<p><strong>ಮಂಡ್ಯ</strong>: ‘ಜಿಲ್ಲೆಯಾದ್ಯಂತ ಕಬ್ಬು ಕಟಾವು ಆರಂಭವಾಗಿದ್ದು ನಿಗದಿತ ಕಟಾವು ದರಕ್ಕಿಂತ ರೈತರಿಂದ ಹೆಚ್ಚು ದರ ಪಡೆಯುತ್ತಿರುವ ದೂರುಗಳು ಬಂದಿವೆ. ಅಧಿಕಾರಿಗಳು ಈ ಬಗ್ಗೆ ನಿಗಾ ವಹಿಸಬೇಕು. ನಿಗದಿತ ದರಕ್ಕಿಂತ ಹೆಚ್ಚಿಗೆ ವಸೂಲಿ ಮಾಡಿದರೆ ಗುತ್ತಿಗೆದಾರರ (ಗ್ಯಾಂಗ್ಮೆನ್) ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಜಿಲ್ಲಾಧಿಕಾರಿ ಎಸ್.ಅಶ್ವತಿ ಎಚ್ಚರಿಸಿದರು.</p>.<p>ಪ್ರಸ್ತುತ ಹಂಗಾಮಿನಲ್ಲಿ ಕಬ್ಬು ನುರಿಯುವ ಸಂಬಂಧ ಸಕ್ಕರೆ ಕಾರ್ಖಾನೆ ಅಧಿಕಾರಿಗಳೊಂದಿಗೆ ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಕಬ್ಬು ಕಟಾವಿಗೆ ಹೆಚ್ಚು ದರ ಪಡೆಯುತ್ತಿರುವ ಕಾರಣ ರೈತರಿಗೆ ನಷ್ಟ ಉಂಟಾಗುತ್ತಿದೆ. ಮುಂದಿನ ದಿನಗಳಲ್ಲಿ ರೈತರಿಂದ ಈ ರೀತಿಯ ದೂರುಗಳು ಬಾರದಂತೆ ನೋಡಿಕೊಳ್ಳಬೇಕು. ರೈತರ ಹಿತಕ್ಕೆ ಆದ್ಯತೆ ನೀಡಬೇಕು. ಕಾರ್ಖಾನೆಯ ಫೀಲ್ಡ್ ಅಧಿಕಾರಿಗಳು ಕಟಾವು ಕಾರ್ಮಿಕರನ್ನು ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ. ಈ ಕುರಿತಂತೆ ನಿತ್ಯ ರೈತರು ದೂರು ನೀಡುತ್ತಿದ್ದಾರೆ. ರೈತರಿಗೆ ಅನುಕೂಲವಾಗುವಂತೆ ಕಟಾವು ವೆಚ್ಚ ಹೆಚ್ಚಿಸದಂತೆ ಅಧಿಕಾರಿಗಳು ಗಮನಹರಿಸಬೇಕು’ ಎಂದರು.</p>.<p>‘ಕಬ್ಬು ಸಾಗಣೆ ವೆಚ್ಚಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕರು ಹೆಚ್ಚುವರಿಯಾಗಿ ಬಾಟ ನೀಡುವಂತೆ ರೈತರ ಮೇಲೆ ಒತ್ತಡ ಹಾಕುತ್ತಿದ್ದಾರೆ. ಲಾರಿ ಚಾಲಕರು ರೈತರಿಂದ ಯಾವುದೇ ಹಣ ಪಡೆಯುವಂತಿಲ್ಲ. ಗ್ಯಾಂಗ್ಮನ್ಗಳು ಈ ಕುರಿತು ಅವರಿಗೆ ಸೂಚನೆ ನೀಡಬೇಕು. ಸಾಗಣೆ ವೆಚ್ಚ ಭರಿಸುವುದಲ್ಲದೇ ರೈತರಿಂದ ಬಾಟ ಕೇಳಬಾರದು’ ಎಂದರು.</p>.<p>‘ಕಬ್ಬು ಕಟಾವು ಮಾಡುವಾಗ ಯಾವುದೇ ರೀತಿಯಿಂದ ತಾರತಮ್ಯ ಮಾಡಬಾರದು. 12 ರಿಂದ 14 ತಿಂಗಳ ಆದ್ಯತೆ ಮೇರೆಗೆ ಕಟಾವು ಮಾಡಬೇಕು. ಕಬ್ಬು ಪೂರೈಕೆಯಾದ 14 ದಿನಗಳೊಳಗೆ ರೈತರಿಗೆ ನ್ಯಾಯಯುತ ದರ (ಎಫ್ಆರ್ಪಿ) ಪಾವತಿಯಾಗಬೇಕು. ಈ ಬಗ್ಗೆ ಕಾರ್ಖಾನೆ ಅಧಿಕಾರಿಗಳು ಹೆಚ್ಚು ನಿಗಾ ವಹಿಸಬೇಕು. ಪ್ರತಿ ಬಾರಿ ಕಬ್ಬಿನ ಹಣ ಪಾವತಿಸುವಲ್ಲಿ ಕಾರ್ಖಾನೆ ಮಾಲೀಕರು ತಡ ಮಾಡುತ್ತಿದ್ದಾರೆ. ಈ ಬಾರಿ ರೈತರು ಸಂಕಷ್ಟದಲ್ಲಿದ್ದು ನಿಯಮಾನುಸಾರ 14 ದಿನದೊಳಗೆ ಬಾಕಿ ಪಾವತಿ ಮಾಡಬೇಕು’ ಎಂದು ಸೂಚಿಸಿದರು.</p>.<p>‘ಕಬ್ಬು ಕಡಿಯಲು ಬರುವ ಕಾರ್ಮಿಕರಿಗೆ ಸೂಕ್ತ ರಕ್ಷಣೆ ನೀಡಬೇಕು. ಅನಧಿಕೃತ ಚಟುವಟಿಕೆಗಳನ್ನು ತಕ್ಷಣದಿಂದಲೇ ಸಂಪೂರ್ಣವಾಗಿ ಅಂತ್ಯಗೊಳಿಸಬೇಕು. ಮೀಸಲು ಪ್ರದೇಶದಲ್ಲಿ ಲಭ್ಯವಿರುವ ಕಬ್ಬನ್ನು ಸಕಾಲದಲ್ಲಿ ಸಾಗಾಣಿಕೆ ಮಾಡಲು ಕ್ರಮವಹಿಸಬೇಕು. ರೈತರು ನೋಂದಣಿ ಮಾಡಿಸಿಕೊಂಡಿರುವ ಮಾಹಿತಿಯನ್ನು ಆಧರಿಸಿ ಕಬ್ಬು ಕಟಾವಿಗೆ ಮುಂದಾಗಬೇಕು. ರೈತಸಂಪರ್ಕ ಕೇಂದ್ರ , ಗ್ರಾಮ ಪಂಚಾಯತಿ, ಹಾಲಿನ ಡೇರಿ ವಿಭಾಗೀಯ ಕಚೇರಿಗಳಲ್ಲಿ ಪ್ರತಿ ತಿಂಗಳ ವಿವರ ಪ್ರದರ್ಶನ ಮಾಡಬೇಕು’ ಎಂದು ಸೂಚಿಸಿದರು.</p>.<p>ಆಹಾರ ಇಲಾಖೆ ಜಂಟಿ ನಿರ್ದೇಶಕ ಶಿವಣ್ಣ , ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಬಿ.ಎಸ್. ಚಂದ್ರಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ‘ಜಿಲ್ಲೆಯಾದ್ಯಂತ ಕಬ್ಬು ಕಟಾವು ಆರಂಭವಾಗಿದ್ದು ನಿಗದಿತ ಕಟಾವು ದರಕ್ಕಿಂತ ರೈತರಿಂದ ಹೆಚ್ಚು ದರ ಪಡೆಯುತ್ತಿರುವ ದೂರುಗಳು ಬಂದಿವೆ. ಅಧಿಕಾರಿಗಳು ಈ ಬಗ್ಗೆ ನಿಗಾ ವಹಿಸಬೇಕು. ನಿಗದಿತ ದರಕ್ಕಿಂತ ಹೆಚ್ಚಿಗೆ ವಸೂಲಿ ಮಾಡಿದರೆ ಗುತ್ತಿಗೆದಾರರ (ಗ್ಯಾಂಗ್ಮೆನ್) ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಜಿಲ್ಲಾಧಿಕಾರಿ ಎಸ್.ಅಶ್ವತಿ ಎಚ್ಚರಿಸಿದರು.</p>.<p>ಪ್ರಸ್ತುತ ಹಂಗಾಮಿನಲ್ಲಿ ಕಬ್ಬು ನುರಿಯುವ ಸಂಬಂಧ ಸಕ್ಕರೆ ಕಾರ್ಖಾನೆ ಅಧಿಕಾರಿಗಳೊಂದಿಗೆ ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಕಬ್ಬು ಕಟಾವಿಗೆ ಹೆಚ್ಚು ದರ ಪಡೆಯುತ್ತಿರುವ ಕಾರಣ ರೈತರಿಗೆ ನಷ್ಟ ಉಂಟಾಗುತ್ತಿದೆ. ಮುಂದಿನ ದಿನಗಳಲ್ಲಿ ರೈತರಿಂದ ಈ ರೀತಿಯ ದೂರುಗಳು ಬಾರದಂತೆ ನೋಡಿಕೊಳ್ಳಬೇಕು. ರೈತರ ಹಿತಕ್ಕೆ ಆದ್ಯತೆ ನೀಡಬೇಕು. ಕಾರ್ಖಾನೆಯ ಫೀಲ್ಡ್ ಅಧಿಕಾರಿಗಳು ಕಟಾವು ಕಾರ್ಮಿಕರನ್ನು ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ. ಈ ಕುರಿತಂತೆ ನಿತ್ಯ ರೈತರು ದೂರು ನೀಡುತ್ತಿದ್ದಾರೆ. ರೈತರಿಗೆ ಅನುಕೂಲವಾಗುವಂತೆ ಕಟಾವು ವೆಚ್ಚ ಹೆಚ್ಚಿಸದಂತೆ ಅಧಿಕಾರಿಗಳು ಗಮನಹರಿಸಬೇಕು’ ಎಂದರು.</p>.<p>‘ಕಬ್ಬು ಸಾಗಣೆ ವೆಚ್ಚಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕರು ಹೆಚ್ಚುವರಿಯಾಗಿ ಬಾಟ ನೀಡುವಂತೆ ರೈತರ ಮೇಲೆ ಒತ್ತಡ ಹಾಕುತ್ತಿದ್ದಾರೆ. ಲಾರಿ ಚಾಲಕರು ರೈತರಿಂದ ಯಾವುದೇ ಹಣ ಪಡೆಯುವಂತಿಲ್ಲ. ಗ್ಯಾಂಗ್ಮನ್ಗಳು ಈ ಕುರಿತು ಅವರಿಗೆ ಸೂಚನೆ ನೀಡಬೇಕು. ಸಾಗಣೆ ವೆಚ್ಚ ಭರಿಸುವುದಲ್ಲದೇ ರೈತರಿಂದ ಬಾಟ ಕೇಳಬಾರದು’ ಎಂದರು.</p>.<p>‘ಕಬ್ಬು ಕಟಾವು ಮಾಡುವಾಗ ಯಾವುದೇ ರೀತಿಯಿಂದ ತಾರತಮ್ಯ ಮಾಡಬಾರದು. 12 ರಿಂದ 14 ತಿಂಗಳ ಆದ್ಯತೆ ಮೇರೆಗೆ ಕಟಾವು ಮಾಡಬೇಕು. ಕಬ್ಬು ಪೂರೈಕೆಯಾದ 14 ದಿನಗಳೊಳಗೆ ರೈತರಿಗೆ ನ್ಯಾಯಯುತ ದರ (ಎಫ್ಆರ್ಪಿ) ಪಾವತಿಯಾಗಬೇಕು. ಈ ಬಗ್ಗೆ ಕಾರ್ಖಾನೆ ಅಧಿಕಾರಿಗಳು ಹೆಚ್ಚು ನಿಗಾ ವಹಿಸಬೇಕು. ಪ್ರತಿ ಬಾರಿ ಕಬ್ಬಿನ ಹಣ ಪಾವತಿಸುವಲ್ಲಿ ಕಾರ್ಖಾನೆ ಮಾಲೀಕರು ತಡ ಮಾಡುತ್ತಿದ್ದಾರೆ. ಈ ಬಾರಿ ರೈತರು ಸಂಕಷ್ಟದಲ್ಲಿದ್ದು ನಿಯಮಾನುಸಾರ 14 ದಿನದೊಳಗೆ ಬಾಕಿ ಪಾವತಿ ಮಾಡಬೇಕು’ ಎಂದು ಸೂಚಿಸಿದರು.</p>.<p>‘ಕಬ್ಬು ಕಡಿಯಲು ಬರುವ ಕಾರ್ಮಿಕರಿಗೆ ಸೂಕ್ತ ರಕ್ಷಣೆ ನೀಡಬೇಕು. ಅನಧಿಕೃತ ಚಟುವಟಿಕೆಗಳನ್ನು ತಕ್ಷಣದಿಂದಲೇ ಸಂಪೂರ್ಣವಾಗಿ ಅಂತ್ಯಗೊಳಿಸಬೇಕು. ಮೀಸಲು ಪ್ರದೇಶದಲ್ಲಿ ಲಭ್ಯವಿರುವ ಕಬ್ಬನ್ನು ಸಕಾಲದಲ್ಲಿ ಸಾಗಾಣಿಕೆ ಮಾಡಲು ಕ್ರಮವಹಿಸಬೇಕು. ರೈತರು ನೋಂದಣಿ ಮಾಡಿಸಿಕೊಂಡಿರುವ ಮಾಹಿತಿಯನ್ನು ಆಧರಿಸಿ ಕಬ್ಬು ಕಟಾವಿಗೆ ಮುಂದಾಗಬೇಕು. ರೈತಸಂಪರ್ಕ ಕೇಂದ್ರ , ಗ್ರಾಮ ಪಂಚಾಯತಿ, ಹಾಲಿನ ಡೇರಿ ವಿಭಾಗೀಯ ಕಚೇರಿಗಳಲ್ಲಿ ಪ್ರತಿ ತಿಂಗಳ ವಿವರ ಪ್ರದರ್ಶನ ಮಾಡಬೇಕು’ ಎಂದು ಸೂಚಿಸಿದರು.</p>.<p>ಆಹಾರ ಇಲಾಖೆ ಜಂಟಿ ನಿರ್ದೇಶಕ ಶಿವಣ್ಣ , ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಬಿ.ಎಸ್. ಚಂದ್ರಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>