟನೆಯಿಂದ ಹಿಂಬದಿ ಕುಳಿತಿದ್ದ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ. ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-14-160275526</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>