<p><strong>ಮಂಡ್ಯ:</strong> ‘ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ನೀಡಿರುವ ಅನುದಾನದ ಬಗ್ಗೆ ಲೇವಡಿ ಮಾಡಿದ್ದಾರೆ. 2018ರಲ್ಲಿ ಅವರು ಮುಖ್ಯಮಂತ್ರಿಯಾಗಿದ್ದಾಗ ಜಿಲ್ಲೆಗೆ ನೀಡಿದ ₹8 ಸಾವಿರ ಕೋಟಿಯ ದಾಖಲೆ ಬಿಡುಗಡೆ ಮಾಡಲಿ’ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ಮೈಷುಗರ್ ಅಧ್ಯಕ್ಷ ಸಿ.ಡಿ. ಗಂಗಾಧರ್ ಆಗ್ರಹಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಿಲ್ಲೆಯ ಸಚಿವರು ಹಾಗೂ ಶಾಸಕರು ₹10 ಸಾವಿರ ಕೋಟಿ ಅಭಿವೃದ್ಧಿ ಕಾರ್ಯಗಳನ್ನು ತಂದಿದ್ದಾರೆ. ಒಂದು ವಾರದೊಳಗೆ ಕ್ಷೇತ್ರವಾರು ಅನುದಾನದ ಮಾಹಿತಿಯನ್ನು ದಾಖಲೆ ಸಹಿತ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು. </p>.<p>ಎಚ್.ಡಿ.ಕುಮಾರಸ್ವಾಮಿ ಅವರು ಜಿಲ್ಲೆಯ ಸಂಸದರಾಗಿ, ಕೇಂದ್ರ ಸಚಿವರಾಗಿ ಪ್ರದೇಶಾಭಿವೃದ್ಧಿ ಅನುದಾನ ಹೊರತುಪಡಿಸಿ ಇಲ್ಲಿವರೆಗೂ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ತಂದಿಲ್ಲ. ಕೈಗಾರಿಕೆ ಸ್ಥಾಪನೆ ಮಾಡುವುದನ್ನು ಬಿಟ್ಟು ಕೇವಲ ಆರೋಪ ಮಾಡುವುದಕ್ಕೆ ಸೀಮಿತರಾಗಿದ್ದಾರೆ ಎಂದು ದೂರಿದರು. </p>.<p>ಇತ್ತೀಚೆಗೆ ಕೆ.ಆರ್.ಪೇಟೆಗೆ ಆಗಮಿಸಿದ್ದ ನಿಖಿಲ್ ಕುಮಾರಸ್ವಾಮಿ ಅವರು ಸಚಿವ ಚಲುವರಾಯಸ್ವಾಮಿ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. 1999ರಲ್ಲಿ ಚಲುವರಾಯಸ್ವಾಮಿ ಗೆದ್ದು ಜೆಡಿಎಸ್ ಪಕ್ಷ ಕಟ್ಟಿರುವುದನ್ನು ನಿಖಿಲ್ ಮರೆತಿರುವಂತಿದೆ. ರಾಜಕೀಯ ಪ್ರಬುದ್ಧತೆಯನ್ನು ನಿಖಿಲ್ ಬೆಳೆಸಿಕೊಳ್ಳಲಿ ಎಂದು ಹೇಳಿದರು.</p>.<h3>ವಾರದಲ್ಲಿ ಕಬ್ಬು ಬಾಕಿ ಪಾವತಿ:</h3>.<p>ಮೈಷುಗರ್ ಅಕ್ರಮ ಕುರಿತ ಪ್ರಶ್ನೆಗೆ ಉತ್ತರಿಸಿ, ‘ನನ್ನ ಅವಧಿಯ ಎರಡು ವರ್ಷದಲ್ಲಿ ಯಾವುದೇ ಆರ್ಥಿಕ ಲೋಪವಾಗಿಲ್ಲ. ಸಕ್ಕರೆಯನ್ನು ಸ್ಪರ್ಧಾತ್ಮಕ ದರದಲ್ಲಿ ಮತ್ತು ಪಾರದರ್ಶಕ ಆಡಳಿತ ನೀಡಿರುವ ಬಗ್ಗೆ ತನಿಖಾ ತಂಡಕ್ಕೆ ಪೂರ್ಣ ಮಾಹಿತಿ ಒದಗಿಸಿದ್ದೇವೆ. ಕಬ್ಬು ಪೂರೈಸಿದ ರೈತರಿಗೆ ಬಾಕಿ ₹2.5 ಕೋಟಿಯನ್ನು ಇನ್ನೊಂದು ವಾರದಲ್ಲಿ ನೀಡುತ್ತೇವೆ’ ಎಂದು ತಿಳಿಸಿದರು. </p>.<p>ಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಚಿನಕುರಳಿ ರಮೇಶ್, ರಾಮಕೃಷ್ಣ, ಮಹದೇವು, ವಿಜಯ್ಕುಮಾರ್, ಸಿ.ಎಂ.ದ್ಯಾವಪ್ಪ ಇತರರಿದ್ದರು.</p>.<p> <strong>‘ಶಿವರಾಮೇಗೌಡ ವಿರುದ್ಧ ಕ್ರಮಕ್ಕೆ ಪತ್ರ’</strong> </p><p>‘ಕೆಪಿಸಿಸಿ ವಕ್ತಾರ ಎಲ್.ಆರ್.ಶಿವರಾಮೇಗೌಡ ಅವರು ದಿವಂಗತ ಜಿ.ಮಾದೇಗೌಡ ದಿವಂಗತ ಅಂಬರೀಷ್ ಹಾಗೂ ಸಚಿವ ಚಲುವರಾಯಸ್ವಾಮಿ ವಿರುದ್ಧ ಅಸಂವಿಧಾನಿಕ ಪದಗಳನ್ನು ಬಳಸಿರುವ ಆಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದು ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಉಂಟು ಮಾಡಿದೆ. ಈ ಬಗ್ಗೆ ತುರ್ತಾಗಿ ಕ್ರಮ ಕೈಗೊಳ್ಳಬೇಕು’ ಎಂದು ಸಿ.ಡಿ. ಗಂಗಾಧರ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಅವರಿಗೆ ಪತ್ರ ಬರೆದಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ‘ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ನೀಡಿರುವ ಅನುದಾನದ ಬಗ್ಗೆ ಲೇವಡಿ ಮಾಡಿದ್ದಾರೆ. 2018ರಲ್ಲಿ ಅವರು ಮುಖ್ಯಮಂತ್ರಿಯಾಗಿದ್ದಾಗ ಜಿಲ್ಲೆಗೆ ನೀಡಿದ ₹8 ಸಾವಿರ ಕೋಟಿಯ ದಾಖಲೆ ಬಿಡುಗಡೆ ಮಾಡಲಿ’ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ಮೈಷುಗರ್ ಅಧ್ಯಕ್ಷ ಸಿ.ಡಿ. ಗಂಗಾಧರ್ ಆಗ್ರಹಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಿಲ್ಲೆಯ ಸಚಿವರು ಹಾಗೂ ಶಾಸಕರು ₹10 ಸಾವಿರ ಕೋಟಿ ಅಭಿವೃದ್ಧಿ ಕಾರ್ಯಗಳನ್ನು ತಂದಿದ್ದಾರೆ. ಒಂದು ವಾರದೊಳಗೆ ಕ್ಷೇತ್ರವಾರು ಅನುದಾನದ ಮಾಹಿತಿಯನ್ನು ದಾಖಲೆ ಸಹಿತ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು. </p>.<p>ಎಚ್.ಡಿ.ಕುಮಾರಸ್ವಾಮಿ ಅವರು ಜಿಲ್ಲೆಯ ಸಂಸದರಾಗಿ, ಕೇಂದ್ರ ಸಚಿವರಾಗಿ ಪ್ರದೇಶಾಭಿವೃದ್ಧಿ ಅನುದಾನ ಹೊರತುಪಡಿಸಿ ಇಲ್ಲಿವರೆಗೂ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ತಂದಿಲ್ಲ. ಕೈಗಾರಿಕೆ ಸ್ಥಾಪನೆ ಮಾಡುವುದನ್ನು ಬಿಟ್ಟು ಕೇವಲ ಆರೋಪ ಮಾಡುವುದಕ್ಕೆ ಸೀಮಿತರಾಗಿದ್ದಾರೆ ಎಂದು ದೂರಿದರು. </p>.<p>ಇತ್ತೀಚೆಗೆ ಕೆ.ಆರ್.ಪೇಟೆಗೆ ಆಗಮಿಸಿದ್ದ ನಿಖಿಲ್ ಕುಮಾರಸ್ವಾಮಿ ಅವರು ಸಚಿವ ಚಲುವರಾಯಸ್ವಾಮಿ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. 1999ರಲ್ಲಿ ಚಲುವರಾಯಸ್ವಾಮಿ ಗೆದ್ದು ಜೆಡಿಎಸ್ ಪಕ್ಷ ಕಟ್ಟಿರುವುದನ್ನು ನಿಖಿಲ್ ಮರೆತಿರುವಂತಿದೆ. ರಾಜಕೀಯ ಪ್ರಬುದ್ಧತೆಯನ್ನು ನಿಖಿಲ್ ಬೆಳೆಸಿಕೊಳ್ಳಲಿ ಎಂದು ಹೇಳಿದರು.</p>.<h3>ವಾರದಲ್ಲಿ ಕಬ್ಬು ಬಾಕಿ ಪಾವತಿ:</h3>.<p>ಮೈಷುಗರ್ ಅಕ್ರಮ ಕುರಿತ ಪ್ರಶ್ನೆಗೆ ಉತ್ತರಿಸಿ, ‘ನನ್ನ ಅವಧಿಯ ಎರಡು ವರ್ಷದಲ್ಲಿ ಯಾವುದೇ ಆರ್ಥಿಕ ಲೋಪವಾಗಿಲ್ಲ. ಸಕ್ಕರೆಯನ್ನು ಸ್ಪರ್ಧಾತ್ಮಕ ದರದಲ್ಲಿ ಮತ್ತು ಪಾರದರ್ಶಕ ಆಡಳಿತ ನೀಡಿರುವ ಬಗ್ಗೆ ತನಿಖಾ ತಂಡಕ್ಕೆ ಪೂರ್ಣ ಮಾಹಿತಿ ಒದಗಿಸಿದ್ದೇವೆ. ಕಬ್ಬು ಪೂರೈಸಿದ ರೈತರಿಗೆ ಬಾಕಿ ₹2.5 ಕೋಟಿಯನ್ನು ಇನ್ನೊಂದು ವಾರದಲ್ಲಿ ನೀಡುತ್ತೇವೆ’ ಎಂದು ತಿಳಿಸಿದರು. </p>.<p>ಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಚಿನಕುರಳಿ ರಮೇಶ್, ರಾಮಕೃಷ್ಣ, ಮಹದೇವು, ವಿಜಯ್ಕುಮಾರ್, ಸಿ.ಎಂ.ದ್ಯಾವಪ್ಪ ಇತರರಿದ್ದರು.</p>.<p> <strong>‘ಶಿವರಾಮೇಗೌಡ ವಿರುದ್ಧ ಕ್ರಮಕ್ಕೆ ಪತ್ರ’</strong> </p><p>‘ಕೆಪಿಸಿಸಿ ವಕ್ತಾರ ಎಲ್.ಆರ್.ಶಿವರಾಮೇಗೌಡ ಅವರು ದಿವಂಗತ ಜಿ.ಮಾದೇಗೌಡ ದಿವಂಗತ ಅಂಬರೀಷ್ ಹಾಗೂ ಸಚಿವ ಚಲುವರಾಯಸ್ವಾಮಿ ವಿರುದ್ಧ ಅಸಂವಿಧಾನಿಕ ಪದಗಳನ್ನು ಬಳಸಿರುವ ಆಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದು ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಉಂಟು ಮಾಡಿದೆ. ಈ ಬಗ್ಗೆ ತುರ್ತಾಗಿ ಕ್ರಮ ಕೈಗೊಳ್ಳಬೇಕು’ ಎಂದು ಸಿ.ಡಿ. ಗಂಗಾಧರ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಅವರಿಗೆ ಪತ್ರ ಬರೆದಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>