<p><strong>ಮಂಡ್ಯ:</strong> ಇಲ್ಲಿಯ ನಗರಸಭೆಗೆ ಹೊಂದಿಕೊಂಡಂತೆ ಹತ್ತಾರು ಹೊಸ ಬಡಾವಣೆಗಳನ್ನು ನಗರಸಭೆ ವ್ಯಾಪ್ತಿಗೆ ಸೇರಿಸಬೇಕು ಮತ್ತು ರಸ್ತೆಗಳ ಗುಣಮಟ್ಟ ಕಾಪಾಡಬೇಕು ಎಂದು ಜನಪ್ರತಿನಿಧಿಗಳೂ, ಸಾರ್ವಜನಿಕರು ಮತ್ತು ಸಂಘಟನೆಗಳ ಮುಖಂಡರು ಸಲಹೆ ನೀಡಿದರು. </p>.<p>ಮಂಡ್ಯ ನಗರಸಭೆಯ ಅಮೃತ ಭವನದ ಆವರಣದಲ್ಲಿ ನಡೆದ 2026-27ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆಯಲ್ಲಿ ನಗರಸಭೆ ಆಡಳಿತ ಮಂಡಳಿಗೆ ಜನರು ಹತ್ತಾರು ಸಲಹೆ-ಸೂಚನೆಗಳನ್ನು ನೀಡಿದರು.</p>.<p>ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸಬೇಕು, ನಗರಸಭೆ ವಾಣಿಜ್ಯ ಮಳಿಗೆಗಳನ್ನು ಬಾಡಿಗೆ ನೀಡಿ ಆದಾಯ ಹೆಚ್ಚಳಕ್ಕೆ ಕ್ರಮ ವಹಿಸಬೇಕು, ಇ-ಸ್ವತ್ತು ವಿತರಣೆಯಲ್ಲಿನ ಲೋಪ ಸರಿಪಡಿಸಬೇಕು ಎಂಬ ಒತ್ತಾಯ ಕೇಳಿಬಂದಿತು. </p>.<p>ಬೀದಿನಾಯಿಗಳು, ಮಂಗಗಳ ಹಾವಳಿ ತಪ್ಪಿಸಿ, ಸ್ಕೈ ವಾಕರ್ಗಳಲ್ಲಿ ಎಲಿವೇಟರ್ ಅಳವಡಿಸಬೇಕು. ಕಾಮಗಾರಿಗಳು ವಿಳಂಬವಾಗದೆ ನಿಗದಿತ ಅವಧಿಯೊಳಗೆ ಪೂರ್ಣಗೊಳ್ಳಬೇಕು. ನಗರಸಭೆ ಆಡಳಿತ ಪಾರದರ್ಶಕವಾಗಿರಲಿ. ಸರ್ಕಾರಿ ಕಚೇರಿಗೆ ವಿನಾಕಾರಣ ಜನರ ಅಲೆದಾಟ ತಪ್ಪಿಸಬೇಕು ಎಂಬ ಸಲಹೆಗಳು ಕೇಳಿಬಂದವು. </p>.<p>ಪ್ರಮುಖವಾಗಿ ಮಂಡ್ಯ ನಗರಸಭೆಗೆ ಹೊಂದಿಕೊಂಡಂತೆ ಎರಡು ದಶಕಗಳ ಹಿಂದೆಯೇ ನಿರ್ಮಾಣವಾಗಿರುವ ಹತ್ತಾರು ಹೊಸ ಬಡಾವಣೆಗಳು ನಗರಸಭೆಗೆ ವ್ಯಾಪ್ತಿಗೆ ಸೇರಿಸಬೇಕು. ಆ ಮೂಲಕ ನಗರಸಭೆ ವ್ಯಾಪ್ತಿಯನ್ನು ವಿಸ್ತರಿಸಿ, ಬೃಹತ್ ಮಂಡ್ಯ ಅಥವಾ ನಗರಪಾಲಿಕೆಯಾಗಿ ರೂಪಿಸಬೇಕು. ಈ ನಿಟ್ಟಿನಲ್ಲಿ ಬಜೆಟ್ ಸಭೆಯಲ್ಲೇ ವಿಶೇಷ ನಿರ್ಣಯ ಮಾಡಬೇಕೆಂದು ಹಲವು ಮಂದಿ ಒತ್ತಾಯಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ನಗರಸಭೆ ನಿರ್ಗಮಿತ ಅಧ್ಯಕ್ಷ ಎಂ.ವಿ.ಪ್ರಕಾಶ್, ‘35 ವರ್ಷಗಳ ಹಿಂದೆ ಆಗಿರುವ ಮಂಡ್ಯ ನಗರದ ಸಿಡಿಪಿ ಪ್ಲಾನ್ ಬದಲಾಗಿಲ್ಲ. ಅದನ್ನು ಸರ್ಕಾರ ಬದಲಾವಣೆ ಮಾಡಬೇಕು. ಶಾಸಕರು, ಸಚಿವರು ಮನಸು ಮಾಡಿದರೆ ನಗರಸಭೆ ವ್ಯಾಪ್ತಿ ವಿಸ್ತರಣೆಯಾಗಲಿದೆ. ಈ ಸಂಗತಿಯನ್ನು ಶಾಸಕರು, ಸಚಿವರ ಗಮನಕ್ಕೆ ತರಲಾಗುವುದು’ ಎಂದು ತಿಳಿಸಿದರು.</p>.<p> <strong>‘ಫುಟ್ಪಾತ್ ಕಾಮಗಾರಿಗೆ ನಗರಸಭೆ ಹಣ ನೀಡುವಂತಿಲ್ಲ’ ‘</strong></p><p>ಬೆಂಗಳೂರು-ಮೈಸೂರು ಹೆದ್ದಾರಿ ಬದಿಯ ಪಾದಚಾರಿ ಮಾರ್ಗದ ಕಾಮಗಾರಿಗೆ ನಗರಸಭೆಯಿಂದ ಹಣ ನೀಡುವಂತಿಲ್ಲ. ಹೆದ್ದಾರಿ ಪ್ರಾಧಿಕಾರದಿಂದಲೇ ಮಾಡಬೇಕು. ನಾನು ಅಧ್ಯಕ್ಷನಾಗಿದ್ದಾಗ ಕೆಎಚ್ಬಿ ಬಡಾವಣೆಗೆ ಮೂಲಸೌಕರ್ಯ ಕಲ್ಪಿಸಲು ₹85 ಲಕ್ಷ ಅನುದಾನ ನೀಡಿದ್ದೆ. ತುರ್ತಾಗಿ ಕಾಮಗಾರಿ ಆರಂಭಿಸಿ. ಒಳಚರಂಡಿ ಕಾಮಗಾರಿಗಾಗಿ ಹಲವೆಡೆ ರಸ್ತೆಗಳನ್ನು ಅಗೆಯಲಾಗುತ್ತಿದೆ. ಕಾಮಗಾರಿ ನಿರ್ವಹಿಸುತ್ತಿರುವ ಎನ್ಜಿಟಿ (ನ್ಯಾಷನಲ್ ಗ್ರೀನ್ ಟ್ರಿಬ್ಯುನಲ್) ವತಿಯಿಂದಲೇ ರಸ್ತೆಗಳನ್ನು ಸರಿಪಡಿಸಬೇಕು. ಉದ್ಯಾನಗಳನ್ನು ಅಭಿವೃದ್ಧಿಪಡಿಸಬೇಕು’ ಎಂದು ಮಂಡ್ಯ ನಗರಸಭೆಯ ನಿರ್ಗಮಿತಿ ಅಧ್ಯಕ್ಷ ಎಂ.ವಿ.ಪ್ರಕಾಶ್ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಇಲ್ಲಿಯ ನಗರಸಭೆಗೆ ಹೊಂದಿಕೊಂಡಂತೆ ಹತ್ತಾರು ಹೊಸ ಬಡಾವಣೆಗಳನ್ನು ನಗರಸಭೆ ವ್ಯಾಪ್ತಿಗೆ ಸೇರಿಸಬೇಕು ಮತ್ತು ರಸ್ತೆಗಳ ಗುಣಮಟ್ಟ ಕಾಪಾಡಬೇಕು ಎಂದು ಜನಪ್ರತಿನಿಧಿಗಳೂ, ಸಾರ್ವಜನಿಕರು ಮತ್ತು ಸಂಘಟನೆಗಳ ಮುಖಂಡರು ಸಲಹೆ ನೀಡಿದರು. </p>.<p>ಮಂಡ್ಯ ನಗರಸಭೆಯ ಅಮೃತ ಭವನದ ಆವರಣದಲ್ಲಿ ನಡೆದ 2026-27ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆಯಲ್ಲಿ ನಗರಸಭೆ ಆಡಳಿತ ಮಂಡಳಿಗೆ ಜನರು ಹತ್ತಾರು ಸಲಹೆ-ಸೂಚನೆಗಳನ್ನು ನೀಡಿದರು.</p>.<p>ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸಬೇಕು, ನಗರಸಭೆ ವಾಣಿಜ್ಯ ಮಳಿಗೆಗಳನ್ನು ಬಾಡಿಗೆ ನೀಡಿ ಆದಾಯ ಹೆಚ್ಚಳಕ್ಕೆ ಕ್ರಮ ವಹಿಸಬೇಕು, ಇ-ಸ್ವತ್ತು ವಿತರಣೆಯಲ್ಲಿನ ಲೋಪ ಸರಿಪಡಿಸಬೇಕು ಎಂಬ ಒತ್ತಾಯ ಕೇಳಿಬಂದಿತು. </p>.<p>ಬೀದಿನಾಯಿಗಳು, ಮಂಗಗಳ ಹಾವಳಿ ತಪ್ಪಿಸಿ, ಸ್ಕೈ ವಾಕರ್ಗಳಲ್ಲಿ ಎಲಿವೇಟರ್ ಅಳವಡಿಸಬೇಕು. ಕಾಮಗಾರಿಗಳು ವಿಳಂಬವಾಗದೆ ನಿಗದಿತ ಅವಧಿಯೊಳಗೆ ಪೂರ್ಣಗೊಳ್ಳಬೇಕು. ನಗರಸಭೆ ಆಡಳಿತ ಪಾರದರ್ಶಕವಾಗಿರಲಿ. ಸರ್ಕಾರಿ ಕಚೇರಿಗೆ ವಿನಾಕಾರಣ ಜನರ ಅಲೆದಾಟ ತಪ್ಪಿಸಬೇಕು ಎಂಬ ಸಲಹೆಗಳು ಕೇಳಿಬಂದವು. </p>.<p>ಪ್ರಮುಖವಾಗಿ ಮಂಡ್ಯ ನಗರಸಭೆಗೆ ಹೊಂದಿಕೊಂಡಂತೆ ಎರಡು ದಶಕಗಳ ಹಿಂದೆಯೇ ನಿರ್ಮಾಣವಾಗಿರುವ ಹತ್ತಾರು ಹೊಸ ಬಡಾವಣೆಗಳು ನಗರಸಭೆಗೆ ವ್ಯಾಪ್ತಿಗೆ ಸೇರಿಸಬೇಕು. ಆ ಮೂಲಕ ನಗರಸಭೆ ವ್ಯಾಪ್ತಿಯನ್ನು ವಿಸ್ತರಿಸಿ, ಬೃಹತ್ ಮಂಡ್ಯ ಅಥವಾ ನಗರಪಾಲಿಕೆಯಾಗಿ ರೂಪಿಸಬೇಕು. ಈ ನಿಟ್ಟಿನಲ್ಲಿ ಬಜೆಟ್ ಸಭೆಯಲ್ಲೇ ವಿಶೇಷ ನಿರ್ಣಯ ಮಾಡಬೇಕೆಂದು ಹಲವು ಮಂದಿ ಒತ್ತಾಯಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ನಗರಸಭೆ ನಿರ್ಗಮಿತ ಅಧ್ಯಕ್ಷ ಎಂ.ವಿ.ಪ್ರಕಾಶ್, ‘35 ವರ್ಷಗಳ ಹಿಂದೆ ಆಗಿರುವ ಮಂಡ್ಯ ನಗರದ ಸಿಡಿಪಿ ಪ್ಲಾನ್ ಬದಲಾಗಿಲ್ಲ. ಅದನ್ನು ಸರ್ಕಾರ ಬದಲಾವಣೆ ಮಾಡಬೇಕು. ಶಾಸಕರು, ಸಚಿವರು ಮನಸು ಮಾಡಿದರೆ ನಗರಸಭೆ ವ್ಯಾಪ್ತಿ ವಿಸ್ತರಣೆಯಾಗಲಿದೆ. ಈ ಸಂಗತಿಯನ್ನು ಶಾಸಕರು, ಸಚಿವರ ಗಮನಕ್ಕೆ ತರಲಾಗುವುದು’ ಎಂದು ತಿಳಿಸಿದರು.</p>.<p> <strong>‘ಫುಟ್ಪಾತ್ ಕಾಮಗಾರಿಗೆ ನಗರಸಭೆ ಹಣ ನೀಡುವಂತಿಲ್ಲ’ ‘</strong></p><p>ಬೆಂಗಳೂರು-ಮೈಸೂರು ಹೆದ್ದಾರಿ ಬದಿಯ ಪಾದಚಾರಿ ಮಾರ್ಗದ ಕಾಮಗಾರಿಗೆ ನಗರಸಭೆಯಿಂದ ಹಣ ನೀಡುವಂತಿಲ್ಲ. ಹೆದ್ದಾರಿ ಪ್ರಾಧಿಕಾರದಿಂದಲೇ ಮಾಡಬೇಕು. ನಾನು ಅಧ್ಯಕ್ಷನಾಗಿದ್ದಾಗ ಕೆಎಚ್ಬಿ ಬಡಾವಣೆಗೆ ಮೂಲಸೌಕರ್ಯ ಕಲ್ಪಿಸಲು ₹85 ಲಕ್ಷ ಅನುದಾನ ನೀಡಿದ್ದೆ. ತುರ್ತಾಗಿ ಕಾಮಗಾರಿ ಆರಂಭಿಸಿ. ಒಳಚರಂಡಿ ಕಾಮಗಾರಿಗಾಗಿ ಹಲವೆಡೆ ರಸ್ತೆಗಳನ್ನು ಅಗೆಯಲಾಗುತ್ತಿದೆ. ಕಾಮಗಾರಿ ನಿರ್ವಹಿಸುತ್ತಿರುವ ಎನ್ಜಿಟಿ (ನ್ಯಾಷನಲ್ ಗ್ರೀನ್ ಟ್ರಿಬ್ಯುನಲ್) ವತಿಯಿಂದಲೇ ರಸ್ತೆಗಳನ್ನು ಸರಿಪಡಿಸಬೇಕು. ಉದ್ಯಾನಗಳನ್ನು ಅಭಿವೃದ್ಧಿಪಡಿಸಬೇಕು’ ಎಂದು ಮಂಡ್ಯ ನಗರಸಭೆಯ ನಿರ್ಗಮಿತಿ ಅಧ್ಯಕ್ಷ ಎಂ.ವಿ.ಪ್ರಕಾಶ್ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>