<p><strong>ಮಂಡ್ಯ:</strong> ಜಿಲ್ಲೆಯ ಕೆ.ಆರ್. ಪೇಟೆ ಪಟ್ಟಣದ ಜಯನಗರ ಬಡಾವಣೆಯ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ದಂಪತಿ ಸೋಮವಾರ ನೇಣಿಗೆ ಶರಣಾಗಿದ್ದಾರೆ. </p>.<p>ತಾಲ್ಲೂಕಿನ ಹೊಸಕೋಟೆ ಗ್ರಾಮದ ಗಣೇಶಗೌಡ ಮತ್ತು ಮಂಜುಳಾ ದಂಪತಿಯ ಪುತ್ರ ದರ್ಶನ್ (29) ಹಾಗೂ ದಿವ್ಯಶ್ರೀ (25) ನೇಣಿಗೆ ಶರಣಾದ ದಂಪತಿ. ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ದಂಪತಿ ಯತ್ನಿಸಿದ್ದು, ಎರಡು ವರ್ಷದ ಹೆಣ್ಣು ಮಗು ಪ್ರಾಣಾಪಾಯದಿಂದ ಪಾರಾಗಿದೆ.</p>.<p>ನಾಟನಹಳ್ಳಿಯ ಲಕ್ಷ್ಮಣಗೌಡ ಮತ್ತು ಸುನಂದಾ ದಂಪತಿಯ ಮಗಳಾದ ದಿವ್ಯಶ್ರೀ ಅವರನ್ನು ಮೂರು ವರ್ಷಗಳ ಹಿಂದೆ ದರ್ಶನ್ ಅವರೊಂದಿಗೆ ವಿವಾಹ ಮಾಡಿ ಕೊಡಲಾಗಿತ್ತು. </p>.<p>ಮೃತ ದರ್ಶನ್ ತಂದೆ ಗಣೇಶಗೌಡ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಕೆ.ಆರ್.ಪೇಟೆ ಟೌನ್ ಇನ್ಸ್ಪೆಕ್ಟರ್ ಸುನಿಲ್ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. </p>.<p>ಘಟನೆಗೆ ನಿಖರವಾದ ಕಾರಣ ತನಿಖೆಯಿಂದ ತಿಳಿದು ಬರಬೇಕಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಜಿಲ್ಲೆಯ ಕೆ.ಆರ್. ಪೇಟೆ ಪಟ್ಟಣದ ಜಯನಗರ ಬಡಾವಣೆಯ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ದಂಪತಿ ಸೋಮವಾರ ನೇಣಿಗೆ ಶರಣಾಗಿದ್ದಾರೆ. </p>.<p>ತಾಲ್ಲೂಕಿನ ಹೊಸಕೋಟೆ ಗ್ರಾಮದ ಗಣೇಶಗೌಡ ಮತ್ತು ಮಂಜುಳಾ ದಂಪತಿಯ ಪುತ್ರ ದರ್ಶನ್ (29) ಹಾಗೂ ದಿವ್ಯಶ್ರೀ (25) ನೇಣಿಗೆ ಶರಣಾದ ದಂಪತಿ. ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ದಂಪತಿ ಯತ್ನಿಸಿದ್ದು, ಎರಡು ವರ್ಷದ ಹೆಣ್ಣು ಮಗು ಪ್ರಾಣಾಪಾಯದಿಂದ ಪಾರಾಗಿದೆ.</p>.<p>ನಾಟನಹಳ್ಳಿಯ ಲಕ್ಷ್ಮಣಗೌಡ ಮತ್ತು ಸುನಂದಾ ದಂಪತಿಯ ಮಗಳಾದ ದಿವ್ಯಶ್ರೀ ಅವರನ್ನು ಮೂರು ವರ್ಷಗಳ ಹಿಂದೆ ದರ್ಶನ್ ಅವರೊಂದಿಗೆ ವಿವಾಹ ಮಾಡಿ ಕೊಡಲಾಗಿತ್ತು. </p>.<p>ಮೃತ ದರ್ಶನ್ ತಂದೆ ಗಣೇಶಗೌಡ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಕೆ.ಆರ್.ಪೇಟೆ ಟೌನ್ ಇನ್ಸ್ಪೆಕ್ಟರ್ ಸುನಿಲ್ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. </p>.<p>ಘಟನೆಗೆ ನಿಖರವಾದ ಕಾರಣ ತನಿಖೆಯಿಂದ ತಿಳಿದು ಬರಬೇಕಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>