<p><strong>ಮಂಡ್ಯ</strong>: ಅರಣ್ಯ ಪ್ರದೇಶದಲ್ಲಿ ತಂತಿ ಬೇಲಿ ಕಾಮಗಾರಿ ಮಾಡಿಕೊಟ್ಟಿದ್ದ ಗುತ್ತಿಗೆದಾರರಿಗೆ ಹಣ ಪಾವತಿಸದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಅರಣ್ಯ ಭವನದ (ಡಿಸಿಎಫ್ ಕಚೇರಿ) ಪೀಠೋಪಕರಣ ಮತ್ತು 14 ಕಂಪ್ಯೂಟರ್ಗಳು ಜಪ್ತಿ ಮಾಡಿದ ಘಟನೆ ಬುಧವಾರ ನಡೆಯಿತು.</p><p>ನಾಗಮಂಗಲ ತಾಲ್ಲೂಕಿನ ಮಲ್ಲೇಗೌಡನಹಳ್ಳಿಯ ಎಂ.ವೈ. ಸುರೇಶ ಹಾಗೂ ಶ್ರೀರಂಗಪಟ್ಟಣ ತಾಲ್ಲೂಕಿನ ಗೌಡಹಳ್ಳಿ ಗ್ರಾಮದ ರಾಜಣ್ಣ ಜಿ.ಎನ್. ಗುತ್ತಿಗೆದಾರರಾಗಿದ್ದು, ಇವರಿಬ್ಬರೂ 2022ರಲ್ಲಿ ₹3.24 ಕೋಟಿ ವೆಚ್ಚದಲ್ಲಿ 51 ಕಿ.ಮೀ. ದೂರದವರೆಗೆ ತಂತಿಬೇಲಿ ಕಾಮಗಾರಿ ನಡೆಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಕಚೇರಿಗೆ ಬಿಲ್ ಪಾವತಿ ಮಾಡಲಾಗಿತ್ತು. ಆದರೆ ಹಣ ಪಾವತಿಸದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರು.</p><p>ಇದರಿಂದ ಬೇಸತ್ತ ಗುತ್ತಿಗೆದಾರರು ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯಾಲಯ ನಿಗದಿತ ಸಮಯದೊಳಗೆ ಹಣ ಪಾವತಿ ಮಾಡುವಂತೆ ಆದೇಶ ನೀಡಿದ್ದರೂ ಸಹ ಪಾವತಿ ಮಾಡಿರಲಿಲ್ಲ. ಮತ್ತೆ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ ಜಪ್ತಿ ಆದೇಶ ತಂದಿದ್ದರು.</p><p>ಡಿಸಿಎಫ್ ರಘು ಅವರು ಹಣ ಪಾವತಿಗೆ ಸಮಯಾವಕಾಶ ಕೋರಿ, ಜಪ್ತಿ ಮಾಡದಂತೆ ಮನವಿ ಮಾಡಿದರು. ಸಂಧಾನಕ್ಕೆ ಒಪ್ಪದ ಗುತ್ತಿಗೆದಾರರು ಕಚೇರಿ ಪೀಠೋಪಕರಣಗಳನ್ನು ಜಪ್ತಿ ಮಾಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ಅರಣ್ಯ ಪ್ರದೇಶದಲ್ಲಿ ತಂತಿ ಬೇಲಿ ಕಾಮಗಾರಿ ಮಾಡಿಕೊಟ್ಟಿದ್ದ ಗುತ್ತಿಗೆದಾರರಿಗೆ ಹಣ ಪಾವತಿಸದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಅರಣ್ಯ ಭವನದ (ಡಿಸಿಎಫ್ ಕಚೇರಿ) ಪೀಠೋಪಕರಣ ಮತ್ತು 14 ಕಂಪ್ಯೂಟರ್ಗಳು ಜಪ್ತಿ ಮಾಡಿದ ಘಟನೆ ಬುಧವಾರ ನಡೆಯಿತು.</p><p>ನಾಗಮಂಗಲ ತಾಲ್ಲೂಕಿನ ಮಲ್ಲೇಗೌಡನಹಳ್ಳಿಯ ಎಂ.ವೈ. ಸುರೇಶ ಹಾಗೂ ಶ್ರೀರಂಗಪಟ್ಟಣ ತಾಲ್ಲೂಕಿನ ಗೌಡಹಳ್ಳಿ ಗ್ರಾಮದ ರಾಜಣ್ಣ ಜಿ.ಎನ್. ಗುತ್ತಿಗೆದಾರರಾಗಿದ್ದು, ಇವರಿಬ್ಬರೂ 2022ರಲ್ಲಿ ₹3.24 ಕೋಟಿ ವೆಚ್ಚದಲ್ಲಿ 51 ಕಿ.ಮೀ. ದೂರದವರೆಗೆ ತಂತಿಬೇಲಿ ಕಾಮಗಾರಿ ನಡೆಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಕಚೇರಿಗೆ ಬಿಲ್ ಪಾವತಿ ಮಾಡಲಾಗಿತ್ತು. ಆದರೆ ಹಣ ಪಾವತಿಸದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರು.</p><p>ಇದರಿಂದ ಬೇಸತ್ತ ಗುತ್ತಿಗೆದಾರರು ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯಾಲಯ ನಿಗದಿತ ಸಮಯದೊಳಗೆ ಹಣ ಪಾವತಿ ಮಾಡುವಂತೆ ಆದೇಶ ನೀಡಿದ್ದರೂ ಸಹ ಪಾವತಿ ಮಾಡಿರಲಿಲ್ಲ. ಮತ್ತೆ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ ಜಪ್ತಿ ಆದೇಶ ತಂದಿದ್ದರು.</p><p>ಡಿಸಿಎಫ್ ರಘು ಅವರು ಹಣ ಪಾವತಿಗೆ ಸಮಯಾವಕಾಶ ಕೋರಿ, ಜಪ್ತಿ ಮಾಡದಂತೆ ಮನವಿ ಮಾಡಿದರು. ಸಂಧಾನಕ್ಕೆ ಒಪ್ಪದ ಗುತ್ತಿಗೆದಾರರು ಕಚೇರಿ ಪೀಠೋಪಕರಣಗಳನ್ನು ಜಪ್ತಿ ಮಾಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>