<p><strong>ಮಂಡ್ಯ</strong>: ಹೊಂಬಾಳೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ, ಚಿತ್ರ ನಿರ್ಮಾಪಕ ವಿಜಯ್ ಕಿರಗಂದೂರು ತಮ್ಮ ತವರು ಜಿಲ್ಲೆಗೆ 50 ಐಸಿಯು ಹಾಸಿಗೆ ಹಾಗೂ 50 ಎಂಎಲ್ಪಿ ಸಾಮರ್ಥ್ಯದ 2 ಆಮ್ಲಜನಕ ಘಟಕ ಸ್ಥಾಪನೆಗೆ ಹಣಕಾಸು ನೆರವು ನೀಡಲು ಮುಂದಾಗಿದ್ದಾರೆ.</p>.<p>ಈ ಕುರಿತು ವಿಜಯ್ ಕಿರಗಂದೂರು ಜಿಲ್ಲಾಧಿಕಾರಿಗೆ ಇ–ಮೇಲ್ ಮಾಡಿದ್ದು ಹಣಕಾಸು ನೆರವು ಸ್ವೀಕರಿಸುವಂತೆ ಕೋರಿದ್ದಾರೆ.</p>.<p>ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಸರ್ಕಾರವೇ ಎಲ್ಲಾ ರೀತಿಯ ನೆರವು ನೀಡಲು ಸಾಧ್ಯವಿಲ್ಲ. ಇಂತಹ ಸಂದರ್ಭದಲ್ಲಿ ಸಮುದಾಯ ಕೂಡ ಒಗ್ಗಟ್ಟಿನಿಂದ ರೋಗಿಗಳ ಸೇವೆಗೆ ನೆರವಾಗಬೇಕು. ಈ ನಿಟ್ಟಿನಲ್ಲಿ ₹ 1.5– ₹ 2 ಕೋಟಿ ಹಣಕಾಸು ನೆರವು ನೀಡುವುದಾಗಿ ತಿಳಿಸಿದ್ದಾರೆ.</p>.<p>ವಿಜಯ್ ಅವರು ಮಂಡ್ಯ ತಾಲ್ಲೂಕು ಕಿರಗಂದೂರು ಗ್ರಾಮದವರು. ಬೆಂಗಳೂರಿನಲ್ಲಿ ಹೊಂಬಾಳೆ ಸಂಸ್ಥೆ ಸ್ಥಾಪಿಸಿ ನಿರ್ಮಾಣ ಕ್ಷೇತ್ರದಲ್ಲಿ ತೊಡಗಿಕೊಂಡಿದ್ದಾರೆ. ಅದ್ಧೂರಿ ಬಜೆಟ್ ಚಿತ್ರಗಳನ್ನು ನಿರ್ಮಾಣ ಮಾಡುವಲ್ಲಿ ಹೆಸರುವಾಸಿಯಾಗಿದ್ದಾರೆ. ತವರು ಜಿಲ್ಲೆಯ ಅಭಿಮಾನದಿಂದಾಗಿ ಆರ್ಥಿಕ ನೆರವು ನೀಡುತ್ತಿರುವುದಾಗಿ ತಿಳಿಸಿದ್ದಾರೆ.</p>.<p>‘ವಿಜಯ್ ಕಿರಗಂದೂರು ಅವರು ನೀಡುತ್ತಿರುವ ನೆರವನ್ನು ಕೆಲವೇ ದಿನಗಳಲ್ಲಿ ಕೋವಿಡ್ ಕರ್ತವ್ಯಕ್ಕೆ ಬಳಸಿಕೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಎಸ್.ಅಶ್ವಥಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ಹೊಂಬಾಳೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ, ಚಿತ್ರ ನಿರ್ಮಾಪಕ ವಿಜಯ್ ಕಿರಗಂದೂರು ತಮ್ಮ ತವರು ಜಿಲ್ಲೆಗೆ 50 ಐಸಿಯು ಹಾಸಿಗೆ ಹಾಗೂ 50 ಎಂಎಲ್ಪಿ ಸಾಮರ್ಥ್ಯದ 2 ಆಮ್ಲಜನಕ ಘಟಕ ಸ್ಥಾಪನೆಗೆ ಹಣಕಾಸು ನೆರವು ನೀಡಲು ಮುಂದಾಗಿದ್ದಾರೆ.</p>.<p>ಈ ಕುರಿತು ವಿಜಯ್ ಕಿರಗಂದೂರು ಜಿಲ್ಲಾಧಿಕಾರಿಗೆ ಇ–ಮೇಲ್ ಮಾಡಿದ್ದು ಹಣಕಾಸು ನೆರವು ಸ್ವೀಕರಿಸುವಂತೆ ಕೋರಿದ್ದಾರೆ.</p>.<p>ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಸರ್ಕಾರವೇ ಎಲ್ಲಾ ರೀತಿಯ ನೆರವು ನೀಡಲು ಸಾಧ್ಯವಿಲ್ಲ. ಇಂತಹ ಸಂದರ್ಭದಲ್ಲಿ ಸಮುದಾಯ ಕೂಡ ಒಗ್ಗಟ್ಟಿನಿಂದ ರೋಗಿಗಳ ಸೇವೆಗೆ ನೆರವಾಗಬೇಕು. ಈ ನಿಟ್ಟಿನಲ್ಲಿ ₹ 1.5– ₹ 2 ಕೋಟಿ ಹಣಕಾಸು ನೆರವು ನೀಡುವುದಾಗಿ ತಿಳಿಸಿದ್ದಾರೆ.</p>.<p>ವಿಜಯ್ ಅವರು ಮಂಡ್ಯ ತಾಲ್ಲೂಕು ಕಿರಗಂದೂರು ಗ್ರಾಮದವರು. ಬೆಂಗಳೂರಿನಲ್ಲಿ ಹೊಂಬಾಳೆ ಸಂಸ್ಥೆ ಸ್ಥಾಪಿಸಿ ನಿರ್ಮಾಣ ಕ್ಷೇತ್ರದಲ್ಲಿ ತೊಡಗಿಕೊಂಡಿದ್ದಾರೆ. ಅದ್ಧೂರಿ ಬಜೆಟ್ ಚಿತ್ರಗಳನ್ನು ನಿರ್ಮಾಣ ಮಾಡುವಲ್ಲಿ ಹೆಸರುವಾಸಿಯಾಗಿದ್ದಾರೆ. ತವರು ಜಿಲ್ಲೆಯ ಅಭಿಮಾನದಿಂದಾಗಿ ಆರ್ಥಿಕ ನೆರವು ನೀಡುತ್ತಿರುವುದಾಗಿ ತಿಳಿಸಿದ್ದಾರೆ.</p>.<p>‘ವಿಜಯ್ ಕಿರಗಂದೂರು ಅವರು ನೀಡುತ್ತಿರುವ ನೆರವನ್ನು ಕೆಲವೇ ದಿನಗಳಲ್ಲಿ ಕೋವಿಡ್ ಕರ್ತವ್ಯಕ್ಕೆ ಬಳಸಿಕೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಎಸ್.ಅಶ್ವಥಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>