<p><strong>ಮಂಡ್ಯ</strong>: ‘ಸ್ವಾತಂತ್ರ್ಯ ನಂತರ 8ನೇ ಜನಗಣತಿ ನಡೆಯುತ್ತಿದೆ. ಡಿಜಿಟಲ್ ವ್ಯವಸ್ಥೆಯಲ್ಲಿ ನಡೆಯುತ್ತಿರುವ ಮೊದಲ ಗಣತಿಯಾಗಿದೆ. ಆನ್ಲೈನ್ನಲ್ಲಿ ಮಾಹಿತಿ ಅಪ್ಲೋಡ್ ಆಗುವುದರಿಂದ ತಿದ್ದುಪಡಿ ಮಾಡಲು ಅವಕಾಶವಿಲ್ಲ. ಆದ್ದರಿಂದ ಗಣತಿದಾರರು ಅತ್ಯಂತ ಎಚ್ಚರಿಕೆಯಿಂದ ದಾಖಲೆಗಳನ್ನು ನಮೂದಿಸಬೇಕು’ ಎಂದು ಜಿಲ್ಲಾಧಿಕಾರಿ ಕುಮಾರ ಹೇಳಿದರು. </p>.<p>ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜನಗಣತಿ ಕಾರ್ಯದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೋಮವಾರ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಜನಗಣತಿಯು 2 ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತದಲ್ಲಿ 2026ರ ಏಪ್ರಿಲ್ 16ರಿಂದ ಮೇ 15ರವರೆಗೆ ಮನೆ ಪಟ್ಟಿ ಕ್ಷೇತ್ರ ಕಾರ್ಯ ನಡೆಯಲಿದೆ ಹಾಗೂ ಎರಡನೇ ಹಂತದ ಜನಗಣತಿಯು 2027ರ ಫೆಬ್ರವರಿ 1ರಿಂದ ಫೆಬ್ರವರಿ 28ರವರೆಗೆ ನಡೆಯಲಿದೆ ಎಂದು ತಿಳಿಸಿದರು.</p>.<p>‘ಜನಗಣತಿ ಕಾರ್ಯಕ್ಕೆ ನಿಯೋಜಿಸಿರುವ ಜಿಲ್ಲೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಅತ್ಯಂತ ಜವಾಬ್ದಾರಿಯಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು. ದೇಶದಲ್ಲಿ ಅತ್ಯಂತ ತಳಮಟ್ಟದಿಂದ ಮಾಹಿತಿ ಸಂಗ್ರಹಿಸುವ ಏಕೈಕ ಕಾರ್ಯಕ್ರಮ ಇದಾಗಿದೆ. ಮುಂದಿನ 10 ವರ್ಷ ದೇಶದ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಲು ಈ ದಾಖಲೆ ಬಳಕೆಯಾಗಲಿದೆ ಎಂದರು.</p>.<p>ಜನಗಣತಿಯು ರಾಷ್ಟ್ರೀಯ ಮಟ್ಟದ ಪ್ರಮುಖ ಕಾರ್ಯವಾಗಿದ್ದು, ಚುನಾವಣಾ ಕೆಲಸದಷ್ಟೇ ಗಂಭೀರವಾದುದು. ಅಧಿಕಾರಿಗಳ ನಡುವೆ ಸಮರ್ಪಕ ಸಮನ್ವಯತೆ ಇರಬೇಕು. ಸಿ.ಎಂ.ಎಂ.ಎಸ್ ಮತ್ತು ಮೊಬೈಲ್ ಆ್ಯಪ್ಗಳ ಬಳಕೆಯಾಗಲಿದೆ ಎಂದು ತಿಳಿಸಿದರು.</p>.<p>ಜನಗಣತಿ ಕಾರ್ಯಕ್ಕೆ ನಿಯೋಜಿಸುವ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ನಿಗದಿತ ಅವಧಿಯೊಳಗೆ ಗಣತಿ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಂತೆ ತಿಳಿಸಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವನಂದಾಮೂರ್ತಿ, ಉಪವಿಭಾಗಾಧಿಕಾರಿ ಶಿವಮೂರ್ತಿ, ಶ್ರೀನಿವಾಸ್ ಹಾಗೂ ಧನ್ಯ, ಕುಲದೀಪ್ ಯಾದವ್ ಹಾಗೂ ರಮೇಶ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ‘ಸ್ವಾತಂತ್ರ್ಯ ನಂತರ 8ನೇ ಜನಗಣತಿ ನಡೆಯುತ್ತಿದೆ. ಡಿಜಿಟಲ್ ವ್ಯವಸ್ಥೆಯಲ್ಲಿ ನಡೆಯುತ್ತಿರುವ ಮೊದಲ ಗಣತಿಯಾಗಿದೆ. ಆನ್ಲೈನ್ನಲ್ಲಿ ಮಾಹಿತಿ ಅಪ್ಲೋಡ್ ಆಗುವುದರಿಂದ ತಿದ್ದುಪಡಿ ಮಾಡಲು ಅವಕಾಶವಿಲ್ಲ. ಆದ್ದರಿಂದ ಗಣತಿದಾರರು ಅತ್ಯಂತ ಎಚ್ಚರಿಕೆಯಿಂದ ದಾಖಲೆಗಳನ್ನು ನಮೂದಿಸಬೇಕು’ ಎಂದು ಜಿಲ್ಲಾಧಿಕಾರಿ ಕುಮಾರ ಹೇಳಿದರು. </p>.<p>ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜನಗಣತಿ ಕಾರ್ಯದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೋಮವಾರ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಜನಗಣತಿಯು 2 ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತದಲ್ಲಿ 2026ರ ಏಪ್ರಿಲ್ 16ರಿಂದ ಮೇ 15ರವರೆಗೆ ಮನೆ ಪಟ್ಟಿ ಕ್ಷೇತ್ರ ಕಾರ್ಯ ನಡೆಯಲಿದೆ ಹಾಗೂ ಎರಡನೇ ಹಂತದ ಜನಗಣತಿಯು 2027ರ ಫೆಬ್ರವರಿ 1ರಿಂದ ಫೆಬ್ರವರಿ 28ರವರೆಗೆ ನಡೆಯಲಿದೆ ಎಂದು ತಿಳಿಸಿದರು.</p>.<p>‘ಜನಗಣತಿ ಕಾರ್ಯಕ್ಕೆ ನಿಯೋಜಿಸಿರುವ ಜಿಲ್ಲೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಅತ್ಯಂತ ಜವಾಬ್ದಾರಿಯಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು. ದೇಶದಲ್ಲಿ ಅತ್ಯಂತ ತಳಮಟ್ಟದಿಂದ ಮಾಹಿತಿ ಸಂಗ್ರಹಿಸುವ ಏಕೈಕ ಕಾರ್ಯಕ್ರಮ ಇದಾಗಿದೆ. ಮುಂದಿನ 10 ವರ್ಷ ದೇಶದ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಲು ಈ ದಾಖಲೆ ಬಳಕೆಯಾಗಲಿದೆ ಎಂದರು.</p>.<p>ಜನಗಣತಿಯು ರಾಷ್ಟ್ರೀಯ ಮಟ್ಟದ ಪ್ರಮುಖ ಕಾರ್ಯವಾಗಿದ್ದು, ಚುನಾವಣಾ ಕೆಲಸದಷ್ಟೇ ಗಂಭೀರವಾದುದು. ಅಧಿಕಾರಿಗಳ ನಡುವೆ ಸಮರ್ಪಕ ಸಮನ್ವಯತೆ ಇರಬೇಕು. ಸಿ.ಎಂ.ಎಂ.ಎಸ್ ಮತ್ತು ಮೊಬೈಲ್ ಆ್ಯಪ್ಗಳ ಬಳಕೆಯಾಗಲಿದೆ ಎಂದು ತಿಳಿಸಿದರು.</p>.<p>ಜನಗಣತಿ ಕಾರ್ಯಕ್ಕೆ ನಿಯೋಜಿಸುವ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ನಿಗದಿತ ಅವಧಿಯೊಳಗೆ ಗಣತಿ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಂತೆ ತಿಳಿಸಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವನಂದಾಮೂರ್ತಿ, ಉಪವಿಭಾಗಾಧಿಕಾರಿ ಶಿವಮೂರ್ತಿ, ಶ್ರೀನಿವಾಸ್ ಹಾಗೂ ಧನ್ಯ, ಕುಲದೀಪ್ ಯಾದವ್ ಹಾಗೂ ರಮೇಶ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>